• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಂಜಾಬಿ ಯುವತಿ ತಲೆ ಕೆಡಿಸಿ ಇಸ್ಲಾಂಗೆ ಮತಾಂತರಿಸಿ ಭಯೋತ್ಪಾದನೆಗೆ ದೂಡಿದ ಉಗ್ರರು

TNN Correspondent Posted On January 27, 2018
0


0
Shares
  • Share On Facebook
  • Tweet It

ಇಂಗ್ಲೆಂಡ್: ಬ್ರಿಟನ್ ನಲ್ಲಿ ವಾಸಿಸುತ್ತಿರುವ ಪಂಜಾಬ್ ಮೂಲದ ಯುವತಿಯೊಬ್ಬಳ ಬ್ರೈನ್ ವಾಶ ಮಾಡಿರುವ ಉಗ್ರರು ಅವಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಿ, ಐಸಿಸ್ ಪರ ಹೋರಾಟಕ್ಕೆ ಧುಮುಕುವಂತೆ ಪ್ರೇರಣೆ ನೀಡಿದ್ದಾರೆ. ಇದೀಗ ಯುವತಿಯನ್ನು ಅನುಮಾನದ ಆಧಾರದ ಮೇಲೆ  ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹಲವು ಆಘಾತಕಾರಿ ಸತ್ಯಗಳು ಹೊರ ಬಿದ್ದಿವೆ.

18 ವರ್ಷದ ಸಂದೀಪ್ ಸರ್ಮಾ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಮುಸ್ಲಿಂ ಮೂಲಭೂತವಾದಿಗಳ ಜಾಲಕ್ಕೆ ಮರುಳಾಗಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾಳೆ. ಅವಳ ವಿರುದ್ಧ ಇಸ್ಲಾಂ ಮೂಲಭೂತವಾದಿ ಉಗ್ರ ಸಂಘಟನೆಗಳೊಂದಿಗೆ ಸೇರಿ ಹಿಂಸಾತ್ಮಕ ಕೃತ್ಯ ನಡೆಸುವ ಕುರಿತು ಪ್ರಕರಣ ದಾಖಲಾಗಿದೆ.

ಬರ್ಮಿಂಗಮ್ ಕ್ರೌನ್ ಕೋರ್ಟ್ ನಲ್ಲಿ ಯುವತಿಯ ವಿಚಾರಣೆ ನಡೆಸಿದಾಗ ‘2017ರ ಜೂನ್ ನಲ್ಲೆ ಸಿರಿಯಾಗೆ ಹೋಗಲು ಯೋಜನೆ ರೂಪಿಸಿದ್ದಳು ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳು, ಅವಳ ಸಂದೇಶ ವಿನಿಮಯಗಳ ತನಿಖೆ ನಡೆಸಿದಾಗ ‘ಇಸ್ಲಾಂ ರಾಷ್ಟ್ರಕ್ಕಾಗಿ ಸಾಯಲು ಸಿರಿಯಾಗೆ ಹೋಗುತ್ತಿದ್ದೇನೆ ಎಂದು ಘೋಷಿಸಿಕೊಂಡಿರುವುದು ಬಹಿರಂಗವಾಗಿದೆ.

ಐಸಿಸ್ ಉಗ್ರರಿಂದ ಸಂಕಷ್ಟಕ್ಕಿಡಾದವರಿಗೆ ಸೇವೆ ಮಾಡಲು ಸಿರಿಯಾಗೆ ಹೋಗಲು ನಿರ್ಧರಿಸಿದ್ದೇ’ ಎಂದು ಹೇಳಿದ್ದಾಳೆ. ಆದರೆ ಯುವತಿ ಬಳಸಿದ ಸಾಮಾಜಿಕ ಜಾಲತಾಣಗಳು, ಸಂದೇಶಗಳು ಬೇರೆಯದ್ದೇ ಕಥೆ ಹೇಳುತ್ತಿವೆ.

ಪಾಸ್ ಪೋರ್ಟ್ ಗೆ ನಕಲಿ ದಾಖಲೆ ನೀಡಿ ಸಿಕ್ಕಿ ಬಿದ್ದಳು

15ನೇ ವಯಸ್ಸಿನವಳಾಗಿದ್ದಲೇ ಯುವತಿ ಮುಸ್ಲಿಂ ಮೂಲಭೂತವಾದಿ ಸಿದ್ಧಾಂತಕ್ಕೆ ಬಲಿಯಾಗಿದ್ದರಿಂದ ಅವಳ ಪಾಸಪೋರ್ಟ್ ನ್ನು ಯುವತಿ ತಂದೆಯೇ ಪೊಲೀಸರಿಗೆ ನೀಡಿದ್ದರು. ನಂತರ ಯುವತಿ ನಕಲಿ ದಾಖಲೆ ನೀಡಿ, ಸಿರಿಯಾಗೆ ತೆರಳಲು ಪಾಸ್ ಪೋರ್ಟ್ ಪಡೆಯಲು ಯತ್ನಿಸಿದಾಗ, ಪೊಲೀಸರ ಅತಿಥಿಯಾಗಿದ್ದಾಳೆ. ಯುವತಿ ಮೊಬೈಲ್ ನಲ್ಲಿ ಐಸಿಸ್ ನಡೆಸುವ ಕ್ರೌರ್ಯದ ವಿಡಿಯೋಗಳು, ಸಿರಿಯಾಗೆ ತೆರಳು ನಡೆಸಿರುವ ಸಿದ್ಧತೆಗಳ ಕುರಿತು ದಾಖಲೆ ದೊರೆತಿವೆ. ಯುವತಿಗೆ ವಿರುದ್ಧ ಭಯೋತ್ಪಾದಕ ಕೃತ್ಯಕ್ಕೆ ಪ್ರಯತ್ನ ಎಂದು ದೂರು ದಾಖಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search