• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಮುಸ್ಲಿಮರು ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಂತೆ, ಇದೆಂಥಾ ದಾರಿದ್ರ್ಯ?

TNN Correspondent Posted On January 31, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದ ವಿಷಯದಲ್ಲಿ ಯಾವಾಗ ಮೂಗು ತೂರಿಸಲು ಆರಂಭಿಸಿತೋ, ಯಾವಾಗ ಶೇಖ್ ಅಬ್ದುಲ್ಲಾ (ಮಾಜಿ ಮುಖ್ಯಮಂತ್ರಿ, ಫಾರೂಕ್ ಅಬ್ದುಲ್ಲಾ ತಂದೆ) ಪಾಕಿಸ್ತಾನದ ಕೈಗೊಂಬೆಯಾಯಿತೋ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು, ಉಗ್ರರ ಅಡಿಯಾಳುಗಳು, ಕಲ್ಲು ತೂರಾಟಗಾರರು ಉದಯಿಸಿದರು. ಸ್ವಾತಂತ್ರ್ಯ ಬಳಿಕ ನೆಹರೂ, ಶೇಖ್ ಅಬ್ದುಲ್ಲಾ ಮಾಡಿದ ತಪ್ಪಿಗೆ ಇಂದಿಗೂ ಕಾಶ್ಮೀರ ಪರಿತಪಿಸುತ್ತಿದೆ.

ಇದಕ್ಕೆ ಮುನ್ನುಡಿಯಾಗಿ ಜಮ್ಮು ಕಾಶ್ಮೀರದ ಡೆಪ್ಯೂಟಿ, ಜಮ್ಮು-ಕಾಶ್ಮೀರ ಮುಸ್ಲಿಂ ವೈಯಕ್ತಿಕ ಮಂಡಳಿ ಉಪಾಧ್ಯಕ್ಷ ನಾಸೀರ್ ಉಲ್ ಇಸ್ಲಾಂ ತನ್ನ ಎಲುಬಿಲ್ಲದ ನಾಲಗೆ ಹರಿಬಿಟ್ಟಿದ್ದು, “ಭಾರತೀಯ ಮುಸ್ಲಿಮರೆಲ್ಲರೂ ಒಗ್ಗೂಡಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕು” ಎಂದು ಹೇಳಿಕೆ ನೀಡುವ ಮೂಲಕ ಉದ್ಧಟತನ ಮೆರೆದಿದ್ದಾನೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆತ, “ಭಾರತದಲ್ಲಿ ಲವ್ ಜಿಹಾದ್ ಹಾಗೂ ಗೋ ರಕ್ಷಣೆ ಹೆಸರಲ್ಲಿ ಮುಸ್ಲಿಮರ ಮೇಲೆ ಹಲ್ಲೆಗಳಾಗುತ್ತಿವೆ. ದೇಶದಲ್ಲಿ 2ನೇ ಅತಿಹೆಚ್ಚು ಜನಸಂಖ್ಯೆಯಾಗಿ ಮುಸ್ಲಿಮರಿದ್ದೇವೆ. ಆದರೂ ಹಲ್ಲೆಯಾಗುತ್ತಿದೆ. ಪಾಕಿಸ್ತಾನ ಕೇವಲ 17 ಕೋಟಿ ಜನಸಂಖ್ಯೆಯನ್ನಿಟ್ಟುಕೊಂಡು ಪ್ರತ್ಯೇಕ ರಾಷ್ಟ್ರವಾಯಿತು. ಹಾಗೆಯೇ ಭಾರತದಲ್ಲಿ ಮುಸ್ಲಿಮರಿಗೆ ಭದ್ರತೆ ಇಲ್ಲವೆಂತಾದರೆ ಪ್ರತ್ಯೇಕ ರಾಷ್ಟ್ರಕ್ಕಾಗಿ ಬೇಡಿಕೆ ಇಡಬೇಕು” ಎಂದಿದ್ದಾನೆ.

ಪ್ರಸ್ತುತ ಭಾರತೀಯ ಮುಸ್ಲಿಮರು ಭೀತಿಯಲ್ಲೇ ಬದುಕುತ್ತಿದ್ದಾರೆ. ಸರ್ಕಾರ ನಮ್ಮ ಧ್ವನಿಯನ್ನು ಕೇಳುತ್ತಿಲ್ಲ. ಹಾಗಾಗಿ ನಮ್ಮ ಮುಂದೆ ಪ್ರತ್ಯೇಕ ರಾಷ್ಟ್ರದ ಕೂಗು ಬಿಟ್ಟರೆ ಬೇರಾವ ದಾರಿಯಿದೆ? ಎಂದು ನಾಸೀರ್ ಪ್ರಶ್ನಿಸಿದ್ದಾನೆ.

ಆದರೆ ನಾಸೀರ್ ಹೇಳಿದಂತೆ ಭಾರತದಲ್ಲಿ ಮುಸ್ಲಿಮರಿಗೆ ಯಾವ ಭೀತಿಯಿದೆ? ಮುಸ್ಲಿಂ ಮಹಿಳೆಯರಿಗೆ ಅಡ್ಡವಾಗಿದ್ದ ತ್ರಿವಳಿ ತಲಾಖ್ ರದ್ದುಗೊಳಿಸಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಹಜ್ ಯಾತ್ರೆ ಸಬ್ಸಿಡಿ ಹಣವನ್ನು ಮುಸ್ಲಿಂ ಮಹಿಳೆಯರ ಶಿಕ್ಷಣಕ್ಕೆ ಮೀಸಲಿಡುವುದಾಗಿ ಘೋಷಿಸಿದೆ. ಗೋ ರಕ್ಷಣೆ ಹೆಸರಲ್ಲಿ ಅಹಿಂಸೆ ಕೂಡದು ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಎಚ್ಚರಿಸಿದ್ದಾರೆ.

ಭಾರತದಲ್ಲಿ ಮುಸ್ಲಿಮರಿಗೆ ಇಷ್ಟೆಲ್ಲ ಸೌಲಭ್ಯವಿರುವಾಗ, ಸರ್ಕಾರದ ಅಭಯ ಇರುವಾಗ ನಾಸೀರ್ ನಂಥ ಕುತ್ಸಿತ ಮನಸ್ಸಿನವರು ಪ್ರತ್ಯೇಕ ರಾಷ್ಟ್ರದ ಕರೆ ನೀಡುತ್ತಾರೆ ಎಂದರೆ ಇದೆಂಥ ಬೌದ್ಧಿಕ ದಾರಿದ್ರ್ಯ ಇರಬೇಕು? ನಾಚಿಕೆಯಾಗಬೇಕು ಇವರಿಗೆ. ಇಂಥಾ ಮನಸ್ಥಿತಿಗಳ ವಿರುದ್ಧ ಮಾತನಾಡುವ ತಾಕತ್ತು ಆ ಪ್ರಕಾಶ್ ರೈಗಿದೆಯೋ?

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search