• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕೇಂದ್ರ ಸರ್ಕಾರ ಸೂಟು ಬೂಟಿನ ಸರ್ಕಾರ ಎಂದವರು ಈಗ ಎಲ್ಲಿದ್ದಾರೆ?

ವಿಶಾಲ್ ಗೌಡ ಕುಶಾಲನಗರ Posted On February 2, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ನಾಯಕರ ಎದುರು ಭಾರತ ಆಧುನಿಕತೆ ತೋರಿಸಲು, ಶಕ್ತಿ ಪ್ರದರ್ಶಿಸಲು ಸೂಟು ತೊಟ್ಟು ಅಮೆರಿಕವೋ, ಇನ್ನಾವುದೋ ದೇಶಕ್ಕೆ ಹೊರಟು ನಿಂತಾಗ, ಅಥವಾ ಇನ್ನಾವುದೇ ಜಾಗತಿಕ ಸಮಾರಂಭದಲ್ಲಿ ಸೂಟು ತೊಟ್ಟು ಮಿಂಚಿದಾಗ ಸಹಿಸಿಕೊಳ್ಳದ ಕೆಲವು ಕುತ್ಸಿತ ಮನಸ್ಸುಗಳು ಇದು ಸೂಟು ಬೂಟಿನ ಸರ್ಕಾರ ಎಂದು ಟೀಕಿಸಿದ್ದವು. ರಾಹುಲ್ ಗಾಂಧಿಯವರಿಗಂತೂ ಬಾಯಿ ಬಿಟ್ಟರೆ ಸೂಟು… ಬೂಟು… ಅನ್ನೋರು!

ಆದರೆ ಈ ಬಾರಿಯ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ನೋಡಿ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಟೀಕಿಸಬೇಕಲ್ಲ ಎಂದು ಬಜೆಟ್ ಸರಿ ಇಲ್ಲ ಎನ್ನುತ್ತಿದ್ದಾರೆ. ಆದರೆ ಒಬ್ಬನೇ ಒಬ್ಬ ಈ ಬಜೆಟ್ ರೈತರ ಪರ ಇಲ್ಲ ಎಂಬುದನ್ನು ತಿಳಿಸಲಿ ನೋಡೋಣ? ಒಬ್ಬರಿಗೂ ಬಾಯಿಯೇ ಬರುತ್ತಿಲ್ಲ.

ಸಾಮಾನ್ಯವಾಗಿ ಯಾವುದೇ ಬಜೆಟ್ ಮಂಡನೆಯಾದರೂ ಕೃಷಿಗೆ ಒಂದಷ್ಟು ಹಣ, ಗ್ರಾಮೀಣಾಭಿವೃದ್ಧಿಗೆ ಒಂದಷ್ಟು ಅನುದಾನ ಮೀಸಲಿಟ್ಟು ಕೈತೊಳೆದುಕೊಳ್ಳುತ್ತಾರೆ. ಆದರೆ ಈ ಬಾರಿ ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಬಹುತೇಕ ರೈತರು, ಗ್ರಾಮೀಣ ಜನ, ಮಧ್ಯಮ ವರ್ಗದವರ ಪರವಾಗಿದೆ ಎಂಬುದರಲ್ಲಿ ಸಂಶಯವೇ ಇಲ್ಲ.

ರಾಜ್ಯದಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಬಡವರ ವಿರೋಧಿ ಎಂದು ತಿರುಗಾಡುತ್ತಿರುವ ಸಿದ್ದರಾಮಯ್ಯನವರು 3500 ರೈತರು ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರೂ ಸುಮ್ಮನಿದ್ದಾರೆ.

ಆದರೆ ಕೇಂದ್ರ ಸರ್ಕಾರ ಮಾತ್ರ, ಮುಂಗಾರು ಉತ್ಪನ್ನದ ಕನಿಷ್ಠ ಬೆಂಬಲ ಬೆಲೆಯನ್ನು 1.5 ಪಟ್ಟು ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಆ ಮೂಲಕ ಮಾರುಕಟ್ಟೆಗೆ ಫಸಲು ಒಯ್ದ ರೈತ ಬರುವಾಗ ಕೈತುಂಬ ಹಣ ತರುವಂತೆ ಮಾಡಿದ್ದಾರೆ. ಬೆಳೆದ ರೈತರಿಗೆ ಬೆಲೆಯೂ ಸಿಕ್ಕರೆ ಇನ್ನೇನು ಬೇಕು?

