• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1984ರ ಸಿಖ್ ಹತ್ಯೆ ವೇಳೆ ರಾಜೀವ್ ಗಾಂಧಿ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದು ಹೇಳಿದ್ದು ಯಾರು ಗೊತ್ತೇ?

TNN Correspondent Posted On January 30, 2018
0


0
Shares
  • Share On Facebook
  • Tweet It

ದೆಹಲಿ: 1984ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಹತ್ಯೆಯಾದ ಬಳಿಕ ದೆಹಲಿ ಸೇರಿ ದೇಶದ ಹಲವೆಡೆ ಮೂರು ಸಾವಿರಕ್ಕೂ ಅಧಿಕ ಸಿಖ್ಖರ ಮಾರಣಹೋಮವಾಗಿದ್ದು ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ.

ಈ ಅಧ್ಯಾಯದ ಕೆಲವೊಂದಿಷ್ಟು ಪುಟಗಳನ್ನು ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ, ಅಕಾಲಿದಳ ಪಕ್ಷದ ಮುಖಂಡ ಸುಖಬೀರ್ ಸಿಂಗ್ ಬಾದಲ್ ಅವರು ತೆರೆದಿದ್ದು, “ಸಿಖ್ಖರ ಹತ್ಯೆಗೆ ರಾಜೀವ್ ಗಾಂಧಿ ಅವರ ಮೇಲ್ವಿಚಾರಣೆ ಇತ್ತು” ಎಂದು ಆರೋಪಿಸುವ ಮೂಲಕ ಹಳೆ ಘಟನೆಗೆ ಹೊಸ ತಿರುವು ನೋಡಿದ್ದಾರೆ.

ಅಲ್ಲದೆ ಈ ಕುರಿತು ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಬಾದಲ್, “ಹತ್ಯೆ ನಡೆಯುತ್ತಿದ್ದ ವೇಳೆ ರಾಜೀವ್ ಗಾಂಧಿ ಅವರು ದೆಹಲಿಯ ಹಲವು ಪ್ರದೇಶಗಳಲ್ಲಿ ಸುತ್ತಾಡಿದ್ದಾರೆ” ಎಂದು ಟೈಟ್ಲರ್ ಹೇಳಿದ್ದಾರೆ. ಹಾಗಾದರೆ ಹತ್ಯೆಗೆ ರಾಜೀವ್ ಮೇಲ್ವಿಚಾರಣೆ ಇತ್ತು ಎಂದಾಯಿತಲ್ಲ ಎಂದು ಬಾದಲ್ ಹೇಳಿಕೆ ನೀಡಿದ್ದಾರೆ.

ಅಲ್ಲದೆ ಇದೊಂದು ಗಂಭೀರ ಪ್ರಕರಣವಾಗಿದ್ದು, ಜಗದೀಶ್ ಟೈಟ್ಲರ್ ಅವರು ಹೇಳಿರುವ ಹೇಳಿಕೆಯನ್ನು ಪಡೆದು ಕೇಂದ್ರ ತನಿಖಾ ದಳ ಈ ಕುರಿತು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಸಹ ಬಾದಲ್ ಒತ್ತಾಯಿಸಿದ್ದಾರೆ.

ಇದೇ ತಿಂಗಳು ಸಿಖ್ಖರ ಹತ್ಯೆ ಆರೋಪದಲ್ಲಿ ಸಿಲುಕಿದ 186 ಜನರ ವಿರುದ್ಧದ ಪ್ರಕರಣಗಳನ್ನು ಮರುತನಿಖೆ ಮಾಡಲು ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವ ಬೆನ್ನಲ್ಲೇ ಟೈಟ್ಲರ್ ಹಾಗೂ ಬಾದಲ್ ಅವರು ಈ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹಲವು ತಿರುವು ಸಿಗುವ ಲಕ್ಷಣಗಳನ್ನು ಅಲ್ಲಗಳೆಯುವಂತಿಲ್ಲ.

ಆದಾಗ್ಯೂ, “ದೊಡ್ಡ ಆಲದ ಮರ ಉರುಳಿದಾಗ, ಭೂಮಿ ನಲುಗುವುದು ಸಹಜ” ಎಂದು ಇಂದಿರಾ ಗಾಂಧಿ ಹತ್ಯೆಯಾದ ಬಳಿಕ ಉಂಟಾದ ಗಲಭೆ ಕುರಿತು ರಾಜೀವ್ ಗಾಂಧಿ ಈ ಮಾತು ಹೇಳುವ ಮೂಲಕ ಹತ್ಯಾಕಾಂಡ ಸ್ಪಷ್ಟಪಡಿಸಿಕೊಂಡಿದ್ದರು ಎಂಬ ಮಾತು ಸಹ ಚಾಲ್ತಿಯಲ್ಲಿದೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search