• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಆಗಮನಕ್ಕೆ ಅರಮನೆ ಮೈದಾನ ಸಜ್ಜು, ಸರ್ಕಾರದ ತಂತ್ರ ನುಜ್ಜು ನುಜ್ಜು!

TNN Correspondent Posted On February 2, 2018
0


0
Shares
  • Share On Facebook
  • Tweet It

ಬೆಂಗಳೂರು: ಜನವರಿ 25ರಂದು ರಾಜ್ಯಕ್ಕೆ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಂದ್ ಮಾಡಿಸಿ ಉಪಟಳ ಮಾಡಿದರೂ ಅಪಾರ ಜನ ಸೇರಿ ರಾಜ್ಯ ಸರ್ಕಾರಕ್ಕೆ ಮುಖಭಂಗ ಮಾಡಿದ ಬೆನ್ನಲ್ಲೇ, ಫೆ.4ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಅರಮನೆ ಮೈದಾನ ಸಜ್ಜಾಗಿದೆ.

ಭಾನುವಾರ ಅರಮನೆ ಮೈದಾನದಲ್ಲಿ ನಡೆಯುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮೋದಿ ಆಗಮಿಸಲಿದ್ದು, ರಾಜ್ಯ ಬಿಜೆಪಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಂತಿಮ ಹಂತ ತಲುಪಿದೆ.

ಬಂದ್ ನಡುವೆಯೇ ಜನಸಾಗರ

ಮೋದಿ ಆಗಮನದ ಹಿನ್ನೆಲೆಯಲ್ಲಿ ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡಪರ ಸಂಘಟನೆಗಳು ಭಾನುವಾರವೂ ಬಂದ್ ಗೆ ಕರೆ ನೀಡಿದ್ದು, ಇದರ ಹಿಂದೆ ರಾಜ್ಯ ಸರ್ಕಾರದ ಷಡ್ಯಂತ್ರವಿದೆ ಎಂಬ ಆರೋಪವಿದೆ. ಆದರೆ ಇದಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಬಂದ್ ಇದ್ದರೂ ಸುಮಾರು 4 ಲಕ್ಷ ಜನರನ್ನು ಒಗ್ಗೂಡಿಸುವ ಯೋಜನೆ ರೂಪಿಸಿದೆ. ನಿರೀಕ್ಷೆಯಷ್ಟು ಜನ ಬಂದರೆ ಅಲ್ಲಿಗೆ ಸರ್ಕಾರಕ್ಕೆ ಮತ್ತೊಂದು ಮುಖಭಂಗವಾದಂತೆಯೇ ಸರಿ.

ರಾಜ್ಯ ಸರ್ಕಾರಕ್ಕೇಕೆ ನಡುಕ?

ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೋಡಿ ದೇಶದ ಹಲವು ವಿಧಾನಸಭೆ ಚುನಾವಣೆಗಳಲ್ಲಿ ಮೋಡಿ ಮಾಡಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಎಲ್ಲಿ ಈ ಜೋಡಿ ಕರ್ನಾಟಕದಲ್ಲಿ ಯಶಸ್ವಿಯಾಗಿ ರ್ಯಾಲಿ ಮಾಡಿ ಜನರ ಮನಸೆಳೆದರೆ ತಮ್ಮಪಟ್ಟಕ್ಕೆ ಕುತ್ತು ಬರುತ್ತದೆ ಎಂಬ ಭೀತಿಗೊಳಗಾಗಿರುವ ಸಿದ್ದರಾಮಯ್ಯನವರು ಬಂದ್ ನಾಟಕದ ಮೂಲಕ ಇಬ್ಬರನ್ನೂ ಹೆಣೆಯಲು ಮುಂದಾಗಿದ್ದಾರೆ. ಮೈಸೂರಿನಲ್ಲಿ ಜನವರಿ 25ರಂದು ಅಮಿತ್ ಷಾ ಆಗಮನದ ಹಿನ್ನೆಲೆಯಲ್ಲಿ 27ಕ್ಕೆ ನಿಗದಿಯಾಗಿದ್ದ ರಾಜ್ಯ ಬಂದ್ 25ಕ್ಕೇ ನಡೆಯುವಂತೆ ಮಾಡಿದ್ದರು ಸಿಎಂ ಸಿದ್ದರಾಮಯ್ಯ.

ಹೇಗೆ ನಡೆಯುತ್ತಿದೆ ಸಿದ್ಧತೆ?

ರಾಜ್ಯ ಸರ್ಕಾರದ ತಂತ್ರಗಳೆಲ್ಲವನ್ನೂ ಮೀರಿ ಮೋದಿ ಆಗಮಿಸುವ ಸಮಾವೇಶ ಭರ್ಜರಿಯಾಗಿ ನಡೆಸಲು ಬಿಜೆಪಿ ಟೊಂಕಕಟ್ಟಿ ನಿಂತಿದ್ದು, ಸಿದ್ಧತೆ ಕೊನೆ ಹಂತಕ್ಕೆ ಬಂದಿದೆ. 40 ಅಡಿ ಉದ್ದ, 80 ಅಡಿ ಅಗಲ ಹಾಗೂ 20 ಅಡಿ ಎತ್ತರದ ವೇದಿಕೆ ಸಿದ್ಧವಾಗಿದ್ದು, ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ಉಸ್ತುವಾರಿಗೆ 300 ಕಾರ್ಯಕರ್ತರನ್ನೊಳಗೊಂಡ ಭದ್ರತಾ ತಂಡ, ಜನರನ್ನು ಕರೆತರಲು ಸಮಿತಿ, ಪೊಲೀಸ್ ಬಂದೋಬಸ್ತ್, ಪಾರ್ಕಿಂಗ್, ಮಿನಿ ಆಸ್ಪತ್ರೆ, ಊಟ, ನೀರಿನ ವ್ಯವಸ್ಥೆ ಸೇರಿ ಸಕಲ ಸಿದ್ಧತೆ ಮಾಡಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search