• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೀಕೆಗೆ ಮಣಿದ ಸರ್ಕಾರ, ಮುಗ್ಧ ಅಲ್ಪಸಂಖ್ಯಾತರು ಎಂಬುದನ್ನು ಮುಗ್ಧ ಜನರು ಎಂದು ತಿದ್ದುಪಡಿ

TNN Correspondent Posted On January 28, 2018
0


0
Shares
  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಮಾಡಿಕೊಂಡ ಎಡವಟ್ಟುಗಳು ಒಂದೆರಡಲ್ಲ. ಮೊದಲು ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಉಗಿಸಿಕೊಂಡ ಬಳಿಕ ಯೋಜನೆ ಕೈಬಿಟ್ಟರು. ವಿಧಾನಸೌಧ ವಜ್ರ ಮಹೋತ್ಸವಕ್ಕೆ ಅಪಾರ ಹಣ ಖರ್ಚು ಮಾಡುವುದಾಗಿ ಘೋಷಿಸಿ, ಟೀಕೆಗಳು ವ್ಯಕ್ತವಾದ ಬಳಿಕ ಕಡಿಮೆ ಖರ್ಚಿನಲ್ಲಿ ಮಹೋತ್ಸವ ಆಚರಿಸಿದರು.

ಮೊದಲು ಹೊರಡಿಸಿದ ಸುತ್ತೋಲೆ

ಈಗ ಹಲವು ಗಲಾಟೆಗಳಲ್ಲಿ ಬರೀ ಅಲ್ಪಸಂಖ್ಯಾತರ ವಿರುದ್ಧವಷ್ಟೇ ದಾಖಲಾದ ಪ್ರಕರಣ ಕೈಬಿಡುವ ಸುತ್ತೋಲೆ ಹೊರಡಿಸಿ ಟೀಕೆಗೊಳಗಾದ ಬಳಿಕ ಮತ್ತೆ ತಮ್ಮ ತಪ್ಪು ತಿದ್ದಿಕೊಂಡಿದ್ದಾರೆ. ಆ ಮೂಲಕ ತಮ್ಮ ಸರ್ಕಾರ ಯೋಚನೆ ಮಾಡದೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಟಿಪ್ಪು ಜಯಂತಿ, ಕಾವೇರಿ ಗಲಾಟೆ ವೇಳೆ ಹಲವು ಅಲ್ಪಸಂಖ್ಯಾತರ ವಿರುದ್ಧದ ಪ್ರಕರಣ ಹಿಂಪಡೆಯುವ ಕುರಿತು ಸರ್ಕಾರ ಹೊರಡಿಸಿದ ಸುತ್ತೋಲೆಯನ್ನು ತಿದ್ದುಪಡಿ ಮಾಡಲಾಗಿದೆ. ಸುತ್ತೋಲೆಯಲ್ಲಿದ್ದ, “ಮುಗ್ಧ ಅಲ್ಪಸಂಖ್ಯಾತರು” ಎಂಬ ಪದವನ್ನು ಕಿತ್ತುಹಾಕಿ, “ಮುಗ್ಧ ಜನರು” ಎಂದು ಬದಲಾಯಿಸಿದ್ದಾರೆ.

ಆದರೆ ಮೊದಲು ಮುಖ್ಯಮಂತ್ರಿಯವರ ನಿರ್ಧಾರವನ್ನು ಬೆಂಬಲಿಸಿದ್ದ ಗೃಹಸಚಿವ ಕೆ.ಜೆ.ಜಾರ್ಜ್ ಅವರು ಈಗ ಯೂ ಟರ್ನ್ ತೆಗೆದುಕೊಂಡಿದ್ದು, “ಹಿಂದೆ ಕಣ್ತಪ್ಪಿನಿಂದ ಸುತ್ತೋಲೆಯಲ್ಲಿ ಮುಗ್ಧ ಅಲ್ಪಸಂಖ್ಯಾತರು ಎಂದು ಮುದ್ರಣವಾಗಿತ್ತು. ಈಗ ಸುತ್ತೋಲೆಯನ್ನು ತಿದ್ದುಪಡಿ ಮಾಡಲಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ ಮುಗ್ಧ ಜನರು ಎಂದು ಇರುವ ಸುತ್ತೋಲೆಯಲ್ಲಿ ಹಿಂದೂಗಳ ವಿರುದ್ಧದ ಪ್ರಕರಣಗಳನ್ನೂ ವಾಪಸ್ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತು ಸ್ಪಷ್ಟನೆ ಇಲ್ಲದಿರುವುದು ಅನುಮಾನ ಹುಟ್ಟಿಸಿದೆ. ಈ ಕುರಿತು ರಾಜ್ಯ ಸರ್ಕಾರವೇ ಮಾಹಿತಿ ನೀಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search