• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಕ್ಕಳಾಗಿಲ್ಲ ಎಂದು ಫೋನ್ ಮೂಲಕ ತಲಾಖ್

TNN Correspondent Posted On January 30, 2018
0


0
Shares
  • Share On Facebook
  • Tweet It

ಲಖನೌ: ತ್ರಿವಳಿ ತಲಾಖ್ ನಿಷೇಧ ಮಸೂದೆ ಕೇಂದ್ರ ಸರ್ಕಾರ ಶ್ರಮಿಸುತ್ತೀರುವಾಗಲೇ ಮತ್ತೊಂದು ತ್ರಿವಳಿ ತಲಾಖ್ ಘಟನೆ ಬಹಿರಂಗವಾಗಿದೆ. ಉತ್ತರ ಪ್ರದೇಶದ ಬಾರಾಬಂಕಿಯ ಬಡಪುರ ಕ್ಷೇತ್ರದ ಸಲೇಮಪುರದಲ್ಲಿ ಮಕ್ಕಳು ಆಗಲಿಲ್ಲ ಎಂದು ಪತ್ನಿಗೆ ಪತಿ ಫೋನ್ ನಿಂದಲೇ ತ್ರಿವಳಿ ತಲಾಖ್ ನೀಡಿ, ಧರ್ಪ ಮೆರೆದಿದ್ದಾನೆ.

ಮದುವೆಯಾಗಿ ಐದು ವರ್ಷವಾದರೂ ಮಕ್ಕಳಿಗೆ ಜನ್ಮ ನೀಡಿಲ್ಲ ಎಂದು ಅಮರಿನ್ ಬಾನೋ ಎಂಬ ಮಹಿಳೆಗೆ ಪತಿ ಮೋಬಿನ್ ಫೋನ್ ಮೂಲಕ ತಲಾಖ್ ನೀಡಿದ್ದು, ಇದೀಗ ಮಹಿಳೆ ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ತಲಾಖ್ ನೀಡಿರುವ ಮೋಬಿನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ.

ಗುಜರಾತ್ ನಲ್ಲಿ ಟ್ರಕ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವ ಮೋಬಿನ್ ಫೋನ್ ಮೂಲಕ ತಲಾಖ್ ನೀಡಿದ್ದಲ್ಲದೇ, ಅಲ್ಲೇ ಮತ್ತೊಬ್ಬ ಮಹಿಳೆಯೊಂದಿಗೆ ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾನೆ. ಇದರಿಂದ ಕಂಗಾಲಾಗಿರುವ ಮಹಿಳೆ ಜನವರಿ 25ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಟ್ರಕ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಪತ್ತೇ ಹಚ್ಚಿದ್ದಾರೆ. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಕುರಿತು ಪೀಡಿತ ಮಹಿಳೆ ಮತ್ತು ಅವಳ ತಾಯಿ ನಿತ್ಯ ಕಣ್ಣೀರಿಡುತ್ತಿದ್ದು ‘ಐದು ವರ್ಷದ ಹಿಂದೆ ನನ್ನ ಮಗಳನ್ನು ಮೋಬಿನ್ ಮದುವೆಯಾಗಿದ್ದ. ಎರಡು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ನಂತರ ಗಂಡು ಮಗು ಆಗಲಿಲ್ಲ ಎಂದು ಮೋಬಿನ್ ಮಗಳ ಜತೆ ಜಗಳ ತೆಗೆಯುತ್ತಿದ್ದ, ಕಿರುಕುಳ ನೀಡುತ್ತಿದ್ದ. ಅದನ್ನು ಸಹಿಸಿಕೊಂಡು ಮಗಳು ಇದ್ದಳು. ಆದರೆ ಇದೀಗ ತಲಾಖ್ ನೀಡಿದ್ದರಿಂದ ನನ್ನ ಮಗಳು ಬೀದಿಗೆ ಬರುವಂತಾಗಿದೆ ಎಂದು ಅಮರಿನ್ ಬಾನೋ ತಾಯಿ ದುಖಿಃಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search