• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತ್ರಿವಳಿ ತಲಾಖ್ ಗೆ ಕೊನೆ ಮೊಳೆ ಹೊಡೆಯುವವರೆಗೆ ಹೋರಾಟ ಎಂದವರಾರು ಗೊತ್ತೆ..?

TNN Correspondent Posted On January 30, 2018
0


0
Shares
  • Share On Facebook
  • Tweet It

ಮಲ್ಲಪುರಂ: ಮುಸ್ಲಿಂ ಮಹಿಳೆಯರನ್ನು ಮದುವೆ ಮಾಡಿಕೊಂಡು ಬೀದಿಗೆ ತಳ್ಳುತ್ತಿರುವ ಕೊಳಕು ಪದ್ಧತಿಯಾದ ತ್ರಿವಳಿ ತಲಾಖ್ ನ್ನು ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ವಿರೋಧ ಪಕ್ಷಗಳು ಮುಸ್ಲಿಂ ಮಹಿಳೆಯರನ್ನು ರಕ್ಷಿಸುವ ತ್ರಿವಳಿ ತಲಾಖ್ ನಿಷೇಧದ ಮಸೂದೆಗೆ ಅಡ್ಡಿಪಡಿಸುತ್ತಿವೆ. ಆದರೆ ಇದೀಗ ಮುಸ್ಲಿಂ ಮಹಿಳೆಯರು ಜಾಗೃತಿಯಾಗಿದ್ದು, ತ್ರಿವಳಿ ತಲಾಖ್ ನಿಷೇಧವಾಗುವವರೆಗೆ ಹೋರಾಟ ಮುಂದುವರಿಸುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಇದೀಗ ಅವರ ಸಾಲಿಗೆ ಸೇರಿರುವುದು ದೇಶದ ಪ್ರಥಮ ಮುಸ್ಲಿಂ ಇಮಾಮ್ ಆಗಿ ನೇಮಕವಾಗಿರುವ ಜಮೀದಾ.

ಪುರುಷರಿಗಷ್ಟೇ ಸೀಮಿತವಾಗಿದ್ದ ಇಮಾಮ್ ಸ್ಥಾನವನ್ನು ಆಕ್ರಮಿಸಿಕೊಂಡಿರುವ ಜಮೀದಾ ತ್ರಿವಳಿ ತಲಾಖ್ ನಿಷೇಧ ಮಾಡುವವರೆಗೆ ಹೋರಾಟ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಖುರಾನ್ ಸುನ್ನತ್ ಸೊಸೈಟಿಯ ರಾಜ್ಯ ಕಾರ್ಯದರ್ಶಿಯಾಗಿರುವ ಜಮೀದಾ ಭಾರತದ ಇತಿಹಾಸದಲ್ಲೆ ಮೊದಲ ಬಾರಿಗೆ ಇಮಾಮ್ ಆಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಹೊತ್ತಿದ್ದಾರೆ. ಶುಕ್ರವಾರದ ಪ್ರಾರ್ಥನೆಯನ್ನು ಜಮಿದಾ ನೇತೃತ್ವಹಿಸಿಕೊಳ್ಳುವ ಮೂಲಕ ಮುಸ್ಲಿಂ ವ್ಯವಸ್ಥೆಯಲ್ಲಿದ್ದ ಪುರುಷ ಪ್ರಧಾನ ಪದ್ಧತಿಗೆ ಕೊನೆ ಮೊಳೆ ಹೊಡೆದಿದ್ದು, ತ್ರಿವಳಿ ತಲಾಖ್ ಪದ್ಧತಿ ನಿಷೇಧದವರೆಗೆ ವಿರಮಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಜಮೀದಾ ಅವರ ಈ ದಿಟ್ಟ ನಿಲುವುಗಳಿಂದ ಕೆಲವು ಮುಸ್ಲಿಂ ಮೂಲಭೂತವಾದಿಗಳು ಬೆದರಿಕೆ ಒಡ್ಡಿದ್ದು, ಅವರ ಮೇಲೆ ದಾಳಿ, ಹಲ್ಲೆ ನಡೆಸಲು ಕೂಡ ಯತ್ನಿಸಿದ್ದಾರೆ. ಆದರೆ ವಿರೋಧಿಗಳಿಗೆ ತಕ್ಕ ಉತ್ತರ ನೀಡಿರುವ ಜಮೀದಾ ಇಮಾಮ್ ಕೇವಲ ಪುರುಷರಷ್ಠೇ ಆಗಬೇಕು ಎಂಬ ನಿಯಮ ಷರಿಯಾದಲ್ಲಿ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ನಿಷೇಧಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿರುವುದಕ್ಕೆ ಜಮೀದಾ ಬೆಂಬಲ ವ್ಯಕ್ತಪಡಿಸಿದ್ದು. ತ್ರಿವಳಿ ತಲಾಖ್ ಪದ್ಧತಿಗೆ ಕಡಿವಾಣ ಬೀಳುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search