• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿ ಪರಿವರ್ತನಾ ಯಾತ್ರೆಯೇ ಮುಂದು!

TNN Correspondent Posted On January 29, 2018
0


0
Shares
  • Share On Facebook
  • Tweet It

ಬೆಂಗಳೂರು: ಚುನಾವಣೆ ಹಾಗೂ ಪ್ರಜಾಪ್ರಭುತ್ವ ದೃಷ್ಟಿಯಿಂದ ಯಾವುದೇ ಪಕ್ಷಗಳು ಚುನಾವಣೆ ಪೂರ್ವವಾಗಿ ಜನರ ಎದುರು ಹೋಗುವುದು ಒಳ್ಳೆಯದು. ಸರ್ಕಾರದ ವೈಫಲ್ಯ, ಸರ್ಕಾರದ ಸಾಧನೆ, ಪ್ರತಿಪಕ್ಷಗಳ ಹೋರಾಟ, ಜನರೊಂದಿಗೆ ಒಡನಾಟ, ಟೀಕೆ, ಸಮಾಲೋಚನೆಗಳೆಲ್ಲವೂ ಸರ್ಕಾರ ಹಾಗೂ ಪ್ರತಿಪಕ್ಷಗಳ ಬಂಡವಾಳ ಬಯಲಾಗಲು ಅನುಕೂಲ.

ಇದೇ ದಿಸೆಯಲ್ಲಿಯೇ ಕರ್ನಾಟಕದಲ್ಲಿ ಚುನಾವಣೆ ಪೂರ್ವವಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಲವು “ಯಾತ್ರೆ”ಗಳನ್ನು ಕೈಗೊಂಡಿದ್ದು, ಅವುಗಳಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯೇ ಮುಂದಿದೆ.

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮೊದಲು ಪರಿವರ್ತನಾ ಯಾತ್ರೆ ಕೈಗೊಂಡು ಅಪಾರ ಜನಬೆಂಬಲದೊಂದಿಗೆ ಯಶಸ್ವಿಯಾಗಿ ಮುಗಿಸಿದೆ. ಅಲ್ಲದೆ ರಾಜ್ಯದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಈ ಯಾತ್ರೆ ಸಂಚರಿಸಿದೆ ಎಂದು ಎಂಬ ಖ್ಯಾತಿಗೂ ಭಾಜನವಾಗಿದೆ.

ತುಮಕೂರಿನಿಂದ ಸಾಗಿದ ಬಿಜೆಪಿ ಪರಿವರ್ತನಾ ಯಾತ್ರೆ ಈಗ ಫೆಬ್ರವರಿ 4ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದ್ದು, ಈ ಅವಧಿಯಲ್ಲಿ ಯಡಿಯೂರಪ್ಪ ಅವರು 85 ದಿನಗಳವರೆಗೆ ಸಂಚರಿಸಿ, 185 ರ್ಯಾಲಿ ಏರ್ಪಡಿಸಿದ್ದಾರೆ. ಅಲ್ಲದೆ ರ್ಯಾಲಿ ಇದುವರೆಗೆ 10,500 ಕಿಲೋಮೀಟರ್ ವರೆಗೆ ಸಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ದೂರ ಸಾಗಿದ ಹಾಗೂ ಹೆಚ್ಚು ರ್ಯಾಲಿ ನಡೆಸಿದ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

ಕಾಂಗ್ರೆಸ್ ಸಹ ನವ ಕರ್ನಾಟಕ ನಿರ್ಮಾಣ ಯಾತ್ರೆ ಕೈಗೊಂಡಿದ್ದು ರಾಜ್ಯದಲ್ಲಿ ಕೇವಲ 30 ದಿನ ಸಂಚರಿಸಿ, 120 ರ್ಯಾಲಿಗಳನ್ನು ಮಾತ್ರ ಏರ್ಪಡಿಸಿ, ಯಾತ್ರೆಗೆ ಅಂತ್ಯ ಹಾಡಿದೆ. ಅತ್ತ ಜೆಡಿಎಸ್ ಸಹ ನವೆಂಬರ್ ನಿಂದ ರ್ಯಾಲಿಗಳನ್ನು ಏರ್ಪಡಿಸುತ್ತಿದೆಯಾದರೂ ಬಿಜೆಪಿಯಷ್ಟು ರ್ಯಾಲಿ ಆಯೋಜಿಸಿಲ್ಲ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search