• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವ ಆ ರಾಷ್ಟ್ರ ಯಾವುದು ಗೊತ್ತೇ?

TNN Correspondent Posted On January 28, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದಲ್ಲೇ ಭಾರತದ ಚಹರೆಯನ್ನು ಬದಲಾಯಿಸಿ, ಭಾರತವೊಂದು ಬಲಿಷ್ಠ ರಾಷ್ಟ್ರ, ಭಾರತ ವಿಶ್ವಕ್ಕೆ ಸೆಡ್ಡು ಹೊಡೆಯಬಲ್ಲ ರಾಷ್ಟ್ರ ಎಂಬ ಸಂದೇಶವನ್ನು ಸಾರಿದವರು ಪ್ರಧಾನಿ ನರೇಂದ್ರ ಮೋದಿ. ಇದೀಗ ಮೋದಿ ಭಾರತದ ಇತಿಹಾಸದಲ್ಲೇ ಪ್ರಧಾನಿಗಳ್ಯಾರು ಭೇಟಿ ನೀಡದ ದೇಶಕ್ಕೆ ಭೇಟಿ ನೀಡುವ ಮೂಲಕ ಮತ್ತೊಮ್ಮೆ ವಿಶ್ವದ ಗಮನ ಸೆಳೆಯುತ್ತಿದ್ದಾರೆ.

ಫೆ.9ರಿಂದ 13 ರವರೆಗೆ ಪ್ರಧಾನಿ ನರೇಂದ್ರ ಯುಎಇ, ಒಮೆನ್ ಮತ್ತು ಪ್ಯಾಲೆಸ್ತಿನ್ ಗೆ ಭೇಟಿ ನೀಡಲಿದ್ದಾರೆ. ಅದರಲ್ಲೂ ಪ್ಯಾಲೆಸ್ತೀನ್ ಗೆ ಮೊದಲ ಭಾರಿಗೆ ಭಾರತದ ಪ್ರಧಾನಿಯೊಬ್ಬರು  ಪ್ರಥಮ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗೆ ಪ್ಯಾಲೆಸ್ತೀನ್ ನ ಪ್ರಬಲ ವಿರೋಧಿ ರಾಷ್ಟ್ರ ಇಸ್ರೇಲ್ ಪ್ರಧಾನಿ ನೇತ್ಯಾನುಹ ಭಾರತಕ್ಕೆ ಭೇಟಿ ನೀಡಿ, ಬಾಂದವ್ಯಕ್ಕೆ ಹೊಸ ಪರಿಭಾಷೆ ನೀಡಿದ್ದರು. ಆದರೆ ಮೋದಿ ಇಸ್ರೇಲ್ ವೈರಿ ರಾಷ್ಟ್ರ ಪ್ಯಾಲೆಸ್ತೀನ್ ಗೆ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ.

ದುಬೈ ನಲ್ಲಿ ನಡೆಯಲಿರುವ 6ನೇ ವಿಶ್ವ ಸರ್ಕಾರಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ ಯುಎಇ ಮತ್ತು ಒಮೆನ್ ನಲ್ಲಿರುವ ಆನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಶ್ವದ ಗಮನ ಸೆಳೆಯಲಿದೆ ಪ್ಯಾಲೆಸ್ತೀನ್ ಭೇಟಿ

ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದ ಪ್ಯಾಲೆಸ್ತೀನ್ ನ ವಿರೋಧಿ ರಾಷ್ಟ್ರ ಇಸ್ರೇಲ್ ಪ್ರಧಾನಿ ನೆತ್ಯಾನುಹ್ ಅವರು ಭೇಟಿ ನೀಡಿದ ಕೆಲವೇ ದಿನಗಳಲ್ಲಿ ಮೋದಿ ಪ್ಯಾಲೆಸ್ತೀನ್ ಭೇಟಿ ನೀಡುತ್ತಿರುವುದು ವಿಶ್ವದ ಗಮನ ಸೆಳೆದಿದ್ದು, ತೀವ್ರ ಕುತೂಹಲ ಮೂಡಿಸಿದೆ. 1980 ರಲ್ಲಿ ಪ್ಯಾಲೆಸ್ತೀನ್ ಒಂದು ಪ್ರತ್ಯೇಕ ರಾಷ್ಟ್ರ ಎಂಬ ವಾದಕ್ಕೆ ಭಾರತವೇ ಮೊದಲ ಭಾರಿಗೆ ಬೆಂಬಲ ವ್ಯಕ್ತಪಡಿಸಿತ್ತು. ಇತ್ತೀಚೆಗೆ ಜೇರುಸೆಲಂ ಇಸ್ರೇಲ್ ನ ರಾಜಧಾನಿ ಎಂಬ ಅಮೆರಿಕದ ವಾದಕ್ಕೆ ವಿರೋಧಿಸಿ, ಭಾರತ ಮತ ನೀಡಿತ್ತು. ಈ ಎಲ್ಲ ಘಟನೆಗಳು ಅತ್ತ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಎರಡರ ವಿಶ್ವಾಸವನ್ನು ಗಳಿಸುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search