• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಹೆಬ್ಬಾಗಿಲು ಮಂಗಳೂರಿನಿಂದಲೇ ದೇಶದ ಭದ್ರತೆಗೆ ಆತಂಕ!

Shri Mane Posted On January 30, 2018
0


0
Shares
  • Share On Facebook
  • Tweet It

ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊರ ರಾಜ್ಯದವರಿಗೆ ಮತದಾನದ ಹಕ್ಕು ಕಲ್ಪಿಸಿ ಗೆಲ್ಲಲು ಯತ್ನಿಸಿ ಸಿಕ್ಕಿಬಿದ್ದ ಮಂಗಳೂರಿನ ಸ್ಥಳೀಯ ಕಾಂಗ್ರೆಸ್ ಶಾಸಕರು ಇದೀಗ ವಿದೇಶೀಯರಿಗೆ ಆಧಾರ್ ಕಾರ್ಡ್ ಮಾಡಿಸಿ ಕೊಡುವ ಮೂಲಕ ಅವರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಯತ್ನದಲ್ಲಿ ಮತ್ತೆ ಸಿಕ್ಕಿ ಬಿದ್ದಿದ್ದಾರೆ.

ಭಾರತೀಯ ಪ್ರಜೆಗಳಿಗೆ ತಮ್ಮ ಅಸ್ಮಿತೆಯ ಪ್ರಶ್ನೆಯಾಗಿರುವ ಆಧಾರ್ ಕಾರ್ಡ್ ಪಡೆಯಲು ಸೂಕ್ತ ದಾಖಲೆಗಳನ್ನು ಹೊಂದಿಸಿಕೊಂಡು, ಎಷ್ಟೋ ದಿನಗಳ ಮೊದಲೇ ತಮ್ಮ ಸಮಯಕ್ಕಾಗಿ ಕಾದು, ಆ ದಿನ ಬಂದ ಮೇಲೆ ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಕೊನೇಗೆ ಆಧಾರ್ ಕಾರ್ಡ್ ಪಡೆದುಕೊಳ್ಳುತ್ತಾರೆ.

ಆದರೆ ಮಂಗಳೂರಿನ ಕಾಂಗ್ರೆಸ್ ನಾಯಕರ ಕಪಾಕಟಾಕ್ಷದಿಂದ ಹಾಗೂ ದೇಶದ್ರೋಹಿ ಕೆಲಸದಿಂದ ವಿದೇಶೀಯರಿಗೆ ಯಾವ ತಾಪತ್ರಯವೂ ಇಲ್ಲದೇ, ಅವರಿದ್ದಲ್ಲಿಯೇ ಕಾಲ ಬುಡಕ್ಕೆ ಹೋಗಿ ಆಧಾರ್ ಕಾರ್ಡ್ ಬಿದ್ದಿದೆ.

ಮಲೇಷ್ಯಾದಿಂದ ಮಂಗಳೂರಿಗೆ ವೈದ್ಯ ಶಿಕ್ಷಣಕ್ಕಾಗಿ ಸ್ಟಡಿ ವೀಸಾದಲ್ಲಿ ಬಂದಿರುವ “ಹೋಹ್ ಜಿಯಾನ್ ಮೆಗ್” (25) ಆಧಾರ್ ಕಾರ್ಡ್ ಪಡೆದಿರುವ ವ್ಯಕ್ತಿ. ಈಗ ಅವನು ಭಾರತೀಯ ಪ್ರಜೆ!
ಅಷ್ಟಕ್ಕೂ ಇವನಂತೆಯೇ ಇನ್ನೂ ಅದೆಷ್ಟು ವಿದೇಶೀಯರಿಗೆ ಆಧಾರ್ ಕಾರ್ಡ್ ಆಗಿರಬಹುದು? ಭಯೋತ್ಪಾದಕರು ಇದನ್ನು ಉಪಯೋಗಿಸಿಕೊಂಡು ತಮ್ಮ ಕಾರ್ಯ ಚಟುವಟಿಕೆ ವಿಸ್ತರಿಸಿದರೆ ಯಾರು ಹೊಣೆ?

ಇದು ಅತ್ಯಂತ ಗಂಭೀರ ಪ್ರಕರಣವಾಗಿರುವುದರಿಂದ ಜಿಲ್ಲಾಡಳಿತ, ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ದೇಶದ್ರೋಹ ಕೆಲಸ ಮಾಡಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾಗಬೇಕಿದೆ. ಇಲ್ಲದಿದ್ದಲ್ಲಿ ಇಂಥಾ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಭವ್ಯ ಭಾರತವನ್ನು ವಿದೇಶೀಯರ ಕೈಗೆ ಕೊಟ್ಟು ಬಿಡಲೂ ಹಿಂಜರಿಯಲಾರರು..

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Shri Mane February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Shri Mane February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search