• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಹುಡುಗಿಯನ್ನು ಇಷ್ಟಪಟ್ಟಿದ್ದೇ ಆ ಹಿಂದೂವಿನ ಜೀವಕ್ಕೆ ಕುತ್ತು ತಂದಿತು!

TNN Correspondent Posted On February 3, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದೇ, ಆತನ ಬಾಳಿಗೆ ಮುಳುವಾಗಿದ್ದು, ಯುವತಿಯ ಸಂಬಂಧಿಕರೇ ಆತನ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿವೆ.

ಪೂರ್ವ ದೆಹಲಿಯ ಕೈಯಾಲ ಎಂಬಲ್ಲಿ ಮುಸ್ಲಿಂ ಯುವತಿಯನ್ನು ಮನಸಾರೆ ಪ್ರೀತಿಸುತ್ತಿದ್ದ, ಛಾಯಾಗ್ರಾಹಕನಾಗಿದ್ದ 23 ವರ್ಷದ ಅಂಕಿತ್ ಎಂಬಾತನನ್ನು ಯುವತಿಯ ಸಂಬಂಧಿಕರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹಿಂದೂ ಯುವಕನೊಬ್ಬ ತಮ್ಮ ಧರ್ಮದ ಯುವತಿಯನ್ನು ಪ್ರೀತಿಸಿದ ಎಂಬ ದ್ವೇಷಕ್ಕೆ ಹೀಗೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಕಿತ್ ಹಾಗೂ ಶೆಹ್ಜಾದಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಇಬ್ಬರೂ ಮದುವೆಯಾಗಲು ನಿಶ್ಚಿದ್ದರು. ಆದರೆ ಯುವತಿಯ ಕುಟುಂಬಕ್ಕೆ ಇದು ಇಷ್ಟವಿರಲಿಲ್ಲ. ಹಾಗಾಗಿ ಕುಟುಂಬಸ್ಥರೇ ಅಂಕಿತ್ ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ಇದೆ. ಇದೇ ಕಾರಣಕ್ಕಾಗಿಯೇ ಯುವತಿಯ ಕುಟುಂಬದ ಮೂವರನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕುತ್ತಿದ್ದೇವೆ ಎಂದು ಡಿಸಿಪಿ ವಿಜಯ್ ಸಿಂಗ್ ತಿಳಿಸಿದ್ದಾರೆ.

ನನ್ನ ಕುಟುಂಬದವರೇ ಕೊಂದರು ಎಂದ ಯುವತಿ

ನಾನು ಅವನನ್ನು ಭೇಟಿಯಾಗಲು ಹೋಗಬಯಸಿದ್ದೆ. ಆದರೆ ಅಷ್ಟೊತ್ತಿಗಾಗಲೇನನ್ನ ಕುಟುಂಬಸ್ಥರೇ ನಾನು ಮದುವೆಯಾಗಲು ಇಚ್ಛಿಸಿದ ಹುಡುಗನನ್ನು ಕೊಂದಿದ್ದಾರೆ. ನಾವಿಬ್ಬರೂ ಮದುವೆಯಾಗುವ ಕುರಿತು ಚರ್ಚಿಸಿದ ವಿಷಯ ನನ್ನ ಚಿಕ್ಕಪ್ಪನಿಗೆ ಗೊತ್ತಾಗಿದ್ದು, ಆತನೇ ಅಂಕಿತ್ ನನ್ನು ಕೊಂದಿದ್ದಾನೆ. ಈಗ ನನ್ನ ಕುಟುಂಬದ ಬಗ್ಗೆಯೇ ನನಗೆ ಭಯವಾಗುತ್ತಿದೆ ಎಂದು ಶೆಹ್ಜಾದಿ ತಿಳಿಸಿದ್ದಾರೆ.

ಒಂದೆಡೆ ಪ್ರೀತಿ ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಸಿ ಮತಾಂತರವಾದ ಬಳಿಕ ಕೈಬಿಡುತ್ತಿರುವ ಪ್ರಕರಣ ಹಿಂದೂಗಳನ್ನು ಬೆಚ್ಚಿಬೀಳಿಸುತ್ತಿದ್ದರೆ, ಇನ್ನೊಂದೆಡೆ ಮನಸಾರೆ ಪ್ರೀತಿಸಿದ ಹಿಂದೂ ಯುವಕರನ್ನು ಕೊಲ್ಲುತ್ತಿರುವದು ಪ್ರೀತಿಗೆ ಮಾಡುವ ಅವಮಾನವಾಗಿದೆ. ಎರಡೂ ಪ್ರಕರಣಗಳಲ್ಲಿ ನರಳುತ್ತಿರುವುದು ಹಿಂದೂಗಳೇ ಎಂಬುದು ಘೋರ ದುರಂತ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search