• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೀಕೆಗೆ ಮಣಿದ ಸರ್ಕಾರ, ಮುಗ್ಧ ಅಲ್ಪಸಂಖ್ಯಾತರು ಎಂಬುದನ್ನು ಮುಗ್ಧ ಜನರು ಎಂದು ತಿದ್ದುಪಡಿ

TNN Correspondent Posted On January 28, 2018
0


0
Shares
  • Share On Facebook
  • Tweet It

ಬೆಂಗಳೂರು: ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಬಳಿಕ ಮಾಡಿಕೊಂಡ ಎಡವಟ್ಟುಗಳು ಒಂದೆರಡಲ್ಲ. ಮೊದಲು ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿ ಉಗಿಸಿಕೊಂಡ ಬಳಿಕ ಯೋಜನೆ ಕೈಬಿಟ್ಟರು. ವಿಧಾನಸೌಧ ವಜ್ರ ಮಹೋತ್ಸವಕ್ಕೆ ಅಪಾರ ಹಣ ಖರ್ಚು ಮಾಡುವುದಾಗಿ ಘೋಷಿಸಿ, ಟೀಕೆಗಳು ವ್ಯಕ್ತವಾದ ಬಳಿಕ ಕಡಿಮೆ ಖರ್ಚಿನಲ್ಲಿ ಮಹೋತ್ಸವ ಆಚರಿಸಿದರು.

ಮೊದಲು ಹೊರಡಿಸಿದ ಸುತ್ತೋಲೆ

ಈಗ ಹಲವು ಗಲಾಟೆಗಳಲ್ಲಿ ಬರೀ ಅಲ್ಪಸಂಖ್ಯಾತರ ವಿರುದ್ಧವಷ್ಟೇ ದಾಖಲಾದ ಪ್ರಕರಣ ಕೈಬಿಡುವ ಸುತ್ತೋಲೆ ಹೊರಡಿಸಿ ಟೀಕೆಗೊಳಗಾದ ಬಳಿಕ ಮತ್ತೆ ತಮ್ಮ ತಪ್ಪು ತಿದ್ದಿಕೊಂಡಿದ್ದಾರೆ. ಆ ಮೂಲಕ ತಮ್ಮ ಸರ್ಕಾರ ಯೋಚನೆ ಮಾಡದೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಟಿಪ್ಪು ಜಯಂತಿ, ಕಾವೇರಿ ಗಲಾಟೆ ವೇಳೆ ಹಲವು ಅಲ್ಪಸಂಖ್ಯಾತರ ವಿರುದ್ಧದ ಪ್ರಕರಣ ಹಿಂಪಡೆಯುವ ಕುರಿತು ಸರ್ಕಾರ ಹೊರಡಿಸಿದ ಸುತ್ತೋಲೆಯನ್ನು ತಿದ್ದುಪಡಿ ಮಾಡಲಾಗಿದೆ. ಸುತ್ತೋಲೆಯಲ್ಲಿದ್ದ, “ಮುಗ್ಧ ಅಲ್ಪಸಂಖ್ಯಾತರು” ಎಂಬ ಪದವನ್ನು ಕಿತ್ತುಹಾಕಿ, “ಮುಗ್ಧ ಜನರು” ಎಂದು ಬದಲಾಯಿಸಿದ್ದಾರೆ.

ಆದರೆ ಮೊದಲು ಮುಖ್ಯಮಂತ್ರಿಯವರ ನಿರ್ಧಾರವನ್ನು ಬೆಂಬಲಿಸಿದ್ದ ಗೃಹಸಚಿವ ಕೆ.ಜೆ.ಜಾರ್ಜ್ ಅವರು ಈಗ ಯೂ ಟರ್ನ್ ತೆಗೆದುಕೊಂಡಿದ್ದು, “ಹಿಂದೆ ಕಣ್ತಪ್ಪಿನಿಂದ ಸುತ್ತೋಲೆಯಲ್ಲಿ ಮುಗ್ಧ ಅಲ್ಪಸಂಖ್ಯಾತರು ಎಂದು ಮುದ್ರಣವಾಗಿತ್ತು. ಈಗ ಸುತ್ತೋಲೆಯನ್ನು ತಿದ್ದುಪಡಿ ಮಾಡಲಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಆದರೆ ಮುಗ್ಧ ಜನರು ಎಂದು ಇರುವ ಸುತ್ತೋಲೆಯಲ್ಲಿ ಹಿಂದೂಗಳ ವಿರುದ್ಧದ ಪ್ರಕರಣಗಳನ್ನೂ ವಾಪಸ್ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತು ಸ್ಪಷ್ಟನೆ ಇಲ್ಲದಿರುವುದು ಅನುಮಾನ ಹುಟ್ಟಿಸಿದೆ. ಈ ಕುರಿತು ರಾಜ್ಯ ಸರ್ಕಾರವೇ ಮಾಹಿತಿ ನೀಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search