• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷರು ಚಡ್ಡಿ ಧರಿಸಿ ಆಡುವ ಫುಟ್ಬಾಲ್ ವೀಕ್ಷಿಸುವುದು ಮುಸ್ಲಿಂ ಮಹಿಳೆಯರಿಗೆ ನಿಷಿದ್ಧವಂತೆ!

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಒಂದೆಡೆ ಮುಸ್ಲಿಂ ಮಹಿಳೆಯರ ಜೀವನಕ್ಕೆ ಕಂಟಕಪ್ರಾಯವಾಗಿರುವ ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲು ಕೇಂದ್ರ ಸರ್ಕಾರ ಶತಪ್ರಯತ್ನ ಮಾಡುತ್ತಿದ್ದರೆ, ಇತ್ತ ಕೆಲ ಮುಸ್ಲಿಂ ಸಂಘಟನೆಗಳು ಮಾತ್ರ ತಮ್ಮ ಧರ್ಮದ ಮಹಿಳೆಯರನ್ನು ಹತ್ತಿಕ್ಕಲು ದಿನೇದಿನೆ ಪ್ರಯತ್ನಿಸುತ್ತಲೇ ಇವೆ.

ಇದಕ್ಕೆ ಸಾಕ್ಷಿಯಾಗಿ ದರುಲ್ ಉಲೂಮ್ ದಿಯೋಬಂದ್ ಬಂದ್ ಎಂಬ ಇಸ್ಲಾಮಿಕ್ ಸಂಸ್ಥೆಯೊಂದು ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪುರಷರು ಮೊಣಕಾಲು ಕಾಣುವ ಹಾಗೆ ಚಡ್ಡಿ ಹಾಕಿಕೊಂಡು ಆಡುವ ಫುಟ್ ಬಾಲ್ ವೀಕ್ಷಿಸುವುದು ಮುಸ್ಲಿಂ ಮಹಿಳೆಯರಿಗೆ ನಿಷಿದ್ಧವಂತೆ.

ಈ ಕುರಿತು ಸಂಸ್ಥೆಯ ಮೌಲ್ವಿ ಮುಫ್ತಿ ಅತಾರ್ ಕಸ್ಮಿ ಫತ್ವಾ ಹೊರಡಿಸಿದ್ದು, ಇನ್ನು ಮುಂದೆ ಮುಸ್ಲಿಂ ಮಹಿಳೆಯರ್ಯಾರೂ ಪುರುಷರ ಫುಟ್ಬಾಲ್ ಆಟ ವೀಕ್ಷಿಸಬಾರದು ಎಂದು ಆದೇಶಿಸಿದ್ದಾರೆ.

ಪ್ರಾರ್ಥನಾ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಸ್ಮಿ, “ನಿಮಗೆ ನಾಚಿಕೆಯಾಗುವುದಿಲ್ಲವೇ? ಪುರುಷರ ತೊಡೆ ನೋಡಿದರೆ ನಿಮಗೇನು ಲಾಭ? ಅಲ್ಲಾಹ್ ಎಂದರೆ ನಿಮಗೆ ಭಯವೇ ಇಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಆದರೆ ಸರ್ವಾಧಿಕಾರ ಇರುವ ಸೌದಿ ಅರೇಬಿಯಾದಲ್ಲೇ ಮುಸ್ಲಿಂ ಮಹಿಳೆಯರು ಫುಟ್ ಬಾಲ್ ನೋಡುವ ಹಕ್ಕು ಹೊಂದಿದ್ದಾರೆ. ಆದರೆ ಜಾತ್ಯತೀತ, ಸಹಿಷ್ಣುತೆಯ ರಾಷ್ಟ್ರವಾದ ಭಾರತದಲ್ಲೇ ಮುಸ್ಲಿಂ ಮಹಿಳೆಯರಿಗೆ ಫುಟ್ ಬಾಲ್ ನೋಡಬಾರದು ಎಂದು ಆದೇಶ ಹೊರಡಿಸುವುದು ಎಷ್ಟು ಸರಿ? ಇದು ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಂತಲ್ಲವೇ?

ದುರದೃಷ್ಟವಶಾತ್, ಮುಸ್ಲಿಂ ಮಹಿಳೆಯರಿಗೆ ಇಷ್ಟೆಲ್ಲ ಅನ್ಯಾಯವಾಗುತ್ತಿದ್ದರೂ, ಯಾವ ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಜೀವಪರರು, ಪ್ರಗತಿಪರರು ಸೊಲ್ಲೆತ್ತದೇ ಇರುವುದು ಖಂಡನೀಯವಾಗಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search