• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭೂ ಖರೀದಿಗೆ ಶಾರೂಖ್ ಖಾನ್ ನಕಲಿ ದಾಖಲೆ ಸಲ್ಲಿಕೆ, ಖಾನ್ ಮಾಜಿ ಸಿಎ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ ನೋಡಿ!

TNN Correspondent Posted On February 3, 2018
0


0
Shares
  • Share On Facebook
  • Tweet It

ಮುಂಬೈ: ಮಹಾರಾಷ್ಟ್ರದ ಅಲಿಬಾಗ್ ನಲ್ಲಿ ಕೃಷಿಗೆ ಎಂದು ಭೂಮಿ ಖರೀದಿಸಿ ದೊಡ್ಡದೊಂದು ಬಂಗಲೆ ಕಟ್ಟಿದ ಆರೋಪದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಗೆ ದಿನೇದಿನೆ ಕಂಟಕ ಎದುರಾಗುತ್ತಿದ್ದು, ಆರೋಪ ಸಾಬೀತಾಗುವ ಲಕ್ಷಣ ಗೋಚರಿಸಿವೆ.

ನಿವೇಶನ ಖರೀದಿಸಲು ಶಾರೂಖ್ ನಕಲಿ ದಾಖಲೆ ಸಲ್ಲಿಸಿದ್ದಾರೆ ಎಂದು ಸ್ವತಃ ಖಾನ್ ಅವರ ಮಾಜಿ ಚಾರ್ಟರ್ಡ್ ಅಕೌಂಟಂಟ್ ಮೋರೆಶ್ವರ್ ಅಜ್ ಗಾಂವ್ಕರ್ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪ್ರಕರಣ ಮತ್ತಷ್ಟು ಗಂಭೀರವಾಗುತ್ತಿದೆ.

ಅಷ್ಟೇ ಅಲ್ಲ, ನಾನು ಶಾರೂಖ್ ಆಣತಿಯ ಮೇರೆಗೆ ಅವರ ಜತೆ ಕೆಲಸ ಮಾಡಿದ್ದು, ಸರ್ಕಾರಿ ಕಚೇರಿಗಳ ಮೂಲಕವೇ ಶಾರೂಖ್ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿಸಿದ್ದಾರೆ.

1991ರಲ್ಲಿ ಕೃಷಿಗಾಗಿ ಎಂದು ದಾಖಲೆ ಸಲ್ಲಿಸಿ ಅಲಿಬಾಗ್ ನಲ್ಲಿ ಜಾಗ ಖರೀದಿಸಿದ್ದ ಶಾರೂಖ್ ಖಾನ್, ಅಲ್ಲಿ ದೊಡ್ಡದೊಂದು ಬಂಗಲೆ, ಸ್ವಿಮ್ಮಿಂಗ್ ಪೂಲ್, ಹೆಲಿಪ್ಯಾಡ್ ಹೊಂದಿದ್ದು, 19,960 ಚದುರ ಮೀಟರ್ ಜಾಗ ಖಾಸಗಿಗಾಗಿ ಬಳಸಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಜಾಗದಲ್ಲಿ 1991ಕ್ಕಿಂತಲೂ ಮೊದಲೇ ಬಂಗಲೆ ಇತ್ತು ಎಂದು ಸಾಬೀತುಪಡಿಸಲು ಸಹ ಶಾರೂಖ್ ಖಾನ್ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಆದರೆ ಗೂಗಲ್ ಅರ್ಥ್ ಫೋಟೋಗಳ ಪ್ರಕಾರ 2003ರಲ್ಲೂ ಈ ಜಾಗದಲ್ಲಿ ಬಂಗಲೆ ಇರಲಿಲ್ಲ ಎಂದು ತಿಳಿದುಬಂದಿದೆ. ಆದಾಗ್ಯೂ ಶಾರೂಖ್ ಒಡೆತನದ ದೇಜಾ ವು ಫಾರ್ಮ್ಸ್ ಕಂಪನಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೇ ಜಪ್ತಿ ಮಾಡಿ, ತನಿಖೆ ಮಾಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search