• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಆಗಮನಕ್ಕೆ ಅರಮನೆ ಮೈದಾನ ಸಜ್ಜು, ಸರ್ಕಾರದ ತಂತ್ರ ನುಜ್ಜು ನುಜ್ಜು!

TNN Correspondent Posted On February 2, 2018
0


0
Shares
  • Share On Facebook
  • Tweet It

ಬೆಂಗಳೂರು: ಜನವರಿ 25ರಂದು ರಾಜ್ಯಕ್ಕೆ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಂದ್ ಮಾಡಿಸಿ ಉಪಟಳ ಮಾಡಿದರೂ ಅಪಾರ ಜನ ಸೇರಿ ರಾಜ್ಯ ಸರ್ಕಾರಕ್ಕೆ ಮುಖಭಂಗ ಮಾಡಿದ ಬೆನ್ನಲ್ಲೇ, ಫೆ.4ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಅರಮನೆ ಮೈದಾನ ಸಜ್ಜಾಗಿದೆ.

ಭಾನುವಾರ ಅರಮನೆ ಮೈದಾನದಲ್ಲಿ ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮೋದಿ ಆಗಮಿಸಲಿದ್ದು, ರಾಜ್ಯ ಬಿಜೆಪಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಂತಿಮ ಹಂತ ತಲುಪಿದೆ.

ಬಂದ್ ನಡುವೆಯೇ ಜನಸಾಗರ

ಮೋದಿ ಆಗಮನದ ಹಿನ್ನೆಲೆಯಲ್ಲಿ ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡಪರ ಸಂಘಟನೆಗಳು ಭಾನುವಾರವೂ ಬಂದ್ ಗೆ ಕರೆ ನೀಡಿದ್ದು, ಇದರ ಹಿಂದೆ ರಾಜ್ಯ ಸರ್ಕಾರದ ಷಡ್ಯಂತ್ರವಿದೆ ಎಂಬ ಆರೋಪವಿದೆ. ಆದರೆ ಇದಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಬಂದ್ ಇದ್ದರೂ ಸುಮಾರು 4 ಲಕ್ಷ ಜನರನ್ನು ಒಗ್ಗೂಡಿಸುವ ಯೋಜನೆ ರೂಪಿಸಿದೆ. ನಿರೀಕ್ಷೆಯಷ್ಟು ಜನ ಬಂದರೆ ಅಲ್ಲಿಗೆ ಸರ್ಕಾರಕ್ಕೆ ಮತ್ತೊಂದು ಮುಖಭಂಗವಾದಂತೆಯೇ ಸರಿ.

ರಾಜ್ಯ ಸರ್ಕಾರಕ್ಕೇಕೆ ನಡುಕ?

ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೋಡಿ ದೇಶದ ಹಲವು ವಿಧಾನಸಭೆ ಚುನಾವಣೆಗಳಲ್ಲಿ ಮೋಡಿ ಮಾಡಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಎಲ್ಲಿ ಈ ಜೋಡಿ ಕರ್ನಾಟಕದಲ್ಲಿ ಯಶಸ್ವಿಯಾಗಿ ರ್ಯಾಲಿ ಮಾಡಿ ಜನರ ಮನಸೆಳೆದರೆ ತಮ್ಮಪಟ್ಟಕ್ಕೆ ಕುತ್ತು ಬರುತ್ತದೆ ಎಂಬ ಭೀತಿಗೊಳಗಾಗಿರುವ ಸಿದ್ದರಾಮಯ್ಯನವರು ಬಂದ್ ನಾಟಕದ ಮೂಲಕ ಇಬ್ಬರನ್ನೂ ಹೆಣೆಯಲು ಮುಂದಾಗಿದ್ದಾರೆ. ಮೈಸೂರಿನಲ್ಲಿ ಜನವರಿ 25ರಂದು ಅಮಿತ್ ಷಾ ಆಗಮನದ ಹಿನ್ನೆಲೆಯಲ್ಲಿ 27ಕ್ಕೆ ನಿಗದಿಯಾಗಿದ್ದ ರಾಜ್ಯ ಬಂದ್ 25ಕ್ಕೇ ನಡೆಯುವಂತೆ ಮಾಡಿದ್ದರು ಸಿಎಂ ಸಿದ್ದರಾಮಯ್ಯ.

ಹೇಗೆ ನಡೆಯುತ್ತಿದೆ ಸಿದ್ಧತೆ?

ರಾಜ್ಯ ಸರ್ಕಾರದ ತಂತ್ರಗಳೆಲ್ಲವನ್ನೂ ಮೀರಿ ಮೋದಿ ಆಗಮಿಸುವ ಸಮಾವೇಶ ಭರ್ಜರಿಯಾಗಿ ನಡೆಸಲು ಬಿಜೆಪಿ ಟೊಂಕಕಟ್ಟಿ ನಿಂತಿದ್ದು, ಸಿದ್ಧತೆ ಕೊನೆ ಹಂತಕ್ಕೆ ಬಂದಿದೆ. 40 ಅಡಿ ಉದ್ದ, 80 ಅಡಿ ಅಗಲ ಹಾಗೂ 20 ಅಡಿ ಎತ್ತರದ ವೇದಿಕೆ ಸಿದ್ಧವಾಗಿದ್ದು, ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ಉಸ್ತುವಾರಿಗೆ 300 ಕಾರ್ಯಕರ್ತರನ್ನೊಳಗೊಂಡ ಭದ್ರತಾ ತಂಡ, ಜನರನ್ನು ಕರೆತರಲು ಸಮಿತಿ, ಪೊಲೀಸ್ ಬಂದೋಬಸ್ತ್, ಪಾರ್ಕಿಂಗ್, ಮಿನಿ ಆಸ್ಪತ್ರೆ, ಊಟ, ನೀರಿನ ವ್ಯವಸ್ಥೆ ಸೇರಿ ಸಕಲ ಸಿದ್ಧತೆ ಮಾಡಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search