• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಣಸೂರಿನಲ್ಲಿ ಹಾರಿತು ಭಗವಾ ಧ್ವಜ, ಹನುಮ ಜಯಂತಿ ಅದ್ದೂರಿ ಮೆರವಣಿಗೆ ಆರಂಭ

TNN Correspondent Posted On January 27, 2018
0


0
Shares
  • Share On Facebook
  • Tweet It

ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುತಂತ್ರದಿಂದ ಯುವ ಸಮುದಾಯಕ್ಕೆ ಮಾದರಿಯಾಗಿರುವ, ರಾಮ ಭಕ್ತ ಹನುಮ ಜಯಂತಿ ಆಚರಣೆಗೆ ವಿರೋಧಿಸಿ ತಡೆ ಒಡ್ಡಲಾಗಿತ್ತು. ಸಿದ್ದರಾಮಯ್ಯನವರ ಸರ್ಕಾರ ಇಡೀ ಆಡಳಿತ ವ್ಯವಸ್ಥೆಯನ್ನು ದುರುಪಯೋಗ ಪಡೆಸಿಕೊಂಡು ಹನುಮ ಜಯಂತಿ ಮೆರವಣಿಗೆಗೆ ತಡೆ ಒಡ್ಡಿತು.

ಇಂದು ನ್ಯಾಯಕ್ಕೆ ಜಯ ದೊರೆತ್ತಿದ್ದು, ನೀತಿ ನಿಯಮಗಳ ಪ್ರಕಾರವೇ ಜಿಲ್ಲಾಧಿಕಾರಿ ರಂದೀಪ್ ಅನುಮತಿಯಲ್ಲೇ ಹುಣಸೂರಿನಲ್ಲಿ ಅದ್ದೂರಿ ಹನುಮ ಜಯಂತಿ ಮೆರವಣಿಗೆ ಆರಂಭವಾಗಿದೆ. ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಸಹಸ್ರಾರು ಹನುಮ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿ, ರಾಮ, ಹನುಮ ಘೋಷಣೆಗಳನ್ನು ಕೂಗುತ್ತಾ  ಭಕ್ತಿ ಪರವಶರಾಗಿದ್ದಾರೆ.

ಹುಣಸೂರಿನ ಕಲ್ಕುಣಿಕೆ ರಸ್ತೆಯ ತುಂಬ ಸುಮಾರು 20 ಸಾವಿರ ಭಕ್ತರು ಭಾಗವಹಿಸಿದ್ದು, ತಮಟೆ, ನಗಾರಿ, ಹನುಮನ ಜೈಕಾರದ ಮಧ್ಯೆ ರಂಗನಾಥ ಬಡಾವಣೆ ಮಿಂದೆದ್ದಿದೆ. ಶ್ರೀರಾಮನ ಜಪ ಮಾಡುತ್ತಾ ಅದ್ದೂರಿ ಮೆರವಣಿಗೆಗೆ ಚಾಲನೆ ದೊರೆತಿದ್ದು, ಶಾಂತಿಯುತವಾಗಿ ಮೆರವಣಿಗೆ ನಡೆಯಿತು.

ಗೆದ್ದ ಹನುಮ ಭಕ್ತರ ಶಕ್ತಿ, ಸೋತ ಸಿದ್ದರಾಮಯ್ಯರ ಷಡ್ಯಂತ್ರ

ಹುಣಸೂರಿನಲ್ಲಿ ಹಿಂದೆಯೇ ಹನುಮ ಜಯಂತಿ ಆಚರಣೆಗೆ ಸಿಎಂ ಸಿದ್ದರಾಮಯ್ಯ ಹಿಂಬಾಗಿಲ ಮೂಲಕ ತಡೆ ಒಡ್ಡಿದ್ದರು. ಶಾಂತಿಗೆ ಭಂಗ ಎಂದು ನೆಪ ಹೇಳಿ ಜನರ ಭಾವನೆಗಳಿಗೆ ಘಾಸಿ ಮಾಡಿದ್ದರು. ಅನುಮತಿ ಪಡೆದರೂ ಕೂಡ ಆಡಳಿತಾಂಗವನ್ನು ದುರುಪಯೋಗ ಪಡೆಸಿಕೊಂಡು ಸಿದ್ದರಾಮಯ್ಯ ಸರ್ಕಾರ ಹನುಮ ಜಯಂತಿ ಆಚರಣೆಗೆ ತಡೆ ಒಡ್ಡಿತ್ತು. ಇದರಿಂದ ಸಹಸ್ರಾರು ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿತ್ತು. ಸಂಸದ ಪ್ರತಾಪ ಸಿಂಹರನ್ನು ಅಸಂವಿಧಾನಿಕವಾಗಿ ನಡೆಸಿಕೊಂಡು ಸಿದ್ದರಾಮಯ್ಯ ಸರ್ಕಾರ ಧರ್ಪ ಮೆರೆದಿತ್ತು. ಆದರೆ ಇದೀಗ ಸೂಕ್ತ ಅನುಮತಿಯೊಂದಿಗೆ ಹನುಮ ಜಯಂತಿ ಮುಂದುವರಿದಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search