• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

45 ಹಿಂದೂಯೇತರರ ಅಮಾನತಿಗೆ ತಿರುಪತಿ ತಿರುಮಲ ದೇವಸ್ಥಾನಂ ಚಿಂತನೆ!

TNN Correspondent Posted On January 30, 2018


  • Share On Facebook
  • Tweet It

ಹೈದರಾಬಾದ್: ತಿರುಪತಿಯ ಪ್ರಸಿದ್ಧ ತಿರುಮಲ ದೇವಾಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ 45 ಹಿಂದೂಯೇತರ ಸಿಬ್ಬಂದಿಯನ್ನು ಅಮಾನತು ಮಾಡಲು ದೇವಸ್ಥಾನ ನಿರ್ವಹಣೆಯ ಹೊಣೆ ಹೊತ್ತಿರುವ ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ನಿರ್ಧರಿಸಿದೆ.

ಇತ್ತೀಚೆಗೆ ಟಿಟಿಡಿ ಉದ್ಯೋಗಿಯೊಬ್ಬರು ಟಿಟಿಡಿ ಕಾರ್ ತೆಗೆದುಕೊಂಡು ಚರ್ಚಿಗೆ ಹೋಗಿ ಪ್ರಾರ್ಥನೆ ಮಾಡುವ ಮೂಲಕ ಸಮಿತಿಯ ನಿಯಮ ಉಲ್ಲಂಘನೆಯ ಆರೋಪ ಕೇಳಿಬಂದ ಹಿನ್ನೆಲಯಲ್ಲಿ ದೇವಸ್ಥಾನ ಸಮಿತಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಈ ಘಟನೆ ತಿಳಿದ ಬಳಿಕ ಸುಮಾರು 45 ಹಿಂದೂಯೇತರ ಸಿಬ್ಬಂದಿಯನ್ನು ಗುರುತಿಸಿದ್ದು, ಅವರಿಗೆ ನೋಟಿಸ್ ಸಹ ನೀಡಲಾಗಿತ್ತು. ಈಗ ದೇವಸ್ಥಾನ ಸಮಿತಿಯಿಂದ ಅಮಾನತು ಮಾಡಲು ನಿರ್ಧರಿಸಿದ್ದು, ಆ 45 ಸಿಬ್ಬಂದಿಯೂ ರಾಜ್ಯ ಸರ್ಕಾರದ ವಿವಿಧೆಡೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

45 ಉದ್ಯೋಗಿಗಳನ್ನು ಅಮಾನತುಗೊಳಿಸಿರುವ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹಾಗೊಂದು ವೇಳೆ ಅಮಾನತು ಆದರೆ ಅವರೆಲ್ಲರನ್ನೂ ಬೇರೆ ಕಡೆ ನಿಯೋಜನೆ ಮಾಡಲಾಗುತ್ತದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಲ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಟಿಟಿಡಿ ಭದ್ರತಾ ಮುಖ್ಯಸ್ಥ ಅಕೆ ರವಿಕೃಷ್ಣ, “45 ಹಿಂದೂಯೇತರ ಸಿಬ್ಬಂದಿಯಲ್ಲಿ 39 ಜನ 1989-2007ರ ಅವಧಿಯಲ್ಲಿ ನೇಮಕವಾಗಿದ್ದು, ಅವರು ಸಮಿತಿಯ ಹಲವು ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ನೇಮಕದ ವೇಳೆ ಅವರಿಗೆ ಹಲವು ನಿಬಂಧನೆ ಹಾಕಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search