• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕಿತು, ಆದರೂ ದಲಿತ ನಾಯಕರ ಬಾಯಿಗೆ ಬೀಗ ಬಿತ್ತು, ಏಕೆ?

TNN Correspondent Posted On February 2, 2018
0


0
Shares
  • Share On Facebook
  • Tweet It

ಬೀದರ್ ನ ದಲಿತ ಬಾಲಕಿಯ ಅತ್ಯಾಚಾರ, ಕೊಲೆಯಾದರೂ ಯಾವೊಬ್ಬ ದಲಿತ ಮುಖಂಡರು, ಜಿಗ್ನೇಶ್ ಮೇವಾನಿ ಸೊಲ್ಲೆತ್ತಲಿಲ್ಲ. ಏಕೆಂದರೆ ಕೊಂದವ ಮುಸ್ಲಿಂ? ಈಗ ಇಂಥಾದ್ದೇ ಒಂದು ಪ್ರಕರಣ ಉತ್ತರ ಪ್ರದೇಶದಲ್ಲಿ ಸುದ್ದಿಯಾಗಿದ್ದು, ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕರೂ, ದಲಿತರ ಪರರು, ಜೀವಪರರು ನ್ಯಾಯ ಕೇಳುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಗಧಿ ಖಂಡಾರಿ ಎಂಬ ಪ್ರದೇಶದಲ್ಲಿ ಮುಸ್ಲಿಮರು ಹಾಗೂ ದಲಿತರು ಜಾಸ್ತಿಯಿದ್ದು, ಇತ್ತೀಚೆಗೆ ಮುಸ್ಲಿಮರು ದಲಿತರ ವಿರುದ್ಧ ಹಲ್ಲು ಮಸಿಯುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದವು. ಅದಕ್ಕೆ ಸಾಕ್ಷಿಯಾಗಿ ಅಮಿತ್ ಕುಮಾರ್ ಗೌತಮ್ (27) ಎಂಬ ದಲಿತ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಮಸೀದಿ ಬಳಿ ಶವಪತ್ತೆಯಾಗಿದೆ.

ಮುಸ್ಲಿಮರೇ ಈ ಕೃತ್ಯ ಎಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಲಂ, ಸದ್ದಾಂ, ಖಾಲಿದ್, ಸುಕೇಲ್ ಹಾಗೂ ಆಶು ಎಂಬ ಐವರು ಮುಸ್ಲಿಂ ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಇಡೀ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ರಾತ್ರಿ ಮನೆಯಿಂದ ಹೊರಗಡೆ ಹೋಗಿದ್ದ ಮಗ ತಡರಾತ್ರಿಯಾದರೂ ಬಾರದ ಕಾರಣ ಕಂಗಾಲಾದ ಕುಟುಂಬಸ್ಥರು ಹುಡುಕಾಡಿದರೂ ಅಮಿತ್ ಸಿಕ್ಕಿರಲಿಲ್ಲ. ಆದರೆ ಬೆಳಗ್ಗೆ 7 ಗಂಟೆ ಸುಮಾರಿಗೆ ಜನ ಸುತ್ತಾಡುತ್ತಲೇ ಮಸೀದಿ ಬಳಿ ಅಮಿತ್ ಶವವಾಗಿ ಪತ್ತೆಯಾಗಿದ್ದಾರೆ. ಬಳಿಕ ಮುಸ್ಲಿಂ ಯುವಕರ ಮೇಲೆ ಅನುಮಾನಗೊಂಡಿರುವ ಪೋಷಕರು ದೂರು ನೀಡಿದ್ದು, ಪೊಲೀಸರು ಸದ್ದಾಂ ಹಾಗೂ ಆಲಂ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಒಂದೆಡೆ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ, ಇನ್ನೊಂದೆಡೆ ದಲಿತರ ಹತ್ಯೆಯಾಗುತ್ತಿದ್ದರೂ ಬಾಯಿ ಬಿಡದ ದಲಿತ ಮುಖಂಡರು, ಜಾತ್ಯತೀತರು, ಜೀವಪರರು ಎಲ್ಲಿ ಅಡಗಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಯಾರೂ ಸೊಲ್ಲೆತ್ತುತ್ತಿಲ್ಲ. ಎಂಥ ಇಬ್ಬಂದಿತನ ಅಲ್ಲವಾ?

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search