• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

45 ಹಿಂದೂಯೇತರರ ಅಮಾನತಿಗೆ ತಿರುಪತಿ ತಿರುಮಲ ದೇವಸ್ಥಾನಂ ಚಿಂತನೆ!

TNN Correspondent Posted On January 30, 2018
0


0
Shares
  • Share On Facebook
  • Tweet It

ಹೈದರಾಬಾದ್: ತಿರುಪತಿಯ ಪ್ರಸಿದ್ಧ ತಿರುಮಲ ದೇವಾಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ 45 ಹಿಂದೂಯೇತರ ಸಿಬ್ಬಂದಿಯನ್ನು ಅಮಾನತು ಮಾಡಲು ದೇವಸ್ಥಾನ ನಿರ್ವಹಣೆಯ ಹೊಣೆ ಹೊತ್ತಿರುವ ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ನಿರ್ಧರಿಸಿದೆ.

ಇತ್ತೀಚೆಗೆ ಟಿಟಿಡಿ ಉದ್ಯೋಗಿಯೊಬ್ಬರು ಟಿಟಿಡಿ ಕಾರ್ ತೆಗೆದುಕೊಂಡು ಚರ್ಚಿಗೆ ಹೋಗಿ ಪ್ರಾರ್ಥನೆ ಮಾಡುವ ಮೂಲಕ ಸಮಿತಿಯ ನಿಯಮ ಉಲ್ಲಂಘನೆಯ ಆರೋಪ ಕೇಳಿಬಂದ ಹಿನ್ನೆಲಯಲ್ಲಿ ದೇವಸ್ಥಾನ ಸಮಿತಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಈ ಘಟನೆ ತಿಳಿದ ಬಳಿಕ ಸುಮಾರು 45 ಹಿಂದೂಯೇತರ ಸಿಬ್ಬಂದಿಯನ್ನು ಗುರುತಿಸಿದ್ದು, ಅವರಿಗೆ ನೋಟಿಸ್ ಸಹ ನೀಡಲಾಗಿತ್ತು. ಈಗ ದೇವಸ್ಥಾನ ಸಮಿತಿಯಿಂದ ಅಮಾನತು ಮಾಡಲು ನಿರ್ಧರಿಸಿದ್ದು, ಆ 45 ಸಿಬ್ಬಂದಿಯೂ ರಾಜ್ಯ ಸರ್ಕಾರದ ವಿವಿಧೆಡೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

45 ಉದ್ಯೋಗಿಗಳನ್ನು ಅಮಾನತುಗೊಳಿಸಿರುವ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹಾಗೊಂದು ವೇಳೆ ಅಮಾನತು ಆದರೆ ಅವರೆಲ್ಲರನ್ನೂ ಬೇರೆ ಕಡೆ ನಿಯೋಜನೆ ಮಾಡಲಾಗುತ್ತದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಲ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಟಿಟಿಡಿ ಭದ್ರತಾ ಮುಖ್ಯಸ್ಥ ಅಕೆ ರವಿಕೃಷ್ಣ, “45 ಹಿಂದೂಯೇತರ ಸಿಬ್ಬಂದಿಯಲ್ಲಿ 39 ಜನ 1989-2007ರ ಅವಧಿಯಲ್ಲಿ ನೇಮಕವಾಗಿದ್ದು, ಅವರು ಸಮಿತಿಯ ಹಲವು ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ನೇಮಕದ ವೇಳೆ ಅವರಿಗೆ ಹಲವು ನಿಬಂಧನೆ ಹಾಕಲಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search