• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

1984ರ ಸಿಖ್ ಹತ್ಯೆ ವೇಳೆ ರಾಜೀವ್ ಗಾಂಧಿ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದು ಹೇಳಿದ್ದು ಯಾರು ಗೊತ್ತೇ?

TNN Correspondent Posted On January 30, 2018


  • Share On Facebook
  • Tweet It

ದೆಹಲಿ: 1984ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಹತ್ಯೆಯಾದ ಬಳಿಕ ದೆಹಲಿ ಸೇರಿ ದೇಶದ ಹಲವೆಡೆ ಮೂರು ಸಾವಿರಕ್ಕೂ ಅಧಿಕ ಸಿಖ್ಖರ ಮಾರಣಹೋಮವಾಗಿದ್ದು ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ.

ಈ ಅಧ್ಯಾಯದ ಕೆಲವೊಂದಿಷ್ಟು ಪುಟಗಳನ್ನು ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ, ಅಕಾಲಿದಳ ಪಕ್ಷದ ಮುಖಂಡ ಸುಖಬೀರ್ ಸಿಂಗ್ ಬಾದಲ್ ಅವರು ತೆರೆದಿದ್ದು, “ಸಿಖ್ಖರ ಹತ್ಯೆಗೆ ರಾಜೀವ್ ಗಾಂಧಿ ಅವರ ಮೇಲ್ವಿಚಾರಣೆ ಇತ್ತು” ಎಂದು ಆರೋಪಿಸುವ ಮೂಲಕ ಹಳೆ ಘಟನೆಗೆ ಹೊಸ ತಿರುವು ನೋಡಿದ್ದಾರೆ.

ಅಲ್ಲದೆ ಈ ಕುರಿತು ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಬಾದಲ್, “ಹತ್ಯೆ ನಡೆಯುತ್ತಿದ್ದ ವೇಳೆ ರಾಜೀವ್ ಗಾಂಧಿ ಅವರು ದೆಹಲಿಯ ಹಲವು ಪ್ರದೇಶಗಳಲ್ಲಿ ಸುತ್ತಾಡಿದ್ದಾರೆ” ಎಂದು ಟೈಟ್ಲರ್ ಹೇಳಿದ್ದಾರೆ. ಹಾಗಾದರೆ ಹತ್ಯೆಗೆ ರಾಜೀವ್ ಮೇಲ್ವಿಚಾರಣೆ ಇತ್ತು ಎಂದಾಯಿತಲ್ಲ ಎಂದು ಬಾದಲ್ ಹೇಳಿಕೆ ನೀಡಿದ್ದಾರೆ.

ಅಲ್ಲದೆ ಇದೊಂದು ಗಂಭೀರ ಪ್ರಕರಣವಾಗಿದ್ದು, ಜಗದೀಶ್ ಟೈಟ್ಲರ್ ಅವರು ಹೇಳಿರುವ ಹೇಳಿಕೆಯನ್ನು ಪಡೆದು ಕೇಂದ್ರ ತನಿಖಾ ದಳ ಈ ಕುರಿತು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಸಹ ಬಾದಲ್ ಒತ್ತಾಯಿಸಿದ್ದಾರೆ.

ಇದೇ ತಿಂಗಳು ಸಿಖ್ಖರ ಹತ್ಯೆ ಆರೋಪದಲ್ಲಿ ಸಿಲುಕಿದ 186 ಜನರ ವಿರುದ್ಧದ ಪ್ರಕರಣಗಳನ್ನು ಮರುತನಿಖೆ ಮಾಡಲು ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವ ಬೆನ್ನಲ್ಲೇ ಟೈಟ್ಲರ್ ಹಾಗೂ ಬಾದಲ್ ಅವರು ಈ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹಲವು ತಿರುವು ಸಿಗುವ ಲಕ್ಷಣಗಳನ್ನು ಅಲ್ಲಗಳೆಯುವಂತಿಲ್ಲ.

ಆದಾಗ್ಯೂ, “ದೊಡ್ಡ ಆಲದ ಮರ ಉರುಳಿದಾಗ, ಭೂಮಿ ನಲುಗುವುದು ಸಹಜ” ಎಂದು ಇಂದಿರಾ ಗಾಂಧಿ ಹತ್ಯೆಯಾದ ಬಳಿಕ ಉಂಟಾದ ಗಲಭೆ ಕುರಿತು ರಾಜೀವ್ ಗಾಂಧಿ ಈ ಮಾತು ಹೇಳುವ ಮೂಲಕ ಹತ್ಯಾಕಾಂಡ ಸ್ಪಷ್ಟಪಡಿಸಿಕೊಂಡಿದ್ದರು ಎಂಬ ಮಾತು ಸಹ ಚಾಲ್ತಿಯಲ್ಲಿದೆ.

  • Share On Facebook
  • Tweet It


- Advertisement -


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search