• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಣಸೂರಿನಲ್ಲಿ ಹಾರಿತು ಭಗವಾ ಧ್ವಜ, ಹನುಮ ಜಯಂತಿ ಅದ್ದೂರಿ ಮೆರವಣಿಗೆ ಆರಂಭ

TNN Correspondent Posted On January 27, 2018
0


0
Shares
  • Share On Facebook
  • Tweet It

ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುತಂತ್ರದಿಂದ ಯುವ ಸಮುದಾಯಕ್ಕೆ ಮಾದರಿಯಾಗಿರುವ, ರಾಮ ಭಕ್ತ ಹನುಮ ಜಯಂತಿ ಆಚರಣೆಗೆ ವಿರೋಧಿಸಿ ತಡೆ ಒಡ್ಡಲಾಗಿತ್ತು. ಸಿದ್ದರಾಮಯ್ಯನವರ ಸರ್ಕಾರ ಇಡೀ ಆಡಳಿತ ವ್ಯವಸ್ಥೆಯನ್ನು ದುರುಪಯೋಗ ಪಡೆಸಿಕೊಂಡು ಹನುಮ ಜಯಂತಿ ಮೆರವಣಿಗೆಗೆ ತಡೆ ಒಡ್ಡಿತು.

ಇಂದು ನ್ಯಾಯಕ್ಕೆ ಜಯ ದೊರೆತ್ತಿದ್ದು, ನೀತಿ ನಿಯಮಗಳ ಪ್ರಕಾರವೇ ಜಿಲ್ಲಾಧಿಕಾರಿ ರಂದೀಪ್ ಅನುಮತಿಯಲ್ಲೇ ಹುಣಸೂರಿನಲ್ಲಿ ಅದ್ದೂರಿ ಹನುಮ ಜಯಂತಿ ಮೆರವಣಿಗೆ ಆರಂಭವಾಗಿದೆ. ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಸಹಸ್ರಾರು ಹನುಮ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿ, ರಾಮ, ಹನುಮ ಘೋಷಣೆಗಳನ್ನು ಕೂಗುತ್ತಾ  ಭಕ್ತಿ ಪರವಶರಾಗಿದ್ದಾರೆ.

ಹುಣಸೂರಿನ ಕಲ್ಕುಣಿಕೆ ರಸ್ತೆಯ ತುಂಬ ಸುಮಾರು 20 ಸಾವಿರ ಭಕ್ತರು ಭಾಗವಹಿಸಿದ್ದು, ತಮಟೆ, ನಗಾರಿ, ಹನುಮನ ಜೈಕಾರದ ಮಧ್ಯೆ ರಂಗನಾಥ ಬಡಾವಣೆ ಮಿಂದೆದ್ದಿದೆ. ಶ್ರೀರಾಮನ ಜಪ ಮಾಡುತ್ತಾ ಅದ್ದೂರಿ ಮೆರವಣಿಗೆಗೆ ಚಾಲನೆ ದೊರೆತಿದ್ದು, ಶಾಂತಿಯುತವಾಗಿ ಮೆರವಣಿಗೆ ನಡೆಯಿತು.

ಗೆದ್ದ ಹನುಮ ಭಕ್ತರ ಶಕ್ತಿ, ಸೋತ ಸಿದ್ದರಾಮಯ್ಯರ ಷಡ್ಯಂತ್ರ

ಹುಣಸೂರಿನಲ್ಲಿ ಹಿಂದೆಯೇ ಹನುಮ ಜಯಂತಿ ಆಚರಣೆಗೆ ಸಿಎಂ ಸಿದ್ದರಾಮಯ್ಯ ಹಿಂಬಾಗಿಲ ಮೂಲಕ ತಡೆ ಒಡ್ಡಿದ್ದರು. ಶಾಂತಿಗೆ ಭಂಗ ಎಂದು ನೆಪ ಹೇಳಿ ಜನರ ಭಾವನೆಗಳಿಗೆ ಘಾಸಿ ಮಾಡಿದ್ದರು. ಅನುಮತಿ ಪಡೆದರೂ ಕೂಡ ಆಡಳಿತಾಂಗವನ್ನು ದುರುಪಯೋಗ ಪಡೆಸಿಕೊಂಡು ಸಿದ್ದರಾಮಯ್ಯ ಸರ್ಕಾರ ಹನುಮ ಜಯಂತಿ ಆಚರಣೆಗೆ ತಡೆ ಒಡ್ಡಿತ್ತು. ಇದರಿಂದ ಸಹಸ್ರಾರು ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿತ್ತು. ಸಂಸದ ಪ್ರತಾಪ ಸಿಂಹರನ್ನು ಅಸಂವಿಧಾನಿಕವಾಗಿ ನಡೆಸಿಕೊಂಡು ಸಿದ್ದರಾಮಯ್ಯ ಸರ್ಕಾರ ಧರ್ಪ ಮೆರೆದಿತ್ತು. ಆದರೆ ಇದೀಗ ಸೂಕ್ತ ಅನುಮತಿಯೊಂದಿಗೆ ಹನುಮ ಜಯಂತಿ ಮುಂದುವರಿದಿದೆ.

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search