• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1984ರ ಸಿಖ್ ಹತ್ಯೆ ವೇಳೆ ರಾಜೀವ್ ಗಾಂಧಿ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದು ಹೇಳಿದ್ದು ಯಾರು ಗೊತ್ತೇ?

TNN Correspondent Posted On January 30, 2018
0


0
Shares
  • Share On Facebook
  • Tweet It

ದೆಹಲಿ: 1984ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಹತ್ಯೆಯಾದ ಬಳಿಕ ದೆಹಲಿ ಸೇರಿ ದೇಶದ ಹಲವೆಡೆ ಮೂರು ಸಾವಿರಕ್ಕೂ ಅಧಿಕ ಸಿಖ್ಖರ ಮಾರಣಹೋಮವಾಗಿದ್ದು ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ.

ಈ ಅಧ್ಯಾಯದ ಕೆಲವೊಂದಿಷ್ಟು ಪುಟಗಳನ್ನು ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ, ಅಕಾಲಿದಳ ಪಕ್ಷದ ಮುಖಂಡ ಸುಖಬೀರ್ ಸಿಂಗ್ ಬಾದಲ್ ಅವರು ತೆರೆದಿದ್ದು, “ಸಿಖ್ಖರ ಹತ್ಯೆಗೆ ರಾಜೀವ್ ಗಾಂಧಿ ಅವರ ಮೇಲ್ವಿಚಾರಣೆ ಇತ್ತು” ಎಂದು ಆರೋಪಿಸುವ ಮೂಲಕ ಹಳೆ ಘಟನೆಗೆ ಹೊಸ ತಿರುವು ನೋಡಿದ್ದಾರೆ.

ಅಲ್ಲದೆ ಈ ಕುರಿತು ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಬಾದಲ್, “ಹತ್ಯೆ ನಡೆಯುತ್ತಿದ್ದ ವೇಳೆ ರಾಜೀವ್ ಗಾಂಧಿ ಅವರು ದೆಹಲಿಯ ಹಲವು ಪ್ರದೇಶಗಳಲ್ಲಿ ಸುತ್ತಾಡಿದ್ದಾರೆ” ಎಂದು ಟೈಟ್ಲರ್ ಹೇಳಿದ್ದಾರೆ. ಹಾಗಾದರೆ ಹತ್ಯೆಗೆ ರಾಜೀವ್ ಮೇಲ್ವಿಚಾರಣೆ ಇತ್ತು ಎಂದಾಯಿತಲ್ಲ ಎಂದು ಬಾದಲ್ ಹೇಳಿಕೆ ನೀಡಿದ್ದಾರೆ.

ಅಲ್ಲದೆ ಇದೊಂದು ಗಂಭೀರ ಪ್ರಕರಣವಾಗಿದ್ದು, ಜಗದೀಶ್ ಟೈಟ್ಲರ್ ಅವರು ಹೇಳಿರುವ ಹೇಳಿಕೆಯನ್ನು ಪಡೆದು ಕೇಂದ್ರ ತನಿಖಾ ದಳ ಈ ಕುರಿತು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಸಹ ಬಾದಲ್ ಒತ್ತಾಯಿಸಿದ್ದಾರೆ.

ಇದೇ ತಿಂಗಳು ಸಿಖ್ಖರ ಹತ್ಯೆ ಆರೋಪದಲ್ಲಿ ಸಿಲುಕಿದ 186 ಜನರ ವಿರುದ್ಧದ ಪ್ರಕರಣಗಳನ್ನು ಮರುತನಿಖೆ ಮಾಡಲು ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವ ಬೆನ್ನಲ್ಲೇ ಟೈಟ್ಲರ್ ಹಾಗೂ ಬಾದಲ್ ಅವರು ಈ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹಲವು ತಿರುವು ಸಿಗುವ ಲಕ್ಷಣಗಳನ್ನು ಅಲ್ಲಗಳೆಯುವಂತಿಲ್ಲ.

ಆದಾಗ್ಯೂ, “ದೊಡ್ಡ ಆಲದ ಮರ ಉರುಳಿದಾಗ, ಭೂಮಿ ನಲುಗುವುದು ಸಹಜ” ಎಂದು ಇಂದಿರಾ ಗಾಂಧಿ ಹತ್ಯೆಯಾದ ಬಳಿಕ ಉಂಟಾದ ಗಲಭೆ ಕುರಿತು ರಾಜೀವ್ ಗಾಂಧಿ ಈ ಮಾತು ಹೇಳುವ ಮೂಲಕ ಹತ್ಯಾಕಾಂಡ ಸ್ಪಷ್ಟಪಡಿಸಿಕೊಂಡಿದ್ದರು ಎಂಬ ಮಾತು ಸಹ ಚಾಲ್ತಿಯಲ್ಲಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search