• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಟೀಕಿಸುವವರೇ ಕೇಳಿ ಚೀನಾದ ಶ್ಲಾಘನೆಯ ಮಾತು

TNN Correspondent Posted On February 1, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸವನ್ನು ಟೀಕಿಸುತ್ತಲೇ ದಿನದೂಡುತ್ತಿರುವ ಪ್ರತಿ ಪಕ್ಷಗಳಿಗೆ ಹಲವಾರು ವರದಿಗಳು, ಬೇರೆ ಬೇರೆ ದೇಶಗಳೇ ತಕ್ಕ ಉತ್ತರ ನೀಡುತ್ತಿವೆ. ಅದರ ಸಾಲಿಗೆ ಭಾರತವನ್ನು ಆಗಾಗ ಕೆಣಕುವ ಚೀನಾ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಯನ್ನು ಹೊಗಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತದ ವಿದೇಶಾಂಗ ನೀತಿಯಲ್ಲಿ ಕಟುತ್ವ ಕಾಣಿಸಿಕೊಂಡಿದೆ. ಪ್ರಖರ ಮತ್ತು ನಿಖರ ನಿಲುವುಗಳನ್ನು ಹೊಂದುವ ಮೂಲಕ ಭಾರತ ವಿಶ್ವ ಸಮುದಾಯದ ಗಮನ ಸೆಳೆದಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದೆ.

ಭಾರತದ ವಿದೇಶಾಂಗ ನೀತಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿರುವ ಚೀನಾ ಅಂತಾರಾಷ್ಟ್ರೀಯ ಅಧ್ಯಯನ ಸಂಸ್ಥೆ ರಾಂಗ್ ಯಿಂಗ್ ‘ ಚೀನಾ ಪಾಕಿಸ್ತಾನದ ಜತೆಗೆ ಆಕ್ರಮಣ ಶೀಲ ನಡೆಗಳನ್ನು ತೋರ್ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೆರೆ ರಾಷ್ಟ್ರಗಳೊಂದಿಗೆ ಸೌಹಾರ್ದಯುತ ಸಂಬಂಧಕ್ಕಾಗಿ ಅಧಿಕಾರ ಸ್ವೀಕರಿಸುವ ವೇಳೆ ನೆರೆ ರಾಷ್ಟ್ರಗಳ ಮುಖಂಡರನ್ನು ಆಮಂತ್ರಿಸಿದರು.

ಆದರೆ ಭಾರತದ ವಿರುದ್ಧ ಚಟುವಟಿಕೆಗಳು ನಡೆದಾಗ ‘ವಿಶೇಷವಾಗಿ ಪಾಕಿಸ್ತಾನ ಪ್ರೇರಿತ ದಾಳಿಗಳಾದಾಗ ತಕ್ಕ ಮತ್ತು ಕಠಿಣ ನಿಲುವುಗಳನ್ನು ತಳೆಯುವ ಮೂಲಕ ಗಮನ ಸೆಳೆದಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಮಾಡುವ ಪಾಕಿಸ್ತಾನ ಗಡಿ ದಾಟಿದ್ದರು ಮತ್ತು ಭೂತಾನ ಗಡಿ ದಾಟಿ ದಾಳಿ ಮಾಡುವ ಮೂಲಕ ಭಾರತದ ತಂಟೆಗೆ ಬಂದರೆ ಬಿಡುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ವಿಶ್ವ ಸಮುದಾಯಕ್ಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಫಲವಾಗಿದೆ. ಅಲ್ಲದೇ ಚೀನಾದ ಜೊತೆಗೂ ಡೋಕ್ಲಾ ವಿಚಾರವಾಗಿ ಪ್ರಥಮ ಬಾರಿಗೆ ದ್ವೀಪಕ್ಷಿಯ ಚರ್ಚೆ ಏರ್ಪಡುವಂತ ನಿಲುವುಗಳನ್ನು ತಳೆಯುವ ಮೂಲಕ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಪ್ರಯತ್ನಿಸಿದ್ದರು ಎಂದು ಶ್ಲಾಘನೆ ವ್ಯಕ್ತಪಡಿಸಿದೆ. ಮೋದಿ ಅವರ ಕಠಿಣ, ಸ್ಪಷ್ಟ ನೀತಿಗಳು ಭಾರತವನ್ನು ವಿಶ್ವಸಮುದಾಯವೇ ತಿರುಗಿ ನೋಡುವಂತಾಗಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದ್ದು ವಿಶೇಷ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search