• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಮಾಜ್ ನೇತೃತ್ವ ವಹಿಸಿದ್ದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ, ಆದರೂ ಬೆದರಿಕೆಗೆ ಬಗ್ಗಲ್ಲ ಎಂದ ದಿಟ್ಟೆ

TNN Correspondent Posted On January 30, 2018


  • Share On Facebook
  • Tweet It

ತಿರುವನಂತಪುರ: ಭಾರತದಲ್ಲಿ ಹಾಗೇನೆ. ಮಹಿಳೆಯರು ಪೈಲಟ್ ಆದರೆ, ಬಸ್ ಓಡಿಸಿದರೆ, ಯಾವುದೇ ಸಾಧನೆ ಮಾಡಿದರೆ ಹೆಮ್ಮೆ ಪಡುತ್ತವೆ. ಆದರೆ ಅದೇ ಮುಸ್ಲಿಂ ಮಹಿಳೆ ಬುರ್ಖಾ ತೆಗೆದರೆ ಫತ್ವಾ ಹೊರಡಿಸಲಾಗುತ್ತದೆ.

ಅದೇ ರೀತಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಮಾಜ್ (ಜುಮಾ)ನ ನೇತೃತ್ವದ ವಹಿಸಿದ್ದ ಕೇರಳದ ಜಮಿತಾ ಅವರಿಗೆ ಮುಸ್ಲಿಂ ಮೂಲಭೂತವಾದಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದುಬಂದಿದೆ.

ಆದರೆ ಇದಕ್ಕೆ ಜಮಿತಾ ಸೊಪ್ಪು ಹಾಕದೆ ಪ್ರತಿಕ್ರಿಯಿಸಿದ್ದು, ಬೆದರಿಕೆ ಕರೆಗಳಿಗೆ ಬಗ್ಗುವುದಿಲ್ಲ, ನನ್ನ ಕೆಲಸ ನಾನು ಮಾಡಿದ್ದೇನೆ. ಇದರಲ್ಲಿ ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡುವ ಮೂಲಕ ದಿಟ್ಟತನ ಮೆರೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಹ ಬೆದರಿಕೆ ಒಡ್ಡುತ್ತಿದ್ದು, ಜಮಿತಾ ಇಸ್ಲಾಂ ಧರ್ಮವನ್ನು ನಾಶಪಡಿಸುತ್ತಿದ್ದಾಳೆ. ಅವಳು ಬದಲು ಅನರ್ಹವಾದವಳು ಎಂಬಂತಹ ಕೀಳುಮಟ್ಟದ ಯೋಚನೆಗಳಿಂದ ಕೂಡಿದ ಪ್ರತಿಕ್ರಿಯೆ ಬರುತ್ತಿದ್ದು, ಇದಾವುದಕ್ಕೂ ನಾನು ಹೆದರುವುದಿಲ್ಲ ಎಂದು ಜಮಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕುರಾನ್ ಸುನ್ನತ್ ಮತ್ತು ಇಮಾನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಜಮಿತಾ ಪುರುಷ ಧರ್ಮಗುರುಗಳೇ ನಡೆಸಿಕೊಡುವ ನಮಾಜಅನ್ನು ಜನವರಿ 26ರಂದು ತಾವೇ ನಡೆಸಿಕೊಟ್ಟಿದರು. ಸುಮಾರು 80 ಮಂದಿ ಭಾಗವಹಿಸಿದ್ದ ಪ್ರಾರ್ಥನಾ ಸಭೆಯ ನೇತೃತ್ವ ವಹಿಸಿಕೊಂಡು ಸಮರ್ಥವಾಗಿ ನಿಭಾಯಿಸಿದ್ದರು. ಇದು ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದ್ದರೆ, ಕೆಲವರು ವಿರೋಧಿಸಿದ್ದರು.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search