ಇನ್ನು ಜಗತ್ತಿನ ಅತಿದೊಡ್ಡ ಆರೋಗ್ಯ ಭದ್ರತಾ ಯೋಜನೆಯಾದ ಆಯುಷ್ಮಾನ ಭವ ಯೋಜನೆ ಜಾರಿಗೆ ಹಣ ಬಿಡುಗಡೆ ಮಾಡುವ ಮೂಲಕ ದೇಶದ 10 ಕೋಟಿ ಕುಟುಂಬಗಳು, 50 ಕೋಟಿ ಜನ ಆಸ್ಪತ್ರೆಗಳಲ್ಲಿ 5 ಲಕ್ಷ ರೂ. ಮೌಲ್ಯದವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಕೆಟ್ಟರೆ ಲಕ್ಷ ಲಕ್ಷ ಸಾಲವಾಗುತ್ತಿತ್ತು. ಆದರೆ ಈಗ ಕೇಂದ್ರ ಸರ್ಕಾರ ಅದನ್ನು ತಪ್ಪಿಸಿ ಆರೋಗ್ಯ ಭದ್ರತೆ ಒದಗಿಸಿದ್ದಾರೆ.

ಇನ್ನು ಗ್ರಾಮೀಣ ರೈತರು ಕೃಷಿಯಲ್ಲಿ ತಲ್ಲೀನರಾದರೆ, ಮಗ ಡಿಗ್ರಿ ಮುಗಿಸಿ ಮನೆಯಲ್ಲಿ ಕೂತಿರುತ್ತಾನೆ. ಆತ ನಗರಕ್ಕೆ ಹೋಗಿ ಸಂಬಳಕ್ಕೆ ಕೈಚಾಚದೆ ಸ್ವಂತ ಉದ್ಯಮ ಕೈಗೊಳ್ಳಲು ಸಹ ಕೇಂದ್ರ ಸರ್ಕಾರ ಮುಂದಾಗಿದೆ. ಸಣ್ಣ ಉದ್ಯಮ ಕೈಗೊಳ್ಳಲು ಇದ್ದ ಕಾರ್ಪೋರೇಟ್ ತೆರಿಗೆ ಕಡಿತಗೊಳಿಸುವ ಮೂಲಕ ಹಳ್ಳಿ ಹೈಕಳೂ ಉದ್ಯಮಿಗಳಾಗಲು ಪ್ರೋತ್ಸಾಹ ನೀಡಿದ್ದಾರೆ.

ಇವುಗಳ ಜತೆಗೆ ದೇಶದ ಲಕ್ಷ ಗ್ರಾಪಂಗಳಿಗೆ ವೈಫೈ ಸೌಲಭ್ಯ, 2 ಕೋಟಿ ಶೌಚಾಲಯ ನಿರ್ಮಾಣ ಗುರಿ, ಸರಕಾರಿ ನೌಕರರಿಗೆ ಶೇ.40ರಷ್ಟು ಸ್ಟಾಂಡರ್ಡ್ ಡಿಡಕ್ಷನ್, ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಕಡಿತ ಸೇರಿ ನೂರಾರು ಯೋಜನೆಗಳು ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವಂತೆ ಮಾಡಿದ್ದಾರೆ. ಈಗ ಹೇಳಿ ಕೇಂದ್ರ ಸರ್ಕಾರ ಸೂಟು ಬೂಟಿನ ಸರ್ಕಾರವಾ?

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
ವಿಶಾಲ್ ಗೌಡ ಕುಶಾಲನಗರ December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
ವಿಶಾಲ್ ಗೌಡ ಕುಶಾಲನಗರ December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search