• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತ್ರಿವಳಿ ತಲಾಖ್ ಗೆ ಕೊನೆ ಮೊಳೆ ಹೊಡೆಯುವವರೆಗೆ ಹೋರಾಟ ಎಂದವರಾರು ಗೊತ್ತೆ..?

TNN Correspondent Posted On January 30, 2018


  • Share On Facebook
  • Tweet It

ಮಲ್ಲಪುರಂ: ಮುಸ್ಲಿಂ ಮಹಿಳೆಯರನ್ನು ಮದುವೆ ಮಾಡಿಕೊಂಡು ಬೀದಿಗೆ ತಳ್ಳುತ್ತಿರುವ ಕೊಳಕು ಪದ್ಧತಿಯಾದ ತ್ರಿವಳಿ ತಲಾಖ್ ನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ವಿರೋಧ ಪಕ್ಷಗಳು ಮುಸ್ಲಿಂ ಮಹಿಳೆಯರನ್ನು ರಕ್ಷಿಸುವ ತ್ರಿವಳಿ ತಲಾಖ್ ನಿಷೇಧದ ಮಸೂದೆಗೆ ಅಡ್ಡಿಪಡಿಸುತ್ತಿವೆ. ಆದರೆ ಇದೀಗ ಮುಸ್ಲಿಂ ಮಹಿಳೆಯರು ಜಾಗೃತಿಯಾಗಿದ್ದು, ತ್ರಿವಳಿ ತಲಾಖ್ ನಿಷೇಧವಾಗುವವರೆಗೆ ಹೋರಾಟ ಮುಂದುವರಿಸುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಇದೀಗ ಅವರ ಸಾಲಿಗೆ ಸೇರಿರುವುದು ದೇಶದ ಪ್ರಥಮ ಮುಸ್ಲಿಂ ಇಮಾಮ್ ಆಗಿ ನೇಮಕವಾಗಿರುವ ಜಮೀದಾ.

ಪುರುಷರಿಗಷ್ಟೇ ಸೀಮಿತವಾಗಿದ್ದ ಇಮಾಮ್ ಸ್ಥಾನವನ್ನು ಆಕ್ರಮಿಸಿಕೊಂಡಿರುವ ಜಮೀದಾ ತ್ರಿವಳಿ ತಲಾಖ್ ನಿಷೇಧ ಮಾಡುವವರೆಗೆ ಹೋರಾಟ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖುರಾನ್ ಸುನ್ನತ್ ಸೊಸೈಟಿಯ ರಾಜ್ಯ ಕಾರ್ಯದರ್ಶಿಯಾಗಿರುವ ಜಮೀದಾ ಭಾರತದ ಇತಿಹಾಸದಲ್ಲೆ ಮೊದಲ ಬಾರಿಗೆ ಇಮಾಮ್ ಆಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದಾರೆ. ಶುಕ್ರವಾರದ ಪ್ರಾರ್ಥನೆಯನ್ನು ಜಮಿದಾ ನೇತೃತ್ವಹಿಸಿಕೊಳ್ಳುವ ಮೂಲಕ ಮುಸ್ಲಿಂ ವ್ಯವಸ್ಥೆಯಲ್ಲಿದ್ದ ಪುರುಷ ಪ್ರಧಾನ ಪದ್ಧತಿಗೆ ಕೊನೆ ಮೊಳೆ ಹೊಡೆದಿದ್ದು, ತ್ರಿವಳಿ ತಲಾಖ್ ಪದ್ಧತಿ ನಿಷೇಧದವರೆಗೆ ವಿರಮಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಜಮೀದಾ ಅವರ ಈ ದಿಟ್ಟ ನಿಲುವುಗಳಿಂದ ಕೆಲವು ಮುಸ್ಲಿಂ ಮೂಲಭೂತವಾದಿಗಳು ಬೆದರಿಕೆ ಒಡ್ಡಿದ್ದು, ಅವರ ಮೇಲೆ ದಾಳಿ, ಹಲ್ಲೆ ನಡೆಸಲು ಕೂಡ ಯತ್ನಿಸಿದ್ದಾರೆ. ಆದರೆ ವಿರೋಧಿಗಳಿಗೆ ತಕ್ಕ ಉತ್ತರ ನೀಡಿರುವ ಜಮೀದಾ ಇಮಾಮ್ ಕೇವಲ ಪುರುಷರಷ್ಠೇ ಆಗಬೇಕು ಎಂಬ ನಿಯಮ ಷರಿಯಾದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ನಿಷೇಧಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿರುವುದಕ್ಕೆ ಜಮೀದಾ ಬೆಂಬಲ ವ್ಯಕ್ತಪಡಿಸಿದ್ದು. ತ್ರಿವಳಿ ತಲಾಖ್ ಪದ್ಧತಿಗೆ ಕಡಿವಾಣ ಬೀಳುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search