• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚಂಪಾ, ನರೇಂದ್ರ ಮೋದಿ ಕರ್ನಾಟಕಕಕ್ಕೆ ಬಂದರೆ ನಿಮ್ಮದ್ಯಾಕೀ ರಂಪ?

ನವೀನ್ ಶೆಟ್ಟಿ ಮಂಗಳೂರು Posted On February 2, 2018


  • Share On Facebook
  • Tweet It

ಚಂದ್ರಶೇಖರ್ ಪಾಟೀಲ್ ಎನ್ನುವುದಕ್ಕಿಂತ ಅವರು ಚಂಪಾ ಎಂದೇ ಪರಿಚಿತ. ಮೊದಲು ಸಾಹಿತಿಯಾಗಿದ್ದ (ಈಗಲೂ ಎಲ್ಲ ಆಮಂತ್ರಣ ಪತ್ರಿಕೆಗಳಲ್ಲಿ ಹಿರಿಯ ಸಾಹಿತಿ ಎಂದೇ ಮುದ್ರಣವಾಗುತ್ತದೆ) ಅವರು ಈಗ ರಾಜಕಾರಣಿಗಳ ಹಾಗೆ ಹೇಳಿಕೆ ಶುರು ಮಾಡಿದ್ದಾರೆ.

ಹಾಗೆ ನೋಡಿದರೆ ಚಂಪಾ ಸಾಹಿತ್ಯ ಕ್ಷೇತ್ರದಿಂದ ಅಧಿಕೃತವಾಗಿ ನಿವೃತ್ತಿ ಪಡೆದಿಲ್ಲ, ಹಾಗಂತ ಅವರು ಸಾಹಿತ್ಯ ಕೃಷಿಯಲ್ಲೂ ತೊಡಗಿಲ್ಲ. ಅವರ ಇತ್ತೀಚಿನ ಕೃತಿ ಯಾವುದು? ಯಾವ ಪುಸ್ತಕ ಬರೆದರು? ಅವರ ಯಾವ ಪುಸ್ತಕ ಮಾಧ್ಯಮಗಳಲ್ಲಿ ಚರ್ಚೆಯಾಯಿತು? ಯಾವ ಲೇಖನ ಒರೆಗೆ ಹಚ್ಚಿತು? ಯಾವ ಹೋರಾಟದ ಮುಂದಾಳತ್ವ ಪಡೆದು ಕನ್ನಡ ನಾಡು, ನುಡಿ ಪರ ನಿಂತರು?

ಹೂಂ, ಹೂಂ. ಯಾವುದೂ ಇಲ್ಲ. ಪೆನ್ನು ಕೆಳಗಿಟ್ಟು ಚಂಪಾ ತುಂಬ ದಿನ ಆಯಿತೇನೋ ಎನ್ನುವಷ್ಟರ ಮಟ್ಟಿಗೆ ಅವರು ಸಾಹಿತ್ಯದಿಂದ ದೂರವೇ ಉಳಿದಿದ್ದಾರೆ. ಆದರೂ ಚಂಪಾ ಹಿರಿಯ ಸಾಹಿತಿ.

ಇಂತಿಪ್ಪ ಚಂಪಾ, ಈಗ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಅದೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವ ಮೂಲಕ ಸುದ್ದಿಯಾಗಿದ್ದಾರೆ. ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬರುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ವಕ್ತಾರರಂತೆ ಮಾತನಾಡಿ ಸುದ್ದಿಯಾಗಿದ್ದಾರೆ.

ಅಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದರೆ ಚಂಪಾ ಅವರಿಗೇಕೆ ತ್ರಾಸ? ಮಹದಾಯಿ ಹೋರಾಟದಲ್ಲಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಚಂಪಾ ಸಿದ್ದರಾಮಯ್ಯನವರ ವಿರುದ್ಧ ಸೊಲ್ಲೆತ್ತಿದರಾ? ಇವರಿಗೇಕೆ ಈ ಇಬ್ಬಂದಿತನ?

ಖಂಡಿತವಾಗಿಯೂ ಕನ್ನಡ ನಾಡಿನ, ಅದರಲ್ಲೂ ಉತ್ತರ ಕರ್ನಾಟಕದ ಜನರಿಗೆ ಮಹದಾಯಿ ನೀರು ಸಿಗಬೇಕು ಎಂಬುದು ಎಲ್ಲರ ಅಭಿಪ್ರಾಯ ಹಾಗೂ ಒತ್ತಾಸೆ. ಈ ವಿಚಾರದಲ್ಲಿ ಮೋದಿ ಅವರೂ ಮಧ್ಯಸ್ಥಿಕೆ ವಹಿಸಬೇಕು ಎಂಬ ಆಗ್ರಹದಲ್ಲಿ ನ್ಯಾಯವಿದೆ.

