• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರವಾದಿ ಮೊಹಮ್ಮದರ ಕುರಿತು ಸಿನಿಮಾ ಮಾಡುವ ತಾಕತ್ತು ಸಂಜಯ್ ಲೀಲಾ ಬನ್ಸಾಲಿಗಿದೆಯಾ?

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ರಜಪೂತರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಪದ್ಮಾವತ್ ಸಿನಿಮಾ ಬಿಡುಗಡೆಗೆ ದೇಶಾದ್ಯಂತ ವಿರೋಧವಾದ ಬೆನ್ನಲ್ಲೇ ಚಿತ್ರ ಬಿಡುಗಡೆಯಾದರೂ ಆ ಚಿತ್ರದ ವಿರುದ್ಧ ಇರುವ ಆಕ್ರೋಶ ಮಾತ್ರ ತಣ್ಣಗಾಗಿಲ್ಲ.

ಸಂಜಯ್ ಲೀಲಾ ಹಿಂದೂಗಳು, ರಜಪೂತರನ್ನು ಗುರಿಯಾಗಿಸಿಕೊಂಡು ಸಿನಿಮಾ ಮಾಡುವ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ, ಕೇಂದ್ರ ಸಚಿವ ಗಿರಿರಾಜ್ ಸಿಂಗ್, “ರಾಣಿ ಪದ್ಮಾವತಿ ಬಗ್ಗೆ ಸಿನಿಮಾ ಮಾಡಿರುವ ಸಂಜಯ್ ಲೀಲಾ ಬನ್ಸಾಲಿ ಅಥವಾ ಯಾರಿಗೇ ಆದರೂ ಮುಸ್ಲಿಮರ ಧರ್ಮಗುರು ಪ್ರವಾದಿ ಮೊಹಮ್ಮದರ ಕುರಿತು ಸಿನಿಮಾ ಮಾಡುವ ಧೈರ್ಯವಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಪದ್ಮಾವತಿ (ಈಗ ಪದ್ಮಾವತ್) ಸಿನಿಮಾದ ಹೆಸರು ಘೋಷಣೆಯಾದ ಬಳಿಕವೇ ವಿರೋದ ವ್ಯಕ್ತವಾಗಿದೆ. ಸಿನಿಮಾ ಶೂಟಿಂಗ್ ಆರಂಭವಾದ ಬಳಿಕವಂತೂ ಪ್ರತಿಭಟನೆಗಳೇ ನಡೆದಿವೆ. ಆದರೂ ಸಂಜಯ್ ಲೀಲಾ ಬನ್ಸಾಳಿ ಸಿನಿಮಾ ಶೂಟಿಂಗ್ ಏಕೆ ಸ್ಥಗಿತಗೊಳಿಸಿಲ್ಲ ಎಂದು ಗಿರಿರಾಜ್ ಪ್ರಶ್ನಿಸಿದ್ದಾರೆ.

ಸಿನಿಮಾದಲ್ಲಿ ರಜಪೂತರ ರಾಣಿ ಪದ್ಮಾವತಿ ನೃತ್ಯ ಮಾಡುವುದನ್ನು ತೋರಿಸಲಾಗಿದೆ. ಆದರೆ ರಾಣಿ ಪದ್ಮಾವತಿ ಎಂದಾದರೂ ನೃತ್ಯ ಮಾಡಿದ್ದಳೇ? ಬನ್ಸಾಲಿ ಈ ಕುರಿತು ಏಕೆ ಸಿನಿಮಾ ಮಾಡಬೇಕು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇತಿಹಾಸಕಾರರನ್ನು ಅವರು ಹೇಗಿದ್ದರೋ ಹಾಗೆಯೇ ಚಿತ್ರೀಕರಿಸಬೇಕು. ಅದು ಬಿಟ್ಟು ಬೇಕಾಬಿಟ್ಟಿಯಾಗಿ ಚಿತ್ರಿಸಿದರೆ ಹೇಗೆ? ಮಹಾತ್ಮ ಗಾಂಧೀಜಿ ಕುರಿತು ಚಿತ್ರ ನಿರ್ಮಿಸಿ, ಸಿನಿಮಾದಲ್ಲಿ ಅವರು ನೃತ್ಯ ಮಾಡುವ ಕುರಿತು ಸೀನ್ ಇಟ್ಟರೆ ಹೇಗೆ? ಅದನ್ನು ಯಾರೂ ಕ್ಷಮಿಸುವುದಿಲ್ಲ ಎಂದು ಗಿರಿರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search