• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಾಂ ಅವರಲ್ಲಿದ್ದ ಸರಳತೆ ನರೇಂದ್ರ ಮೋದಿ ಅವರಲ್ಲಿ ಕಂಡೆ ಎಂದು ಹೇಳಿದ್ದು ಯಾರು ಬಲ್ಲಿರಾ?

TNN Correspondent Posted On January 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದೆರೇನೆ ಹಾಗೆ. ಅವರು ವಿಶ್ವದ ನಾಯಕರನ್ನೂ ಭಾರತದ ಗಣರಾಜ್ಯೋತ್ಸವಕ್ಕೆ ಕರೆಸಬಲ್ಲರು ಹಾಗೂ ಭಾರತದ ಸಾಮಾನ್ಯರೊಂದಿಗೆ ಸೇರಿ ಸಾಮಾನ್ಯರಾಗಿಯೂ ಬೆರೆಯಬಲ್ಲರು.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಈ ಮಾತು ನಿಜವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರೀಮ್ ಉಲ್ ಹಕ್ ಅವರೊಂದಿಗೆ ಸೆಲ್ಫೀ ತೆಗೆಸಿಕೊಂಡಿದ್ದು ದೇಶದ ಗಮನ ಸೆಳೆದಿದೆ.

ಅಷ್ಟೇ ಅಲ್ಲ, “ನಾನು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರಲ್ಲಿದ್ದ ಸರಳತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಕಂಡೆ” ಎಂದು ಕರೀಮ್ ಉಲ್ ಹಕ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಜನತೆಗೆ ಉಚಿತವಾಗಿ ಬೈಕ್ ಸೇವೆ ನೀಡುವ ಮೂಲಕ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿ ಸ್ವೀಕರಿಸಿದ ಬಳಿಕ ಕರೀಮ್ ಉಲ್ ಹಕ್ ಮೋದಿ ಜತೆ ಸೆಲ್ಫೀ ತೆಗೆಸಿಕೊಂಡ ನಂತರ ಈ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಾನು ಈಗೀಗ ಸ್ಮಾರ್ಟ್ ಫೋನ್ ಬಳಸುತ್ತಿದ್ದೇನೆ. ನನಗೆ ಇನ್ನೂ ಸರಿಯಾಗಿ ಸೆಲ್ಫೀ ತೆಗೆದುಕೊಳ್ಳಲು ಬರುವುದಿಲ್ಲ. ಆದರೂ ಮೋದಿ ಅವರ ಜತೆ ಒಂದು ಸೆಲ್ಫೀ ತೆಗೆದುಕೊಳ್ಳಲು ಬಯಸಿದೆ. ಆಗ ಪ್ರಧಾನಿಯವರು ಅದಕ್ಕೆ ಒಪ್ಪಿದ್ದಲ್ಲದೆ, ಸೆಲ್ಫೀ ಹೇಗೆ ತೆಗೆಯಬೇಕು ಎಂಬುದನ್ನು ಸಹ ಕಲಿಸಿದರು. ಇದಕ್ಕಿಂತ ಸರಳತೆ ಇನ್ನೇನು ಬೇಕು ಎಂದು ಕರೀಂ ಉಲ್ಲಾ ಶ್ಲಾಘಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search