• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಟೀಕಿಸುವವರೇ ಕೇಳಿ ಚೀನಾದ ಶ್ಲಾಘನೆಯ ಮಾತು

TNN Correspondent Posted On February 1, 2018


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸವನ್ನು ಟೀಕಿಸುತ್ತಲೇ ದಿನದೂಡುತ್ತಿರುವ ಪ್ರತಿ ಪಕ್ಷಗಳಿಗೆ ಹಲವಾರು ವರದಿಗಳು, ಬೇರೆ ಬೇರೆ ದೇಶಗಳೇ ತಕ್ಕ ಉತ್ತರ ನೀಡುತ್ತಿವೆ. ಅದರ ಸಾಲಿಗೆ ಭಾರತವನ್ನು ಆಗಾಗ ಕೆಣಕುವ ಚೀನಾ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಯನ್ನು ಹೊಗಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತದ ವಿದೇಶಾಂಗ ನೀತಿಯಲ್ಲಿ ಕಟುತ್ವ ಕಾಣಿಸಿಕೊಂಡಿದೆ. ಪ್ರಖರ ಮತ್ತು ನಿಖರ ನಿಲುವುಗಳನ್ನು ಹೊಂದುವ ಮೂಲಕ ಭಾರತ ವಿಶ್ವ ಸಮುದಾಯದ ಗಮನ ಸೆಳೆದಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದೆ.

ಭಾರತದ ವಿದೇಶಾಂಗ ನೀತಿಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿರುವ ಚೀನಾ ಅಂತಾರಾಷ್ಟ್ರೀಯ ಅಧ್ಯಯನ ಸಂಸ್ಥೆ ರಾಂಗ್ ಯಿಂಗ್ ‘ ಚೀನಾ ಪಾಕಿಸ್ತಾನದ ಜತೆಗೆ ಆಕ್ರಮಣ ಶೀಲ ನಡೆಗಳನ್ನು ತೋರ್ಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನೆರೆ ರಾಷ್ಟ್ರಗಳೊಂದಿಗೆ ಸೌಹಾರ್ದಯುತ ಸಂಬಂಧಕ್ಕಾಗಿ ಅಧಿಕಾರ ಸ್ವೀಕರಿಸುವ ವೇಳೆ ನೆರೆ ರಾಷ್ಟ್ರಗಳ ಮುಖಂಡರನ್ನು ಆಮಂತ್ರಿಸಿದರು.

ಆದರೆ ಭಾರತದ ವಿರುದ್ಧ ಚಟುವಟಿಕೆಗಳು ನಡೆದಾಗ ‘ವಿಶೇಷವಾಗಿ ಪಾಕಿಸ್ತಾನ ಪ್ರೇರಿತ ದಾಳಿಗಳಾದಾಗ ತಕ್ಕ ಮತ್ತು ಕಠಿಣ ನಿಲುವುಗಳನ್ನು ತಳೆಯುವ ಮೂಲಕ ಗಮನ ಸೆಳೆದಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಮಾಡುವ ಪಾಕಿಸ್ತಾನ ಗಡಿ ದಾಟಿದ್ದರು ಮತ್ತು ಭೂತಾನ ಗಡಿ ದಾಟಿ ದಾಳಿ ಮಾಡುವ ಮೂಲಕ ಭಾರತದ ತಂಟೆಗೆ ಬಂದರೆ ಬಿಡುವುದಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ವಿಶ್ವ ಸಮುದಾಯಕ್ಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಫಲವಾಗಿದೆ. ಅಲ್ಲದೇ ಚೀನಾದ ಜೊತೆಗೂ ಡೋಕ್ಲಾ ವಿಚಾರವಾಗಿ ಪ್ರಥಮ ಬಾರಿಗೆ ದ್ವೀಪಕ್ಷಿಯ ಚರ್ಚೆ ಏರ್ಪಡುವಂತ ನಿಲುವುಗಳನ್ನು ತಳೆಯುವ ಮೂಲಕ ಶಾಶ್ವತ ಪರಿಹಾರ ಕೊಂಡುಕೊಳ್ಳಲು ಪ್ರಯತ್ನಿಸಿದ್ದರು ಎಂದು ಶ್ಲಾಘನೆ ವ್ಯಕ್ತಪಡಿಸಿದೆ. ಮೋದಿ ಅವರ ಕಠಿಣ, ಸ್ಪಷ್ಟ ನೀತಿಗಳು ಭಾರತವನ್ನು ವಿಶ್ವಸಮುದಾಯವೇ ತಿರುಗಿ ನೋಡುವಂತಾಗಿದೆ ಎಂದು ಚೀನಾ ಸರ್ಕಾರದ ಸಂಸ್ಥೆಯೇ ಶ್ಲಾಘನೆ ವ್ಯಕ್ತಪಡಿಸಿದ್ದು ವಿಶೇಷ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search