• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಕ್ಕಳಾಗಿಲ್ಲ ಎಂದು ಫೋನ್ ಮೂಲಕ ತಲಾಖ್

TNN Correspondent Posted On January 30, 2018


  • Share On Facebook
  • Tweet It

ಲಖನೌ: ತ್ರಿವಳಿ ತಲಾಖ್ ನಿಷೇಧ ಮಸೂದೆ ಕೇಂದ್ರ ಸರ್ಕಾರ ಶ್ರಮಿಸುತ್ತೀರುವಾಗಲೇ ಮತ್ತೊಂದು ತ್ರಿವಳಿ ತಲಾಖ್ ಘಟನೆ ಬಹಿರಂಗವಾಗಿದೆ. ಉತ್ತರ ಪ್ರದೇಶದ ಬಾರಾಬಂಕಿಯ ಬಡಪುರ ಕ್ಷೇತ್ರದ ಸಲೇಮಪುರದಲ್ಲಿ ಮಕ್ಕಳು ಆಗಲಿಲ್ಲ ಎಂದು ಪತ್ನಿಗೆ ಪತಿ ಫೋನ್ ನಿಂದಲೇ ತ್ರಿವಳಿ ತಲಾಖ್ ನೀಡಿ, ಧರ್ಪ ಮೆರೆದಿದ್ದಾನೆ.

ಮದುವೆಯಾಗಿ ಐದು ವರ್ಷವಾದರೂ ಮಕ್ಕಳಿಗೆ ಜನ್ಮ ನೀಡಿಲ್ಲ ಎಂದು ಅಮರಿನ್ ಬಾನೋ ಎಂಬ ಮಹಿಳೆಗೆ ಪತಿ ಮೋಬಿನ್ ಫೋನ್ ಮೂಲಕ ತಲಾಖ್ ನೀಡಿದ್ದು, ಇದೀಗ ಮಹಿಳೆ ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ತಲಾಖ್ ನೀಡಿರುವ ಮೋಬಿನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ.

ಗುಜರಾತ್ ನಲ್ಲಿ ಟ್ರಕ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವ ಮೋಬಿನ್ ಫೋನ್ ಮೂಲಕ ತಲಾಖ್ ನೀಡಿದ್ದಲ್ಲದೇ, ಅಲ್ಲೇ ಮತ್ತೊಬ್ಬ ಮಹಿಳೆಯೊಂದಿಗೆ ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾನೆ. ಇದರಿಂದ ಕಂಗಾಲಾಗಿರುವ ಮಹಿಳೆ ಜನವರಿ 25ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಟ್ರಕ್ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಪತ್ತೇ ಹಚ್ಚಿದ್ದಾರೆ. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಕುರಿತು ಪೀಡಿತ ಮಹಿಳೆ ಮತ್ತು ಅವಳ ತಾಯಿ ನಿತ್ಯ ಕಣ್ಣೀರಿಡುತ್ತಿದ್ದು ‘ಐದು ವರ್ಷದ ಹಿಂದೆ ನನ್ನ ಮಗಳನ್ನು ಮೋಬಿನ್ ಮದುವೆಯಾಗಿದ್ದ. ಎರಡು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ನಂತರ ಗಂಡು ಮಗು ಆಗಲಿಲ್ಲ ಎಂದು ಮೋಬಿನ್ ಮಗಳ ಜತೆ ಜಗಳ ತೆಗೆಯುತ್ತಿದ್ದ, ಕಿರುಕುಳ ನೀಡುತ್ತಿದ್ದ. ಅದನ್ನು ಸಹಿಸಿಕೊಂಡು ಮಗಳು ಇದ್ದಳು. ಆದರೆ ಇದೀಗ ತಲಾಖ್ ನೀಡಿದ್ದರಿಂದ ನನ್ನ ಮಗಳು ಬೀದಿಗೆ ಬರುವಂತಾಗಿದೆ ಎಂದು ಅಮರಿನ್ ಬಾನೋ ತಾಯಿ ದುಖಿಃಸುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search