• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿಯವರೇ ಈ ಸರ್ಕಾರಿ, ಅನುದಾನಿತ ಶಾಲೆಯ ಮಕ್ಕಳ ಪರಿಸ್ಥಿತಿ ಬಗ್ಗೆ ಏನು ಹೇಳುತ್ತೀರಿ?

TNN Correspondent Posted On February 1, 2018
0


0
Shares
  • Share On Facebook
  • Tweet It

ಬೆಂಗಳೂರು: ಕಳೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕಕ್ಕೆ ಬಂದು ರಾಜ್ಯ ಸರ್ಕಾರದ ವೈಫಲ್ಯದ ಕುರಿತು ಮಾತನಾಡಿದ್ದಕ್ಕೇ ಕೆಂಡಾಮಂಡಲರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಇದು ಕನ್ನಡರಿಗೆ ಮಾಡುವ ಅನ್ಯಾಯ” ಎಂದುಬಿಟ್ಟರು.

ಆದರೆ ಇಂಥ ಕನ್ನಡ ಪ್ರೇಮಿ ಸಿದ್ದರಾಮಯ್ಯನವರು ರಾಜ್ಯದ ಕನ್ನಡ ಶಾಲೆಗಳು ಅರ್ಥಾತ್ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪರಿಸ್ಥಿತಿ ಹದಗೆಟ್ಟಿದ್ದರೂ, ಸಿಎಂ ಏಕೆ ಈ ಶಾಲೆಗಳತ್ತ ಗಮನಹರಿಸುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ.

ಹೌದು, ಸ್ಟೇಟ್ ಅಚೀವ್ ಮೆಂಟ್ ಸರ್ವೇ (ಎಸ್ ವಿಎಸ್) ಸಂಸ್ಥೆ ಕಳೆದ ವರ್ಷದ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ನಾಲ್ಕರಿಂದ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ತರಗತಿಯ ಅವಶ್ಯವಿದೆ ಎಂದು ತಿಳಿಸಿದ್ದು, ಕನ್ನಡ ಶಾಲೆಗಳ ವೈಫಲ್ಯ ಎತ್ತಿ ತೋರಿಸುವಂತಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ಎಸ್ ವಿಎಸ್ ಸಂಸ್ಥೆಯಿಂದ ಸಮೀಕ್ಷೆ ನಡೆಸಿದ್ದು, ರಾಜ್ಯದ ಸುಮಾರು 36 ಲಕ್ಷ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳನ್ನು ಸಂದರ್ಶಿಸಿದ್ದು, ಬಹುತೇಕ ವಿದ್ಯಾರ್ಥಿಗಳು ತಮಗೆ  ವಿಶೇಷ ತರಗತಿಗಳ ಅಗತ್ಯವಿದ್ದಾರೆ ಎಂದು ತಿಳಿಸಿದ್ದಾರೆ ಎಂಬುದಾಗಿ ವರದಿಯಲ್ಲಿ ತಿಳಿಸಲಾಗಿದೆ.

ಈ ಎಲ್ಲ ವಿದ್ಯಾರ್ಥಿಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ವಿಶೇಷ ತರಗತಿಗಳ ಕೊರತೆ, ಶಾಲಾ ಕೊಠಡಿ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯದ ಕಠಿಣತೆ ಬಿಡಿಸಲು ಸಂಪನ್ಮೂಲ ಶಿಕ್ಷಕರ ಅಭಾವವಿದೆ ಎಂದು ತಿಳಿಸಿರುವುದು ರಾಜ್ಯ ಸರ್ಕಾರ ಎಷ್ಟರಮಟ್ಟಿಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ನಿರ್ವಹಣೆ ಮಾಡುತ್ತಿದೆ ಎಂಬುದು ಬಹಿರಂಗವಾಗಿದೆ.

36 ಲಕ್ಷ ವಿದ್ಯಾರ್ಥಿಗಳಲ್ಲಿ 4.22 ಲಕ್ಷ ವಿದ್ಯಾರ್ಥಿಗಳು ತಮಗೆ ವಿಜ್ಞಾನ ಬೋಧಿಸುವ ಸಮರ್ಥ ಶಿಕ್ಷಕರ ಕೊರತೆ ಇದೆ ಎಂದು ತಿಳಿಸಿದ್ದರೆ, 4.61 ಲಕ್ಷ ವಿದ್ಯಾರ್ಥಿಗಳು ಇಂಗ್ಲಿಷ್ ವಿಷಯ ಕಷ್ಟವಾಗುತ್ತಿದೆ ಎಂದಿದ್ದಾರೆ. ಇನ್ನು ಗಣಿತ, ತೃತೀಯ ಭಾಷೆ, ಸಮಾಜ ವಿಜ್ಞಾನ ವಿಷಯಗಳು ಸಹ ಕಠಿಣವಾಗುತ್ತಿವೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕೂವರೆ ವರ್ಷವಾದರೂ ಕನ್ನಡ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕ ಶಿಕ್ಷಣ ವಾತಾವರಣ ನಿರ್ಮಿಸದೇ ಇರುವುದು ದುರಂತ. ಚುನಾವಣೆ ಹಿನ್ನೆಲೆ ಬ್ಯುಸಿಯಾಗಿರುವ ಸಿದ್ದರಾಮಯ್ಯನವರಿಗೆ ಇದು ತಿಳಿಯುತ್ತಾ? ಇನ್ನಾದರೂ ಕ್ರಮ ಕೈಗೊಳ್ಳಲಿದ್ದಾರಾ?

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search