• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ಗೆ ಕೊನೆ ಮೊಳೆ ಹೊಡೆಯುವವರೆಗೆ ಹೋರಾಟ ಎಂದವರಾರು ಗೊತ್ತೆ..?

TNN Correspondent Posted On January 30, 2018
0


0
Shares
  • Share On Facebook
  • Tweet It

ಮಲ್ಲಪುರಂ: ಮುಸ್ಲಿಂ ಮಹಿಳೆಯರನ್ನು ಮದುವೆ ಮಾಡಿಕೊಂಡು ಬೀದಿಗೆ ತಳ್ಳುತ್ತಿರುವ ಕೊಳಕು ಪದ್ಧತಿಯಾದ ತ್ರಿವಳಿ ತಲಾಖ್ ನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ವಿರೋಧ ಪಕ್ಷಗಳು ಮುಸ್ಲಿಂ ಮಹಿಳೆಯರನ್ನು ರಕ್ಷಿಸುವ ತ್ರಿವಳಿ ತಲಾಖ್ ನಿಷೇಧದ ಮಸೂದೆಗೆ ಅಡ್ಡಿಪಡಿಸುತ್ತಿವೆ. ಆದರೆ ಇದೀಗ ಮುಸ್ಲಿಂ ಮಹಿಳೆಯರು ಜಾಗೃತಿಯಾಗಿದ್ದು, ತ್ರಿವಳಿ ತಲಾಖ್ ನಿಷೇಧವಾಗುವವರೆಗೆ ಹೋರಾಟ ಮುಂದುವರಿಸುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಇದೀಗ ಅವರ ಸಾಲಿಗೆ ಸೇರಿರುವುದು ದೇಶದ ಪ್ರಥಮ ಮುಸ್ಲಿಂ ಇಮಾಮ್ ಆಗಿ ನೇಮಕವಾಗಿರುವ ಜಮೀದಾ.

ಪುರುಷರಿಗಷ್ಟೇ ಸೀಮಿತವಾಗಿದ್ದ ಇಮಾಮ್ ಸ್ಥಾನವನ್ನು ಆಕ್ರಮಿಸಿಕೊಂಡಿರುವ ಜಮೀದಾ ತ್ರಿವಳಿ ತಲಾಖ್ ನಿಷೇಧ ಮಾಡುವವರೆಗೆ ಹೋರಾಟ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖುರಾನ್ ಸುನ್ನತ್ ಸೊಸೈಟಿಯ ರಾಜ್ಯ ಕಾರ್ಯದರ್ಶಿಯಾಗಿರುವ ಜಮೀದಾ ಭಾರತದ ಇತಿಹಾಸದಲ್ಲೆ ಮೊದಲ ಬಾರಿಗೆ ಇಮಾಮ್ ಆಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದಾರೆ. ಶುಕ್ರವಾರದ ಪ್ರಾರ್ಥನೆಯನ್ನು ಜಮಿದಾ ನೇತೃತ್ವಹಿಸಿಕೊಳ್ಳುವ ಮೂಲಕ ಮುಸ್ಲಿಂ ವ್ಯವಸ್ಥೆಯಲ್ಲಿದ್ದ ಪುರುಷ ಪ್ರಧಾನ ಪದ್ಧತಿಗೆ ಕೊನೆ ಮೊಳೆ ಹೊಡೆದಿದ್ದು, ತ್ರಿವಳಿ ತಲಾಖ್ ಪದ್ಧತಿ ನಿಷೇಧದವರೆಗೆ ವಿರಮಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಜಮೀದಾ ಅವರ ಈ ದಿಟ್ಟ ನಿಲುವುಗಳಿಂದ ಕೆಲವು ಮುಸ್ಲಿಂ ಮೂಲಭೂತವಾದಿಗಳು ಬೆದರಿಕೆ ಒಡ್ಡಿದ್ದು, ಅವರ ಮೇಲೆ ದಾಳಿ, ಹಲ್ಲೆ ನಡೆಸಲು ಕೂಡ ಯತ್ನಿಸಿದ್ದಾರೆ. ಆದರೆ ವಿರೋಧಿಗಳಿಗೆ ತಕ್ಕ ಉತ್ತರ ನೀಡಿರುವ ಜಮೀದಾ ಇಮಾಮ್ ಕೇವಲ ಪುರುಷರಷ್ಠೇ ಆಗಬೇಕು ಎಂಬ ನಿಯಮ ಷರಿಯಾದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ನಿಷೇಧಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿರುವುದಕ್ಕೆ ಜಮೀದಾ ಬೆಂಬಲ ವ್ಯಕ್ತಪಡಿಸಿದ್ದು. ತ್ರಿವಳಿ ತಲಾಖ್ ಪದ್ಧತಿಗೆ ಕಡಿವಾಣ ಬೀಳುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search