• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಲಾಂ ಅವರಲ್ಲಿದ್ದ ಸರಳತೆ ನರೇಂದ್ರ ಮೋದಿ ಅವರಲ್ಲಿ ಕಂಡೆ ಎಂದು ಹೇಳಿದ್ದು ಯಾರು ಬಲ್ಲಿರಾ?

TNN Correspondent Posted On January 28, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದೆರೇನೆ ಹಾಗೆ. ಅವರು ವಿಶ್ವದ ನಾಯಕರನ್ನೂ ಭಾರತದ ಗಣರಾಜ್ಯೋತ್ಸವಕ್ಕೆ ಕರೆಸಬಲ್ಲರು ಹಾಗೂ ಭಾರತದ ಸಾಮಾನ್ಯರೊಂದಿಗೆ ಸೇರಿ ಸಾಮಾನ್ಯರಾಗಿಯೂ ಬೆರೆಯಬಲ್ಲರು.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಈ ಮಾತು ನಿಜವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರೀಮ್ ಉಲ್ ಹಕ್ ಅವರೊಂದಿಗೆ ಸೆಲ್ಫೀ ತೆಗೆಸಿಕೊಂಡಿದ್ದು ದೇಶದ ಗಮನ ಸೆಳೆದಿದೆ.

ಅಷ್ಟೇ ಅಲ್ಲ, “ನಾನು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರಲ್ಲಿದ್ದ ಸರಳತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಕಂಡೆ” ಎಂದು ಕರೀಮ್ ಉಲ್ ಹಕ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಜನತೆಗೆ ಉಚಿತವಾಗಿ ಬೈಕ್ ಸೇವೆ ನೀಡುವ ಮೂಲಕ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿ ಸ್ವೀಕರಿಸಿದ ಬಳಿಕ ಕರೀಮ್ ಉಲ್ ಹಕ್ ಮೋದಿ ಜತೆ ಸೆಲ್ಫೀ ತೆಗೆಸಿಕೊಂಡ ನಂತರ ಈ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಾನು ಈಗೀಗ ಸ್ಮಾರ್ಟ್ ಫೋನ್ ಬಳಸುತ್ತಿದ್ದೇನೆ. ನನಗೆ ಇನ್ನೂ ಸರಿಯಾಗಿ ಸೆಲ್ಫೀ ತೆಗೆದುಕೊಳ್ಳಲು ಬರುವುದಿಲ್ಲ. ಆದರೂ ಮೋದಿ ಅವರ ಜತೆ ಒಂದು ಸೆಲ್ಫೀ ತೆಗೆದುಕೊಳ್ಳಲು ಬಯಸಿದೆ. ಆಗ ಪ್ರಧಾನಿಯವರು ಅದಕ್ಕೆ ಒಪ್ಪಿದ್ದಲ್ಲದೆ, ಸೆಲ್ಫೀ ಹೇಗೆ ತೆಗೆಯಬೇಕು ಎಂಬುದನ್ನು ಸಹ ಕಲಿಸಿದರು. ಇದಕ್ಕಿಂತ ಸರಳತೆ ಇನ್ನೇನು ಬೇಕು ಎಂದು ಕರೀಂ ಉಲ್ಲಾ ಶ್ಲಾಘಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search