• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಟೀಕೆಗೆ ಮಣಿದ ಸರ್ಕಾರ, ಮುಗ್ಧ ಅಲ್ಪಸಂಖ್ಯಾತರು ಎಂಬುದನ್ನು ಮುಗ್ಧ ಜನರು ಎಂದು ತಿದ್ದುಪಡಿ

TNN Correspondent Posted On January 28, 2018


  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಮಾಡಿಕೊಂಡ ಎಡವಟ್ಟುಗಳು ಒಂದೆರಡಲ್ಲ. ಮೊದಲು ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಉಗಿಸಿಕೊಂಡ ಬಳಿಕ ಯೋಜನೆ ಕೈಬಿಟ್ಟರು. ವಿಧಾನಸೌಧ ವಜ್ರ ಮಹೋತ್ಸವಕ್ಕೆ ಅಪಾರ ಹಣ ಖರ್ಚು ಮಾಡುವುದಾಗಿ ಘೋಷಿಸಿ, ಟೀಕೆಗಳು ವ್ಯಕ್ತವಾದ ಬಳಿಕ ಕಡಿಮೆ ಖರ್ಚಿನಲ್ಲಿ ಮಹೋತ್ಸವ ಆಚರಿಸಿದರು.

ಮೊದಲು ಹೊರಡಿಸಿದ ಸುತ್ತೋಲೆ

ಈಗ ಹಲವು ಗಲಾಟೆಗಳಲ್ಲಿ ಬರೀ ಅಲ್ಪಸಂಖ್ಯಾತರ ವಿರುದ್ಧವಷ್ಟೇ ದಾಖಲಾದ ಪ್ರಕರಣ ಕೈಬಿಡುವ ಸುತ್ತೋಲೆ ಹೊರಡಿಸಿ ಟೀಕೆಗೊಳಗಾದ ಬಳಿಕ ಮತ್ತೆ ತಮ್ಮ ತಪ್ಪು ತಿದ್ದಿಕೊಂಡಿದ್ದಾರೆ. ಆ ಮೂಲಕ ತಮ್ಮ ಸರ್ಕಾರ ಯೋಚನೆ ಮಾಡದೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಟಿಪ್ಪು ಜಯಂತಿ, ಕಾವೇರಿ ಗಲಾಟೆ ವೇಳೆ ಹಲವು ಅಲ್ಪಸಂಖ್ಯಾತರ ವಿರುದ್ಧದ ಪ್ರಕರಣ ಹಿಂಪಡೆಯುವ ಕುರಿತು ಸರ್ಕಾರ ಹೊರಡಿಸಿದ ಸುತ್ತೋಲೆಯನ್ನು ತಿದ್ದುಪಡಿ ಮಾಡಲಾಗಿದೆ. ಸುತ್ತೋಲೆಯಲ್ಲಿದ್ದ, “ಮುಗ್ಧ ಅಲ್ಪಸಂಖ್ಯಾತರು” ಎಂಬ ಪದವನ್ನು ಕಿತ್ತುಹಾಕಿ, “ಮುಗ್ಧ ಜನರು” ಎಂದು ಬದಲಾಯಿಸಿದ್ದಾರೆ.

ಆದರೆ ಮೊದಲು ಮುಖ್ಯಮಂತ್ರಿಯವರ ನಿರ್ಧಾರವನ್ನು ಬೆಂಬಲಿಸಿದ್ದ ಗೃಹಸಚಿವ ಕೆ.ಜೆ.ಜಾರ್ಜ್ ಅವರು ಈಗ ಯೂ ಟರ್ನ್ ತೆಗೆದುಕೊಂಡಿದ್ದು, “ಹಿಂದೆ ಕಣ್ತಪ್ಪಿನಿಂದ ಸುತ್ತೋಲೆಯಲ್ಲಿ ಮುಗ್ಧ ಅಲ್ಪಸಂಖ್ಯಾತರು ಎಂದು ಮುದ್ರಣವಾಗಿತ್ತು. ಈಗ ಸುತ್ತೋಲೆಯನ್ನು ತಿದ್ದುಪಡಿ ಮಾಡಲಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ ಮುಗ್ಧ ಜನರು ಎಂದು ಇರುವ ಸುತ್ತೋಲೆಯಲ್ಲಿ ಹಿಂದೂಗಳ ವಿರುದ್ಧದ ಪ್ರಕರಣಗಳನ್ನೂ ವಾಪಸ್ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತು ಸ್ಪಷ್ಟನೆ ಇಲ್ಲದಿರುವುದು ಅನುಮಾನ ಹುಟ್ಟಿಸಿದೆ. ಈ ಕುರಿತು ರಾಜ್ಯ ಸರ್ಕಾರವೇ ಮಾಹಿತಿ ನೀಡಬೇಕಾಗಿದೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search