• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1984ರ ಸಿಖ್ ಹತ್ಯೆ ವೇಳೆ ರಾಜೀವ್ ಗಾಂಧಿ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದು ಹೇಳಿದ್ದು ಯಾರು ಗೊತ್ತೇ?

TNN Correspondent Posted On January 30, 2018
0


0
Shares
  • Share On Facebook
  • Tweet It

ದೆಹಲಿ: 1984ರಲ್ಲಿ ಅಂದಿನ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಹತ್ಯೆಯಾದ ಬಳಿಕ ದೆಹಲಿ ಸೇರಿ ದೇಶದ ಹಲವೆಡೆ ಮೂರು ಸಾವಿರಕ್ಕೂ ಅಧಿಕ ಸಿಖ್ಖರ ಮಾರಣಹೋಮವಾಗಿದ್ದು ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ.

ಈ ಅಧ್ಯಾಯದ ಕೆಲವೊಂದಿಷ್ಟು ಪುಟಗಳನ್ನು ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ, ಅಕಾಲಿದಳ ಪಕ್ಷದ ಮುಖಂಡ ಸುಖಬೀರ್ ಸಿಂಗ್ ಬಾದಲ್ ಅವರು ತೆರೆದಿದ್ದು, “ಸಿಖ್ಖರ ಹತ್ಯೆಗೆ ರಾಜೀವ್ ಗಾಂಧಿ ಅವರ ಮೇಲ್ವಿಚಾರಣೆ ಇತ್ತು” ಎಂದು ಆರೋಪಿಸುವ ಮೂಲಕ ಹಳೆ ಘಟನೆಗೆ ಹೊಸ ತಿರುವು ನೋಡಿದ್ದಾರೆ.

ಅಲ್ಲದೆ ಈ ಕುರಿತು ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಬಾದಲ್, “ಹತ್ಯೆ ನಡೆಯುತ್ತಿದ್ದ ವೇಳೆ ರಾಜೀವ್ ಗಾಂಧಿ ಅವರು ದೆಹಲಿಯ ಹಲವು ಪ್ರದೇಶಗಳಲ್ಲಿ ಸುತ್ತಾಡಿದ್ದಾರೆ” ಎಂದು ಟೈಟ್ಲರ್ ಹೇಳಿದ್ದಾರೆ. ಹಾಗಾದರೆ ಹತ್ಯೆಗೆ ರಾಜೀವ್ ಮೇಲ್ವಿಚಾರಣೆ ಇತ್ತು ಎಂದಾಯಿತಲ್ಲ ಎಂದು ಬಾದಲ್ ಹೇಳಿಕೆ ನೀಡಿದ್ದಾರೆ.

ಅಲ್ಲದೆ ಇದೊಂದು ಗಂಭೀರ ಪ್ರಕರಣವಾಗಿದ್ದು, ಜಗದೀಶ್ ಟೈಟ್ಲರ್ ಅವರು ಹೇಳಿರುವ ಹೇಳಿಕೆಯನ್ನು ಪಡೆದು ಕೇಂದ್ರ ತನಿಖಾ ದಳ ಈ ಕುರಿತು ಸಮಗ್ರವಾಗಿ ತನಿಖೆ ಮಾಡಬೇಕು ಎಂದು ಸಹ ಬಾದಲ್ ಒತ್ತಾಯಿಸಿದ್ದಾರೆ.

ಇದೇ ತಿಂಗಳು ಸಿಖ್ಖರ ಹತ್ಯೆ ಆರೋಪದಲ್ಲಿ ಸಿಲುಕಿದ 186 ಜನರ ವಿರುದ್ಧದ ಪ್ರಕರಣಗಳನ್ನು ಮರುತನಿಖೆ ಮಾಡಲು ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವ ಬೆನ್ನಲ್ಲೇ ಟೈಟ್ಲರ್ ಹಾಗೂ ಬಾದಲ್ ಅವರು ಈ ಹೇಳಿಕೆ ನೀಡಿದ್ದು, ಪ್ರಕರಣಕ್ಕೆ ಹಲವು ತಿರುವು ಸಿಗುವ ಲಕ್ಷಣಗಳನ್ನು ಅಲ್ಲಗಳೆಯುವಂತಿಲ್ಲ.

ಆದಾಗ್ಯೂ, “ದೊಡ್ಡ ಆಲದ ಮರ ಉರುಳಿದಾಗ, ಭೂಮಿ ನಲುಗುವುದು ಸಹಜ” ಎಂದು ಇಂದಿರಾ ಗಾಂಧಿ ಹತ್ಯೆಯಾದ ಬಳಿಕ ಉಂಟಾದ ಗಲಭೆ ಕುರಿತು ರಾಜೀವ್ ಗಾಂಧಿ ಈ ಮಾತು ಹೇಳುವ ಮೂಲಕ ಹತ್ಯಾಕಾಂಡ ಸ್ಪಷ್ಟಪಡಿಸಿಕೊಂಡಿದ್ದರು ಎಂಬ ಮಾತು ಸಹ ಚಾಲ್ತಿಯಲ್ಲಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search