• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವ ಆ ರಾಷ್ಟ್ರ ಯಾವುದು ಗೊತ್ತೇ?

TNN Correspondent Posted On January 28, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದಲ್ಲೇ ಭಾರತದ ಚಹರೆಯನ್ನು ಬದಲಾಯಿಸಿ, ಭಾರತವೊಂದು ಬಲಿಷ್ಠ ರಾಷ್ಟ್ರ, ಭಾರತ ವಿಶ್ವಕ್ಕೆ ಸೆಡ್ಡು ಹೊಡೆಯಬಲ್ಲ ರಾಷ್ಟ್ರ ಎಂಬ ಸಂದೇಶವನ್ನು ಸಾರಿದವರು ಪ್ರಧಾನಿ ನರೇಂದ್ರ ಮೋದಿ. ಇದೀಗ ಮೋದಿ ಭಾರತದ ಇತಿಹಾಸದಲ್ಲೇ ಪ್ರಧಾನಿಗಳ್ಯಾರು ಭೇಟಿ ನೀಡದ ದೇಶಕ್ಕೆ ಭೇಟಿ ನೀಡುವ ಮೂಲಕ ಮತ್ತೊಮ್ಮೆ ವಿಶ್ವದ ಗಮನ ಸೆಳೆಯುತ್ತಿದ್ದಾರೆ.

ಫೆ.9ರಿಂದ 13 ರವರೆಗೆ ಪ್ರಧಾನಿ ನರೇಂದ್ರ ಯುಎಇ, ಒಮೆನ್ ಮತ್ತು ಪ್ಯಾಲೆಸ್ತಿನ್ ಗೆ ಭೇಟಿ ನೀಡಲಿದ್ದಾರೆ. ಅದರಲ್ಲೂ ಪ್ಯಾಲೆಸ್ತೀನ್ ಗೆ ಮೊದಲ ಭಾರಿಗೆ ಭಾರತದ ಪ್ರಧಾನಿಯೊಬ್ಬರು  ಪ್ರಥಮ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗೆ ಪ್ಯಾಲೆಸ್ತೀನ್ ನ ಪ್ರಬಲ ವಿರೋಧಿ ರಾಷ್ಟ್ರ ಇಸ್ರೇಲ್ ಪ್ರಧಾನಿ ನೇತ್ಯಾನುಹ ಭಾರತಕ್ಕೆ ಭೇಟಿ ನೀಡಿ, ಬಾಂದವ್ಯಕ್ಕೆ ಹೊಸ ಪರಿಭಾಷೆ ನೀಡಿದ್ದರು. ಆದರೆ ಮೋದಿ ಇಸ್ರೇಲ್ ವೈರಿ ರಾಷ್ಟ್ರ ಪ್ಯಾಲೆಸ್ತೀನ್ ಗೆ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ.

ದುಬೈ ನಲ್ಲಿ ನಡೆಯಲಿರುವ 6ನೇ ವಿಶ್ವ ಸರ್ಕಾರಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ ಯುಎಇ ಮತ್ತು ಒಮೆನ್ ನಲ್ಲಿರುವ ಆನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಶ್ವದ ಗಮನ ಸೆಳೆಯಲಿದೆ ಪ್ಯಾಲೆಸ್ತೀನ್ ಭೇಟಿ

ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ ಪ್ಯಾಲೆಸ್ತೀನ್ ನ ವಿರೋಧಿ ರಾಷ್ಟ್ರ ಇಸ್ರೇಲ್ ಪ್ರಧಾನಿ ನೆತ್ಯಾನುಹ್ ಅವರು ಭೇಟಿ ನೀಡಿದ ಕೆಲವೇ ದಿನಗಳಲ್ಲಿ ಮೋದಿ ಪ್ಯಾಲೆಸ್ತೀನ್ ಭೇಟಿ ನೀಡುತ್ತಿರುವುದು ವಿಶ್ವದ ಗಮನ ಸೆಳೆದಿದ್ದು, ತೀವ್ರ ಕುತೂಹಲ ಮೂಡಿಸಿದೆ. 1980 ರಲ್ಲಿ ಪ್ಯಾಲೆಸ್ತೀನ್ ಒಂದು ಪ್ರತ್ಯೇಕ ರಾಷ್ಟ್ರ ಎಂಬ ವಾದಕ್ಕೆ ಭಾರತವೇ ಮೊದಲ ಭಾರಿಗೆ ಬೆಂಬಲ ವ್ಯಕ್ತಪಡಿಸಿತ್ತು. ಇತ್ತೀಚೆಗೆ ಜೇರುಸೆಲಂ ಇಸ್ರೇಲ್ ನ ರಾಜಧಾನಿ ಎಂಬ ಅಮೆರಿಕದ ವಾದಕ್ಕೆ ವಿರೋಧಿಸಿ, ಭಾರತ ಮತ ನೀಡಿತ್ತು. ಈ ಎಲ್ಲ ಘಟನೆಗಳು ಅತ್ತ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಎರಡರ ವಿಶ್ವಾಸವನ್ನು ಗಳಿಸುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search