• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮಾಜ್ ನೇತೃತ್ವ ವಹಿಸಿದ್ದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ, ಆದರೂ ಬೆದರಿಕೆಗೆ ಬಗ್ಗಲ್ಲ ಎಂದ ದಿಟ್ಟೆ

TNN Correspondent Posted On January 30, 2018
0


0
Shares
  • Share On Facebook
  • Tweet It

ತಿರುವನಂತಪುರ: ಭಾರತದಲ್ಲಿ ಹಾಗೇನೆ. ಮಹಿಳೆಯರು ಪೈಲಟ್ ಆದರೆ, ಬಸ್ ಓಡಿಸಿದರೆ, ಯಾವುದೇ ಸಾಧನೆ ಮಾಡಿದರೆ ಹೆಮ್ಮೆ ಪಡುತ್ತವೆ. ಆದರೆ ಅದೇ ಮುಸ್ಲಿಂ ಮಹಿಳೆ ಬುರ್ಖಾ ತೆಗೆದರೆ ಫತ್ವಾ ಹೊರಡಿಸಲಾಗುತ್ತದೆ.

ಅದೇ ರೀತಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಮಾಜ್ (ಜುಮಾ)ನ ನೇತೃತ್ವದ ವಹಿಸಿದ್ದ ಕೇರಳದ ಜಮಿತಾ ಅವರಿಗೆ ಮುಸ್ಲಿಂ ಮೂಲಭೂತವಾದಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದುಬಂದಿದೆ.

ಆದರೆ ಇದಕ್ಕೆ ಜಮಿತಾ ಸೊಪ್ಪು ಹಾಕದೆ ಪ್ರತಿಕ್ರಿಯಿಸಿದ್ದು, ಬೆದರಿಕೆ ಕರೆಗಳಿಗೆ ಬಗ್ಗುವುದಿಲ್ಲ, ನನ್ನ ಕೆಲಸ ನಾನು ಮಾಡಿದ್ದೇನೆ. ಇದರಲ್ಲಿ ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡುವ ಮೂಲಕ ದಿಟ್ಟತನ ಮೆರೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಹ ಬೆದರಿಕೆ ಒಡ್ಡುತ್ತಿದ್ದು, ಜಮಿತಾ ಇಸ್ಲಾಂ ಧರ್ಮವನ್ನು ನಾಶಪಡಿಸುತ್ತಿದ್ದಾಳೆ. ಅವಳು ಬದಲು ಅನರ್ಹವಾದವಳು ಎಂಬಂತಹ ಕೀಳುಮಟ್ಟದ ಯೋಚನೆಗಳಿಂದ ಕೂಡಿದ ಪ್ರತಿಕ್ರಿಯೆ ಬರುತ್ತಿದ್ದು, ಇದಾವುದಕ್ಕೂ ನಾನು ಹೆದರುವುದಿಲ್ಲ ಎಂದು ಜಮಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕುರಾನ್ ಸುನ್ನತ್ ಮತ್ತು ಇಮಾನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಜಮಿತಾ ಪುರುಷ ಧರ್ಮಗುರುಗಳೇ ನಡೆಸಿಕೊಡುವ ನಮಾಜಅನ್ನು ಜನವರಿ 26ರಂದು ತಾವೇ ನಡೆಸಿಕೊಟ್ಟಿದರು. ಸುಮಾರು 80 ಮಂದಿ ಭಾಗವಹಿಸಿದ್ದ ಪ್ರಾರ್ಥನಾ ಸಭೆಯ ನೇತೃತ್ವ ವಹಿಸಿಕೊಂಡು ಸಮರ್ಥವಾಗಿ ನಿಭಾಯಿಸಿದ್ದರು. ಇದು ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದ್ದರೆ, ಕೆಲವರು ವಿರೋಧಿಸಿದ್ದರು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search