• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿ ಪರಿವರ್ತನಾ ಯಾತ್ರೆಯೇ ಮುಂದು!

TNN Correspondent Posted On January 29, 2018
0


0
Shares
  • Share On Facebook
  • Tweet It

ಬೆಂಗಳೂರು: ಚುನಾವಣೆ ಹಾಗೂ ಪ್ರಜಾಪ್ರಭುತ್ವ ದೃಷ್ಟಿಯಿಂದ ಯಾವುದೇ ಪಕ್ಷಗಳು ಚುನಾವಣೆ ಪೂರ್ವವಾಗಿ ಜನರ ಎದುರು ಹೋಗುವುದು ಒಳ್ಳೆಯದು. ಸರ್ಕಾರದ ವೈಫಲ್ಯ, ಸರ್ಕಾರದ ಸಾಧನೆ, ಪ್ರತಿಪಕ್ಷಗಳ ಹೋರಾಟ, ಜನರೊಂದಿಗೆ ಒಡನಾಟ, ಟೀಕೆ, ಸಮಾಲೋಚನೆಗಳೆಲ್ಲವೂ ಸರ್ಕಾರ ಹಾಗೂ ಪ್ರತಿಪಕ್ಷಗಳ ಬಂಡವಾಳ ಬಯಲಾಗಲು ಅನುಕೂಲ.

ಇದೇ ದಿಸೆಯಲ್ಲಿಯೇ ಕರ್ನಾಟಕದಲ್ಲಿ ಚುನಾವಣೆ ಪೂರ್ವವಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಲವು “ಯಾತ್ರೆ”ಗಳನ್ನು ಕೈಗೊಂಡಿದ್ದು, ಅವುಗಳಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯೇ ಮುಂದಿದೆ.

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮೊದಲು ಪರಿವರ್ತನಾ ಯಾತ್ರೆ ಕೈಗೊಂಡು ಅಪಾರ ಜನಬೆಂಬಲದೊಂದಿಗೆ ಯಶಸ್ವಿಯಾಗಿ ಮುಗಿಸಿದೆ. ಅಲ್ಲದೆ ರಾಜ್ಯದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಈ ಯಾತ್ರೆ ಸಂಚರಿಸಿದೆ ಎಂದು ಎಂಬ ಖ್ಯಾತಿಗೂ ಭಾಜನವಾಗಿದೆ.

ತುಮಕೂರಿನಿಂದ ಸಾಗಿದ ಬಿಜೆಪಿ ಪರಿವರ್ತನಾ ಯಾತ್ರೆ ಈಗ ಫೆಬ್ರವರಿ 4ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದ್ದು, ಈ ಅವಧಿಯಲ್ಲಿ ಯಡಿಯೂರಪ್ಪ ಅವರು 85 ದಿನಗಳವರೆಗೆ ಸಂಚರಿಸಿ, 185 ರ್ಯಾಲಿ ಏರ್ಪಡಿಸಿದ್ದಾರೆ. ಅಲ್ಲದೆ ರ್ಯಾಲಿ ಇದುವರೆಗೆ 10,500 ಕಿಲೋಮೀಟರ್ ವರೆಗೆ ಸಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ದೂರ ಸಾಗಿದ ಹಾಗೂ ಹೆಚ್ಚು ರ್ಯಾಲಿ ನಡೆಸಿದ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

ಕಾಂಗ್ರೆಸ್ ಸಹ ನವ ಕರ್ನಾಟಕ ನಿರ್ಮಾಣ ಯಾತ್ರೆ ಕೈಗೊಂಡಿದ್ದು ರಾಜ್ಯದಲ್ಲಿ ಕೇವಲ 30 ದಿನ ಸಂಚರಿಸಿ, 120 ರ್ಯಾಲಿಗಳನ್ನು ಮಾತ್ರ ಏರ್ಪಡಿಸಿ, ಯಾತ್ರೆಗೆ ಅಂತ್ಯ ಹಾಡಿದೆ. ಅತ್ತ ಜೆಡಿಎಸ್ ಸಹ ನವೆಂಬರ್ ನಿಂದ ರ್ಯಾಲಿಗಳನ್ನು ಏರ್ಪಡಿಸುತ್ತಿದೆಯಾದರೂ ಬಿಜೆಪಿಯಷ್ಟು ರ್ಯಾಲಿ ಆಯೋಜಿಸಿಲ್ಲ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search