• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರಸ್ವತಿ ಪೂಜೆ ಮಾಡುತ್ತಿದ್ದ ಬಾಲಕಿ ಮೇಲೆ ನಾಲ್ವರು ಮುಸ್ಲಿಂ ಯುವಕರಿಂದ ಅತ್ಯಾಚಾರ, ಮೂವರ ಬಂಧನ!

TNN Correspondent Posted On January 28, 2018
0


0
Shares
  • Share On Facebook
  • Tweet It

ಡಿಸ್ಪುರ: ದೇಶದಲ್ಲಿ ಇಸ್ಲಾಂ ಧರ್ಮಕ್ಕೆ ಬಲವಂತದ ಮತಾಂತರ ಹಾಗೂ ಲವ್ ಜಿಹಾದ್ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ ಆಸ್ಸಾಂನಲ್ಲಿ ನಾಲ್ವರು ಮುಸ್ಲಿಂ ಯುವಕರು ಅಟ್ಟಹಾಸದ ಮೆರೆದಿದ್ದು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆಸ್ಸಾಂನ ದೇಖಿಯಾಜುಲಿ ಎಂಬ ಪ್ರದೇಶದಲ್ಲಿ 15 ವರ್ಷದ ಬಾಲಕಿ ತನ್ನ ಮುಸ್ಲಿಂ ಗೆಳೆಯನೊಂದಿಗೆ ಸರಸ್ವತಿ ಪೂಜೆ ನಡೆಯುವ ಸ್ಥಳಕ್ಕೆ ಹೋಗಿದ್ದಾಳೆ. ಆಗ ಬಾಲಕಿ ಪೂಜೆಯಲ್ಲಿ ಭಾಗವಹಿಸಿದ್ದು,ನಂತರ ಗೆಳೆಯನ ಜತೆ ಮತ್ತೆ ಮೂವರು ಸೇರಿ ಆಕೆಯನ್ನು ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ತಿಳಿದುಬಂದಿದೆ.

ಬಳಿಕ ಬಾಲಕಿಯನ್ನು ಮನೆಗೆ ಕಳುಹಿಸಿದ್ದು, ಬಾಲಕಿ ವರ್ತನೆ ಆಧರಿಸಿ ಪೋಷಕರು ವಿಚಾರಿಸಿದಾಗ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ನಂತರ ಬಾಲಕಿ ಪೋಷಕರು ದೇಖಿಯಾಜುಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರು ದಾಖಲಾಗುತ್ತಲೇ ತನಿಖೆ ಆರಂಭಿಸಿದ ಪೊಲೀಸರು ನಾಲ್ವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಇಂತಾಜುಲ್ ಅಮಿನ್, ಸಿರಾಜುಲ್ ಅಮಿನ್ ಹಾಗೂ ಅಮಿನ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಒಟ್ಟಿನಲ್ಲಿ ಗೆಳೆಯ ಎಂಬ ಕಾರಣಕ್ಕಾಗಿ ಪೂಜೆ ಜತೆ ತೆರಳಿದ್ದೇ ಬಾಲಕಿಯ ಭವಿಷ್ಯಕ್ಕೆ ಕಂಟಕವಾಗಿದ್ದು, ಪೋಷಕರು ಹಾಗೂ ಬಾಲಕಿ/ಯುವತಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search