• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿ ಪರಿವರ್ತನಾ ಯಾತ್ರೆಯೇ ಮುಂದು!

TNN Correspondent Posted On January 29, 2018
0


0
Shares
  • Share On Facebook
  • Tweet It

ಬೆಂಗಳೂರು: ಚುನಾವಣೆ ಹಾಗೂ ಪ್ರಜಾಪ್ರಭುತ್ವ ದೃಷ್ಟಿಯಿಂದ ಯಾವುದೇ ಪಕ್ಷಗಳು ಚುನಾವಣೆ ಪೂರ್ವವಾಗಿ ಜನರ ಎದುರು ಹೋಗುವುದು ಒಳ್ಳೆಯದು. ಸರ್ಕಾರದ ವೈಫಲ್ಯ, ಸರ್ಕಾರದ ಸಾಧನೆ, ಪ್ರತಿಪಕ್ಷಗಳ ಹೋರಾಟ, ಜನರೊಂದಿಗೆ ಒಡನಾಟ, ಟೀಕೆ, ಸಮಾಲೋಚನೆಗಳೆಲ್ಲವೂ ಸರ್ಕಾರ ಹಾಗೂ ಪ್ರತಿಪಕ್ಷಗಳ ಬಂಡವಾಳ ಬಯಲಾಗಲು ಅನುಕೂಲ.

ಇದೇ ದಿಸೆಯಲ್ಲಿಯೇ ಕರ್ನಾಟಕದಲ್ಲಿ ಚುನಾವಣೆ ಪೂರ್ವವಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಲವು “ಯಾತ್ರೆ”ಗಳನ್ನು ಕೈಗೊಂಡಿದ್ದು, ಅವುಗಳಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯೇ ಮುಂದಿದೆ.

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮೊದಲು ಪರಿವರ್ತನಾ ಯಾತ್ರೆ ಕೈಗೊಂಡು ಅಪಾರ ಜನಬೆಂಬಲದೊಂದಿಗೆ ಯಶಸ್ವಿಯಾಗಿ ಮುಗಿಸಿದೆ. ಅಲ್ಲದೆ ರಾಜ್ಯದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಈ ಯಾತ್ರೆ ಸಂಚರಿಸಿದೆ ಎಂದು ಎಂಬ ಖ್ಯಾತಿಗೂ ಭಾಜನವಾಗಿದೆ.

ತುಮಕೂರಿನಿಂದ ಸಾಗಿದ ಬಿಜೆಪಿ ಪರಿವರ್ತನಾ ಯಾತ್ರೆ ಈಗ ಫೆಬ್ರವರಿ 4ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದ್ದು, ಈ ಅವಧಿಯಲ್ಲಿ ಯಡಿಯೂರಪ್ಪ ಅವರು 85 ದಿನಗಳವರೆಗೆ ಸಂಚರಿಸಿ, 185 ರ್ಯಾಲಿ ಏರ್ಪಡಿಸಿದ್ದಾರೆ. ಅಲ್ಲದೆ ರ್ಯಾಲಿ ಇದುವರೆಗೆ 10,500 ಕಿಲೋಮೀಟರ್ ವರೆಗೆ ಸಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ದೂರ ಸಾಗಿದ ಹಾಗೂ ಹೆಚ್ಚು ರ್ಯಾಲಿ ನಡೆಸಿದ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

ಕಾಂಗ್ರೆಸ್ ಸಹ ನವ ಕರ್ನಾಟಕ ನಿರ್ಮಾಣ ಯಾತ್ರೆ ಕೈಗೊಂಡಿದ್ದು ರಾಜ್ಯದಲ್ಲಿ ಕೇವಲ 30 ದಿನ ಸಂಚರಿಸಿ, 120 ರ್ಯಾಲಿಗಳನ್ನು ಮಾತ್ರ ಏರ್ಪಡಿಸಿ, ಯಾತ್ರೆಗೆ ಅಂತ್ಯ ಹಾಡಿದೆ. ಅತ್ತ ಜೆಡಿಎಸ್ ಸಹ ನವೆಂಬರ್ ನಿಂದ ರ್ಯಾಲಿಗಳನ್ನು ಏರ್ಪಡಿಸುತ್ತಿದೆಯಾದರೂ ಬಿಜೆಪಿಯಷ್ಟು ರ್ಯಾಲಿ ಆಯೋಜಿಸಿಲ್ಲ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search