• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಣರಾಜ್ಯೋತ್ಸವದಂದು ಟಿಪ್ಪು ಸುಲ್ತಾನನ ಭಾವಚಿತ್ರ ಬಿಡುಗಡೆಗೊಳಿಸುವ ಅರವಿಂದ್ ಕೇಜ್ರಿವಾಲ್ ಗೆ ಏನೆನ್ನಬೇಕು?

TNN Correspondent Posted On January 29, 2018


  • Share On Facebook
  • Tweet It

ದೆಹಲಿ: ಅದಕ್ಕೆ ಇತಿಹಾಸವನ್ನೇ ಓದಬೇಕು ಎಂದಲ್ಲ, ಕಾಮನ್ ಸೆನ್ಸು. ಭಾರತದ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು 1857ರಲ್ಲಿ. ಟಿಪ್ಪು ಸುಲ್ತಾನ ಸತ್ತಿದ್ದು, 1799ರಲ್ಲಿ. ಇಷ್ಟಾದರೂ ಈ ಕೊಳಕು ಮನಸ್ಸಿನ ರಾಜಕಾರಣಿಗಳು ಮಾತ್ರ ಅಲ್ಪ ಸಂಖ್ಯಾತರ ಮತಕ್ಕಾಗಿ ಆತನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದೇ ಬಿಂಬಿಸಿ ಇತಿಹಾಸ ಕೊಲ್ಲುತ್ತಾರೆ.

ಈಗ ಇಂಥಾದ್ದೇ ಒಂದು ಪ್ರಮಾದವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಡಿದ್ದು, ಭಾರಿ ಟೀಕೆಗೊಳಗಾಗಿದ್ದಾರೆ.

ಗಣರಾಜ್ಯೋತ್ಸವದ ದಿನದಂದು ಸರ್ಕಾರದಿಂದ 70 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಬಿಡುಗಡೆಗೊಳಿಸಿದ್ದು, ಅವುಗಳನ್ನು ದೆಹಲಿ ವಿಧಾನಸಭೆಯಲ್ಲಿ ನೇತುಹಾಕಿದ್ದಾರೆ. ಅದರಲ್ಲಿ ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸೇರಿ ಹಲವು ವೀರ ಕಲಿಗಳ, ಸ್ವಾತಂತ್ರ್ಯಕ್ಕಾಗಿ ಪ್ರಾಣಬಿಟ್ಟವರ ಫೋಟೋಗಳಿವೆ. ಆದರೆ ಸಾಮ್ರಾಜ್ಯಕ್ಕಾಗಿ ಹೋರಾಡಿದ ಟಿಪ್ಪು ಸುಲ್ತಾನನ ಭಾವಚಿತ್ರವನ್ನು ಗೋಡೆಗೆ ನೇತುಹಾಕಿದ್ದು, ಅರವಿಂದ ಕೇಜ್ರಿವಾಲರ ಇತಿಹಾಸ ಜ್ಞಾನಶೂನ್ಯತೆ ಎದ್ದುಕಾಣುತ್ತಿದೆ.

ಇದಕ್ಕೆ ಬಿಜೆಪಿ ಮುಖಂಡರು ಬಹುವಾಗಿ ಟೀಕಿಸಿದ ಬಳಿಕವೂ ಪಾಠ ಕಲಿಯದ ಅರವಿಂದ ಕೇಜ್ರಿವಾಲ್ ತಮ್ಮ ಎಂದಿನ ಶೈಲಿಯಂತೆ “ಭಾರತ ತುಂಬ ಕಠಿಣವಾದ ಪರಿಸ್ಥಿತಿಯಲ್ಲಿ ಸ್ವಾತಂತ್ರ್ಯ ಗಳಿಸಿತು, ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ನಾವು ಸ್ವತಂತ್ರ್ಯವಾಗಿ ಇರಲಾರದಂಥ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಆದರೆ ಟಿಪ್ಪು ಸುಲ್ತಾನ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂಬುದು ಮಾತ್ರ ಈ ಕೇಜ್ರಿವಾಲ್, ಸಿದ್ದರಾಮಯ್ಯನವರಿಗೆ ಅರ್ಥವಾಗೋಲ್ಲ ಎಂದರೆ ಇವರಿಗೆ ಏನೆನ್ನಬೇಕು? ನಾಚಿಕೆಯಾಗಬೇಕು ಇವರಿಗೆ.

  • Share On Facebook
  • Tweet It


- Advertisement -


Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
Leave A Reply

  • Recent Posts

    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
  • Popular Posts

    • 1
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 2
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 3
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 4
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 5
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search