• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹುಣಸೂರಿನಲ್ಲಿ ಹಾರಿತು ಭಗವಾ ಧ್ವಜ, ಹನುಮ ಜಯಂತಿ ಅದ್ದೂರಿ ಮೆರವಣಿಗೆ ಆರಂಭ

TNN Correspondent Posted On January 27, 2018


  • Share On Facebook
  • Tweet It

ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುತಂತ್ರದಿಂದ ಯುವ ಸಮುದಾಯಕ್ಕೆ ಮಾದರಿಯಾಗಿರುವ, ರಾಮ ಭಕ್ತ ಹನುಮ ಜಯಂತಿ ಆಚರಣೆಗೆ ವಿರೋಧಿಸಿ ತಡೆ ಒಡ್ಡಲಾಗಿತ್ತು. ಸಿದ್ದರಾಮಯ್ಯನವರ ಸರ್ಕಾರ ಇಡೀ ಆಡಳಿತ ವ್ಯವಸ್ಥೆಯನ್ನು ದುರುಪಯೋಗ ಪಡೆಸಿಕೊಂಡು ಹನುಮ ಜಯಂತಿ ಮೆರವಣಿಗೆಗೆ ತಡೆ ಒಡ್ಡಿತು.

ಇಂದು ನ್ಯಾಯಕ್ಕೆ ಜಯ ದೊರೆತ್ತಿದ್ದು, ನೀತಿ ನಿಯಮಗಳ ಪ್ರಕಾರವೇ ಜಿಲ್ಲಾಧಿಕಾರಿ ರಂದೀಪ್ ಅನುಮತಿಯಲ್ಲೇ ಹುಣಸೂರಿನಲ್ಲಿ ಅದ್ದೂರಿ ಹನುಮ ಜಯಂತಿ ಮೆರವಣಿಗೆ ಆರಂಭವಾಗಿದೆ. ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಸಹಸ್ರಾರು ಹನುಮ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿ, ರಾಮ, ಹನುಮ ಘೋಷಣೆಗಳನ್ನು ಕೂಗುತ್ತಾ  ಭಕ್ತಿ ಪರವಶರಾಗಿದ್ದಾರೆ.

ಹುಣಸೂರಿನ ಕಲ್ಕುಣಿಕೆ ರಸ್ತೆಯ ತುಂಬ ಸುಮಾರು 20 ಸಾವಿರ ಭಕ್ತರು ಭಾಗವಹಿಸಿದ್ದು, ತಮಟೆ, ನಗಾರಿ, ಹನುಮನ ಜೈಕಾರದ ಮಧ್ಯೆ ರಂಗನಾಥ ಬಡಾವಣೆ ಮಿಂದೆದ್ದಿದೆ. ಶ್ರೀರಾಮನ ಜಪ ಮಾಡುತ್ತಾ ಅದ್ದೂರಿ ಮೆರವಣಿಗೆಗೆ ಚಾಲನೆ ದೊರೆತಿದ್ದು, ಶಾಂತಿಯುತವಾಗಿ ಮೆರವಣಿಗೆ ನಡೆಯಿತು.

ಗೆದ್ದ ಹನುಮ ಭಕ್ತರ ಶಕ್ತಿ, ಸೋತ ಸಿದ್ದರಾಮಯ್ಯರ ಷಡ್ಯಂತ್ರ

ಹುಣಸೂರಿನಲ್ಲಿ ಹಿಂದೆಯೇ ಹನುಮ ಜಯಂತಿ ಆಚರಣೆಗೆ ಸಿಎಂ ಸಿದ್ದರಾಮಯ್ಯ ಹಿಂಬಾಗಿಲ ಮೂಲಕ ತಡೆ ಒಡ್ಡಿದ್ದರು. ಶಾಂತಿಗೆ ಭಂಗ ಎಂದು ನೆಪ ಹೇಳಿ ಜನರ ಭಾವನೆಗಳಿಗೆ ಘಾಸಿ ಮಾಡಿದ್ದರು. ಅನುಮತಿ ಪಡೆದರೂ ಕೂಡ ಆಡಳಿತಾಂಗವನ್ನು ದುರುಪಯೋಗ ಪಡೆಸಿಕೊಂಡು ಸಿದ್ದರಾಮಯ್ಯ ಸರ್ಕಾರ ಹನುಮ ಜಯಂತಿ ಆಚರಣೆಗೆ ತಡೆ ಒಡ್ಡಿತ್ತು. ಇದರಿಂದ ಸಹಸ್ರಾರು ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿತ್ತು. ಸಂಸದ ಪ್ರತಾಪ ಸಿಂಹರನ್ನು ಅಸಂವಿಧಾನಿಕವಾಗಿ ನಡೆಸಿಕೊಂಡು ಸಿದ್ದರಾಮಯ್ಯ ಸರ್ಕಾರ ಧರ್ಪ ಮೆರೆದಿತ್ತು. ಆದರೆ ಇದೀಗ ಸೂಕ್ತ ಅನುಮತಿಯೊಂದಿಗೆ ಹನುಮ ಜಯಂತಿ ಮುಂದುವರಿದಿದೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search