• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಬುದಾಬಿಯಲ್ಲಿ ಹಿಂದೂ ಶಕ್ತಿ ಅನಾವರಣ, ಪ್ರಥಮ ದೇವಾಲಯ ಉದ್ಘಾಟಿಸಲಿದ್ದಾರೆ ನರೇಂದ್ರ ಮೋದಿ

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವಾಧ್ಯಂತ ಹಿಂದೂ ಶಕ್ತಿಯ ಅನಾವರಣವಾಗುತ್ತಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಹಿಂದೂ ಸ್ಥಾನ ವಿಶ್ವಗುರುವಾಗುವತ್ತ ದಿಟ್ಟ ಹೆಜ್ಜೆಗಳನ್ನು ಇಡುತ್ತಿದೆ. ಇನ್ನು ಹಿಂದೂ ಸಂಸ್ಕೃತಿಯನ್ನು ವಿಶ್ವದ ಹಲವು ರಾಷ್ಟ್ರಗಳು ಅಳವಡಿಸಿಕೊಳ್ಳುತ್ತಿವೆ. ಇತ್ತೀಚೆಗೆ ಖಟ್ಟರ ಮುಸ್ಲಿಂ ರಾಷ್ಟ್ರವಾಗಿರುವ ಸೌದಿ ಅರೇಬಿಯಾ ಯೋಗವನ್ನು ತನ್ನ ಅಳವಡಿಸಿಕೊಂಡಿತ್ತು. ಇದೀಗ ಅಬುದಾಬಿಯಲ್ಲಿ ಪ್ರಥಮ ಬಾರಿಗೆ ಹಿಂದೂ ದೇವಾಲಯವನ್ನು 2015ರಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ದೇವಾಲಯ ಉದ್ಘಾಟಿಸಲಿದ್ದಾರೆ. ಫೆ.,9,10,11 ರಂದು ಮೂರು ದಿನ ಒಮೆನ್, ಯುಎಇ ಮತ್ತು ಪ್ಯಾಲೆಸ್ತೀನ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಇದೇ ವೇಳೆ ಅಬುದಾಬಿಗೆ ಭೇಟಿ ನೀಡಲಿದ್ದು, ಅಲ್ ವತಾಬ್ ನಲ್ಲಿ 20,000 ಸ್ಕ್ಯಾರ್ ಮೀಟರ್ ವ್ಯಾಪ್ತಿಯಲ್ಲಿ ನಿರ್ಮಿಸಿರುವ ದೇವಾಲಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಯುನೈಟೆಡ್ ಅರಬ್ ಎಮಿರೆಟ್ (ಯುಎಇ)ನಲ್ಲಿ ಪ್ರಸ್ತುತ ದುಬೈನಲ್ಲಿ ಮಾತ್ರ ಹಿಂದೂ ದೇವಸ್ಥಾನವಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಥಮ ಭೇಟಿ ವೇಳೆಯಲ್ಲೇ ಅಬುದಾಬಿಯಲ್ಲಿ ದೇವಸ್ಥಾನಕ್ಕೆ ಶಿಲಾನ್ಯಾಸ ನೆರವೇರಿಸಲು ಅವಕಾಶ ದೊರೆತಿದೆ.

ಹಿಂದೂಸ್ತಾನಿಗಳ ದಂಡೇ ಇದೇ ಅಲ್ಲಿ

ಯುಎಇ ನಲ್ಲಿ 2.6 ದಶಲಕ್ಷ ಭಾರತೀಯರು ವಾಸಿಸುತ್ತಿದ್ದಾರೆ. ಇಡೀ ದೇವಸ್ಥಾನ ನಿರ್ಮಾಣ ಕಾರ್ಯ ಖಾಸಗಿ ಖರ್ಚಿನಲ್ಲೇ ನಡೆಯುತ್ತಿದೆ. ಸರ್ಕಾರದ ಯಾವುದೇ ಸಹಾಯವಿಲ್ಲ ಎಂದು ಯುಎಇ ಸರ್ಕಾರ ತಿಳಿಸಿದೆ. ಅಲ್ಲದೇ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ದುಬೈನಲ್ಲಿ ವಾಸಿಸಿರುವ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಶ್ವ ಸರ್ಕಾರ ಶೃಂಗಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಮೋದಿಯೇ ಇಡೀ ಶೃಂಗಸಭೆಯ ಕೇಂದ್ರಬಿಂದುವಾಗಿದ್ದಾರೆ. ಅಲ್ಲದೇ ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪ್ರಧಾನಿಯೊಬ್ಬರು ಪ್ಯಾಲೆಸ್ತಿನ್ ಗೆ ಭೇಟಿ ನೀಡುತ್ತಿರುವುದು ವಿಶೇಷ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search