• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಮ್ಮು-ಕಾಶ್ಮೀರಕ್ಕೆ ಒಳನುಸುಳಲು ಐಎಸ್ಐ ತರಬೇತಿ ಪಡೆದ 386 ಉಗ್ರರು ಹೂಡಿರುವ ತಂತ್ರ ಎಂಥಾದ್ದು?

TNN Correspondent Posted On January 30, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಎಂದಿಗೂ ಉಗ್ರರ ಉಪಟಳ ಜಾಸ್ತಿಯಿದ್ದು, ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಉಗ್ರರ ವಿರುದ್ಧ ಕಾರ್ಯಾಚಾರಣೆ ಕೈಗೊಂಡ ಬಳಿಕ ಬಾಲ ಸುಟ್ಟ ಕೋತಿಯಂತಾಗಿದ್ದ ಪಾಕಿಸ್ತಾನಿ ಉಗ್ರರು ಈಗ ಮತ್ತೊಂದು ಸಂಚು ರೂಪಿಸಿದ್ದಾರೆ.

ಪಾಕಿಸ್ತಾನಿ ಆಂತರಿಕ ಸೇವೆಗಳ ಗುಪ್ತಚರ ಇಲಾಖೆ (ಐಎಸ್ಐ) ಯಿಂದ ವಿಶೇಷ ತರಬೇತಿ ಪಡೆದಿರುವ ಸುಮಾರು 386 ಉಗ್ರರು ಜಮ್ಮು-ಕಾಶ್ಮೀರಕ್ಕೆ ಒಳನುಸುಳಲು ಸಂಚು ರೂಪಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದ್ದು, ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದ 13 ಸ್ಥಳಗಳಿಂದ ಭಾರತದೊಳಕ್ಕೆ ಅಕ್ರಮವಾಗಿ ನುಸುಳಲು ವಿಶೇಷ ಕಾರ್ಯಾಚರಣೆ ಪಡೆಯೊಂದು ಪಾಕಿಸ್ತಾನ ತಯಾರಿಸಿದ್ದು, ಅದರಲ್ಲಿ 386 ಉಗ್ರರು ಸೇರಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಪಾಕ್ ಆಕ್ರಮಿತ ಕಾಶ್ಮೀರದ ಕೇಲ್, ಸರ್ದಿ, ದುಧ್ ನಿಯಾಲ್, ಅತ್ಮುಕಂ, ಜುರಾ, ಲಿಪಾ, ಪಚ್ಚಿಬನ್, ಫಾರ್ವರ್ಡ್ ಕುತಾ, ಕೋತ್ಲಿ, ಕುರೈತ, ನಿಕೈಲ್, ಚಮನ್ ಕೋಟ್ ಮತ್ತು ಜಾಂಕೋಟೆ ಎಂಬ ಪ್ರದೇಶಗಳಿಂದ ಒಳನುಸುಳಲು ಸಂಚು ರೂಪಿಸಿದ್ದು, ಅದರಲ್ಲಿ ಉಗ್ರರ ಜತೆಗೆ ಪಾಕಿಸ್ತಾನಿ ಸೈನಿಕರೂ ಇದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿದ್ದಾಗ ಇಂಡಿಯಾ ಟುಡೇ ವರದಿ ಮಾಡಿದೆ.

ಇದಕ್ಕೆ ಪ್ರತಿಯಾಗಿ ಭಾರತವೂ ಶಸ್ತ್ರಸಜ್ಜಿತ ಹಾಗೂ ಹಲವು ತಂತ್ರಗಳಿಂದ ಸನ್ನದ್ಧವಾಗಿದ್ದು, ಉಗ್ರರು ಒಳನುಸುಳಲು ಉದ್ದೇಶಿಸಿರುವ ಪ್ರತಿ ಪ್ರದೇಶ ಗುರುತಿಸಿ, ಅಲ್ಲೆಲ್ಲ ವಿಶೇಷ ಪಡೆ ನಿಯೋಜಿಸಿದೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಭಾರತೀಯ ಸೈನಿಕರು ಕಾರ್ಯಾಚರಣೆ ಕೈಗೊಂಡು ಸುಮಾರು 213ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಿದ ಹಿನ್ನೆಲೆಯಲ್ಲಿ ಜೈಷೆ ಮೊಹಮ್ಮದ್ ಸೇರಿ ಹಲವು ಉಗ್ರ ಸಂಘಟನೆಗಳ ಬೆಂಬಲ ಪಡೆದಿರುವ ಪಾಕಿಸ್ತಾನ, ತನ್ನ ಸೈನಿಕರು ಹಾಗೂ ಉಗ್ರರನ್ನು ಕಾಶ್ಮೀರದೊಳಕ್ಕೆ ಬಿಟ್ಟು ಅರಾಜಕತೆ ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಆದಾಗ್ಯೂ ಭಾರತವೂ ಪಾಕಿಸ್ತಾನದ ತಂತ್ರಕ್ಕೆ ಪ್ರತಿತಂತ್ರ ಹೆಣೆದಿರುವುದು ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search