• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿ ಪರಿವರ್ತನಾ ಯಾತ್ರೆಯೇ ಮುಂದು!

TNN Correspondent Posted On January 29, 2018
0


0
Shares
  • Share On Facebook
  • Tweet It

ಬೆಂಗಳೂರು: ಚುನಾವಣೆ ಹಾಗೂ ಪ್ರಜಾಪ್ರಭುತ್ವ ದೃಷ್ಟಿಯಿಂದ ಯಾವುದೇ ಪಕ್ಷಗಳು ಚುನಾವಣೆ ಪೂರ್ವವಾಗಿ ಜನರ ಎದುರು ಹೋಗುವುದು ಒಳ್ಳೆಯದು. ಸರ್ಕಾರದ ವೈಫಲ್ಯ, ಸರ್ಕಾರದ ಸಾಧನೆ, ಪ್ರತಿಪಕ್ಷಗಳ ಹೋರಾಟ, ಜನರೊಂದಿಗೆ ಒಡನಾಟ, ಟೀಕೆ, ಸಮಾಲೋಚನೆಗಳೆಲ್ಲವೂ ಸರ್ಕಾರ ಹಾಗೂ ಪ್ರತಿಪಕ್ಷಗಳ ಬಂಡವಾಳ ಬಯಲಾಗಲು ಅನುಕೂಲ.

ಇದೇ ದಿಸೆಯಲ್ಲಿಯೇ ಕರ್ನಾಟಕದಲ್ಲಿ ಚುನಾವಣೆ ಪೂರ್ವವಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಲವು “ಯಾತ್ರೆ”ಗಳನ್ನು ಕೈಗೊಂಡಿದ್ದು, ಅವುಗಳಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯೇ ಮುಂದಿದೆ.

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮೊದಲು ಪರಿವರ್ತನಾ ಯಾತ್ರೆ ಕೈಗೊಂಡು ಅಪಾರ ಜನಬೆಂಬಲದೊಂದಿಗೆ ಯಶಸ್ವಿಯಾಗಿ ಮುಗಿಸಿದೆ. ಅಲ್ಲದೆ ರಾಜ್ಯದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಈ ಯಾತ್ರೆ ಸಂಚರಿಸಿದೆ ಎಂದು ಎಂಬ ಖ್ಯಾತಿಗೂ ಭಾಜನವಾಗಿದೆ.

ತುಮಕೂರಿನಿಂದ ಸಾಗಿದ ಬಿಜೆಪಿ ಪರಿವರ್ತನಾ ಯಾತ್ರೆ ಈಗ ಫೆಬ್ರವರಿ 4ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದ್ದು, ಈ ಅವಧಿಯಲ್ಲಿ ಯಡಿಯೂರಪ್ಪ ಅವರು 85 ದಿನಗಳವರೆಗೆ ಸಂಚರಿಸಿ, 185 ರ್ಯಾಲಿ ಏರ್ಪಡಿಸಿದ್ದಾರೆ. ಅಲ್ಲದೆ ರ್ಯಾಲಿ ಇದುವರೆಗೆ 10,500 ಕಿಲೋಮೀಟರ್ ವರೆಗೆ ಸಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ದೂರ ಸಾಗಿದ ಹಾಗೂ ಹೆಚ್ಚು ರ್ಯಾಲಿ ನಡೆಸಿದ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

ಕಾಂಗ್ರೆಸ್ ಸಹ ನವ ಕರ್ನಾಟಕ ನಿರ್ಮಾಣ ಯಾತ್ರೆ ಕೈಗೊಂಡಿದ್ದು ರಾಜ್ಯದಲ್ಲಿ ಕೇವಲ 30 ದಿನ ಸಂಚರಿಸಿ, 120 ರ್ಯಾಲಿಗಳನ್ನು ಮಾತ್ರ ಏರ್ಪಡಿಸಿ, ಯಾತ್ರೆಗೆ ಅಂತ್ಯ ಹಾಡಿದೆ. ಅತ್ತ ಜೆಡಿಎಸ್ ಸಹ ನವೆಂಬರ್ ನಿಂದ ರ್ಯಾಲಿಗಳನ್ನು ಏರ್ಪಡಿಸುತ್ತಿದೆಯಾದರೂ ಬಿಜೆಪಿಯಷ್ಟು ರ್ಯಾಲಿ ಆಯೋಜಿಸಿಲ್ಲ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search