• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಆಗಮನಕ್ಕೆ ಅರಮನೆ ಮೈದಾನ ಸಜ್ಜು, ಸರ್ಕಾರದ ತಂತ್ರ ನುಜ್ಜು ನುಜ್ಜು!

TNN Correspondent Posted On February 2, 2018
0


0
Shares
  • Share On Facebook
  • Tweet It

ಬೆಂಗಳೂರು: ಜನವರಿ 25ರಂದು ರಾಜ್ಯಕ್ಕೆ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಂದ್ ಮಾಡಿಸಿ ಉಪಟಳ ಮಾಡಿದರೂ ಅಪಾರ ಜನ ಸೇರಿ ರಾಜ್ಯ ಸರ್ಕಾರಕ್ಕೆ ಮುಖಭಂಗ ಮಾಡಿದ ಬೆನ್ನಲ್ಲೇ, ಫೆ.4ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಅರಮನೆ ಮೈದಾನ ಸಜ್ಜಾಗಿದೆ.

ಭಾನುವಾರ ಅರಮನೆ ಮೈದಾನದಲ್ಲಿ ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮೋದಿ ಆಗಮಿಸಲಿದ್ದು, ರಾಜ್ಯ ಬಿಜೆಪಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಂತಿಮ ಹಂತ ತಲುಪಿದೆ.

ಬಂದ್ ನಡುವೆಯೇ ಜನಸಾಗರ

ಮೋದಿ ಆಗಮನದ ಹಿನ್ನೆಲೆಯಲ್ಲಿ ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡಪರ ಸಂಘಟನೆಗಳು ಭಾನುವಾರವೂ ಬಂದ್ ಗೆ ಕರೆ ನೀಡಿದ್ದು, ಇದರ ಹಿಂದೆ ರಾಜ್ಯ ಸರ್ಕಾರದ ಷಡ್ಯಂತ್ರವಿದೆ ಎಂಬ ಆರೋಪವಿದೆ. ಆದರೆ ಇದಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಬಂದ್ ಇದ್ದರೂ ಸುಮಾರು 4 ಲಕ್ಷ ಜನರನ್ನು ಒಗ್ಗೂಡಿಸುವ ಯೋಜನೆ ರೂಪಿಸಿದೆ. ನಿರೀಕ್ಷೆಯಷ್ಟು ಜನ ಬಂದರೆ ಅಲ್ಲಿಗೆ ಸರ್ಕಾರಕ್ಕೆ ಮತ್ತೊಂದು ಮುಖಭಂಗವಾದಂತೆಯೇ ಸರಿ.

ರಾಜ್ಯ ಸರ್ಕಾರಕ್ಕೇಕೆ ನಡುಕ?

ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೋಡಿ ದೇಶದ ಹಲವು ವಿಧಾನಸಭೆ ಚುನಾವಣೆಗಳಲ್ಲಿ ಮೋಡಿ ಮಾಡಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಎಲ್ಲಿ ಈ ಜೋಡಿ ಕರ್ನಾಟಕದಲ್ಲಿ ಯಶಸ್ವಿಯಾಗಿ ರ್ಯಾಲಿ ಮಾಡಿ ಜನರ ಮನಸೆಳೆದರೆ ತಮ್ಮಪಟ್ಟಕ್ಕೆ ಕುತ್ತು ಬರುತ್ತದೆ ಎಂಬ ಭೀತಿಗೊಳಗಾಗಿರುವ ಸಿದ್ದರಾಮಯ್ಯನವರು ಬಂದ್ ನಾಟಕದ ಮೂಲಕ ಇಬ್ಬರನ್ನೂ ಹೆಣೆಯಲು ಮುಂದಾಗಿದ್ದಾರೆ. ಮೈಸೂರಿನಲ್ಲಿ ಜನವರಿ 25ರಂದು ಅಮಿತ್ ಷಾ ಆಗಮನದ ಹಿನ್ನೆಲೆಯಲ್ಲಿ 27ಕ್ಕೆ ನಿಗದಿಯಾಗಿದ್ದ ರಾಜ್ಯ ಬಂದ್ 25ಕ್ಕೇ ನಡೆಯುವಂತೆ ಮಾಡಿದ್ದರು ಸಿಎಂ ಸಿದ್ದರಾಮಯ್ಯ.

ಹೇಗೆ ನಡೆಯುತ್ತಿದೆ ಸಿದ್ಧತೆ?

ರಾಜ್ಯ ಸರ್ಕಾರದ ತಂತ್ರಗಳೆಲ್ಲವನ್ನೂ ಮೀರಿ ಮೋದಿ ಆಗಮಿಸುವ ಸಮಾವೇಶ ಭರ್ಜರಿಯಾಗಿ ನಡೆಸಲು ಬಿಜೆಪಿ ಟೊಂಕಕಟ್ಟಿ ನಿಂತಿದ್ದು, ಸಿದ್ಧತೆ ಕೊನೆ ಹಂತಕ್ಕೆ ಬಂದಿದೆ. 40 ಅಡಿ ಉದ್ದ, 80 ಅಡಿ ಅಗಲ ಹಾಗೂ 20 ಅಡಿ ಎತ್ತರದ ವೇದಿಕೆ ಸಿದ್ಧವಾಗಿದ್ದು, ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ಉಸ್ತುವಾರಿಗೆ 300 ಕಾರ್ಯಕರ್ತರನ್ನೊಳಗೊಂಡ ಭದ್ರತಾ ತಂಡ, ಜನರನ್ನು ಕರೆತರಲು ಸಮಿತಿ, ಪೊಲೀಸ್ ಬಂದೋಬಸ್ತ್, ಪಾರ್ಕಿಂಗ್, ಮಿನಿ ಆಸ್ಪತ್ರೆ, ಊಟ, ನೀರಿನ ವ್ಯವಸ್ಥೆ ಸೇರಿ ಸಕಲ ಸಿದ್ಧತೆ ಮಾಡಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search