ಆದರೆ ಚಂದ್ರಶೇಖರ ಪಾಟೀಲರೇ, ನರೇಂದ್ರ ಮೋದಿ ಅವರು ಕರ್ನಾಟಕಕ್ಕೇ ಬರುವ ಅವಶ್ಯಕತೆ ಇಲ್ಲ ಎಂದು ಹೇಳಲು ನಿಮಗೆ ಯಾವ ಹಕ್ಕಿದೆ ಸ್ವಾಮಿ? ಅಷ್ಟಕ್ಕೂ ಮೋದಿ ಅವರು ರಾಜ್ಯಕ್ಕೆ ಮಾಡಿದ ಅನ್ಯಾಯವೇನು? ರಾಜ್ಯ ಬಿಜೆಪಿ ನಾಯಕರು ಗೋವಾ ಸರ್ಕಾರದ ಜತೆ ಮಾತುಕತೆ ನಡೆಸುತ್ತಿಲ್ಲವೇ? ಬಿಜೆಪಿಯವರು ಮಹದಾಯಿ ನೀರು ಬೇಡ ಎಂದಿದ್ದಾರೆಯೇ? ಯಡಿಯೂರಪ್ಪನವರ ಮಾತುಕತೆ ಫಲವಾಗಿಯೇ ಇಂದು ಗೋವಾ ಸರ್ಕಾರ ಕರ್ನಾಟಕಕ್ಕೆ ಕುಡಿಯುಲು ನೀರು ಬಿಡುವುದಾಗಿ ಒಪ್ಪಿಲ್ಲವೇ? ಹಾಗಿದ್ದಮೇಲೆ ಮೋದಿ ಅವರ ವಿರುದ್ಧ ನಿಮ್ಮದೇನು ತಕರಾರು ಸ್ವಾಮಿ?

ಹಾಗೊಂದು ವೇಳೆ ಚಂಪಾ ಅವರಿಗೆ ನಿಜವಾಗಿಯೂ ಮಹದಾಯಿ ನೀರು ಉತ್ತರ ಕರ್ನಾಟಕದ ಜನರಿಗೆ ಬೇಕು ಎಂದಿದ್ದರೆ, ಆ ಕುರಿತು ನಿಜವಾಗಿಯೂ ಕಳಕಳಿ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದರೆ, ಚಂಪಾ ರಾಜ್ಯ ಸರ್ಕಾರದ ವಿರುದ್ಧವೂ ಮಾತನಾಡುತ್ತಿದ್ದರು. ಗೋವಾ ಕಾಂಗ್ರೆಸ್ಸಿಗೂ, ಕರ್ನಾಟಕ ಕಾಂಗ್ರೆಸ್ಸಿಗೂ ಸಂಬಂಧವೇ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಟೀಕೆ ಮಾಡುತ್ತಿದ್ದರು. ಆದರೆ ಅದಾವುದನ್ನೂ ಚಂಪಾ ಮಾಡಿಲ್ಲ.

ಮಹದಾಯಿ ವಿಚಾರದ ಕುರಿತು ಮೋದಿ ಒಂದೂ ಮಾತನಾಡಿಲ್ಲ ಎಂದು ಚಂಪಾ ಹೇಳಿದ್ದಾರಲ್ಲ, ಅದೇ ಈ ವಿಷಯದ ಕುರಿತು ಮಾತನಾಡದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಮಾತನಾಡುವುದಿಲ್ಲವೇಕೆ? ಮಹದಾಯಿ ಕುರಿತು ಮಾತನಾಡದ ಮೋದಿ ಕರ್ನಾಟಕಕ್ಕೆ ಬರುವ ಅವಶ್ಯಕತೆ ಇಲ್ಲ ಎನ್ನುವ ನೀವು, ಗೋವಾ ಕಾಂಗ್ರೆಸ್ಸಿಗೂ ನಮಗೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕರ್ನಾಟಕದಿಂದ ಹೋಗಿ ಎಂದು ಏಕೆ ಒತ್ತಾಯಿಸಲಿಲ್ಲ? ಇದೆಂಥ ಇಬ್ಬಂದಿತನ ಚಂಪಾ ಅವರೇ ನಿಮ್ಮದು? ಮಾಧ್ಯಮಗಳಲ್ಲಿ ನಿಮ್ಮ ವೀಡಿಯೋ, ಚಿತ್ರ ಬರಲಿ ಎಂದು ಹೀಗೆ ಮಾಡುತ್ತಿದ್ದೀರಾ ಅಥವಾ ಮಾನಸಿಕವಾಗಿ ಕಾಂಗ್ರೆಸ್ ಸೇರಿಬಿಟ್ಟಿರಾ? ಹೇಗೆ? ಉತ್ತರಿಸಿ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
ನವೀನ್ ಶೆಟ್ಟಿ ಮಂಗಳೂರು May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
ನವೀನ್ ಶೆಟ್ಟಿ ಮಂಗಳೂರು May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search