• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭೂ ಖರೀದಿಗೆ ಶಾರೂಖ್ ಖಾನ್ ನಕಲಿ ದಾಖಲೆ ಸಲ್ಲಿಕೆ, ಖಾನ್ ಮಾಜಿ ಸಿಎ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ ನೋಡಿ!

TNN Correspondent Posted On February 3, 2018


  • Share On Facebook
  • Tweet It

ಮುಂಬೈ: ಮಹಾರಾಷ್ಟ್ರದ ಅಲಿಬಾಗ್ ನಲ್ಲಿ ಕೃಷಿಗೆ ಎಂದು ಭೂಮಿ ಖರೀದಿಸಿ ದೊಡ್ಡದೊಂದು ಬಂಗಲೆ ಕಟ್ಟಿದ ಆರೋಪದಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಗೆ ದಿನೇದಿನೆ ಕಂಟಕ ಎದುರಾಗುತ್ತಿದ್ದು, ಆರೋಪ ಸಾಬೀತಾಗುವ ಲಕ್ಷಣ ಗೋಚರಿಸಿವೆ.

ನಿವೇಶನ ಖರೀದಿಸಲು ಶಾರೂಖ್ ನಕಲಿ ದಾಖಲೆ ಸಲ್ಲಿಸಿದ್ದಾರೆ ಎಂದು ಸ್ವತಃ ಖಾನ್ ಅವರ ಮಾಜಿ ಚಾರ್ಟರ್ಡ್ ಅಕೌಂಟಂಟ್ ಮೋರೆಶ್ವರ್ ಅಜ್ ಗಾಂವ್ಕರ್ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪ್ರಕರಣ ಮತ್ತಷ್ಟು ಗಂಭೀರವಾಗುತ್ತಿದೆ.

ಅಷ್ಟೇ ಅಲ್ಲ, ನಾನು ಶಾರೂಖ್ ಆಣತಿಯ ಮೇರೆಗೆ ಅವರ ಜತೆ ಕೆಲಸ ಮಾಡಿದ್ದು, ಸರ್ಕಾರಿ ಕಚೇರಿಗಳ ಮೂಲಕವೇ ಶಾರೂಖ್ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿಸಿದ್ದಾರೆ.

1991ರಲ್ಲಿ ಕೃಷಿಗಾಗಿ ಎಂದು ದಾಖಲೆ ಸಲ್ಲಿಸಿ ಅಲಿಬಾಗ್ ನಲ್ಲಿ ಜಾಗ ಖರೀದಿಸಿದ್ದ ಶಾರೂಖ್ ಖಾನ್, ಅಲ್ಲಿ ದೊಡ್ಡದೊಂದು ಬಂಗಲೆ, ಸ್ವಿಮ್ಮಿಂಗ್ ಪೂಲ್, ಹೆಲಿಪ್ಯಾಡ್ ಹೊಂದಿದ್ದು, 19,960 ಚದುರ ಮೀಟರ್ ಜಾಗ ಖಾಸಗಿಗಾಗಿ ಬಳಸಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಜಾಗದಲ್ಲಿ 1991ಕ್ಕಿಂತಲೂ ಮೊದಲೇ ಬಂಗಲೆ ಇತ್ತು ಎಂದು ಸಾಬೀತುಪಡಿಸಲು ಸಹ ಶಾರೂಖ್ ಖಾನ್ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಆದರೆ ಗೂಗಲ್ ಅರ್ಥ್ ಫೋಟೋಗಳ ಪ್ರಕಾರ 2003ರಲ್ಲೂ ಈ ಜಾಗದಲ್ಲಿ ಬಂಗಲೆ ಇರಲಿಲ್ಲ ಎಂದು ತಿಳಿದುಬಂದಿದೆ. ಆದಾಗ್ಯೂ ಶಾರೂಖ್ ಒಡೆತನದ ದೇಜಾ ವು ಫಾರ್ಮ್ಸ್ ಕಂಪನಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈಗಾಗಲೇ ಜಪ್ತಿ ಮಾಡಿ, ತನಿಖೆ ಮಾಡುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
Tulunadu News June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
Tulunadu News June 8, 2023
Leave A Reply

  • Recent Posts

    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
  • Popular Posts

    • 1
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 2
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 3
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • 4
      ಹೆಣ್ಣು ಕಾಮದ ಸರಕಲ್ಲ!
    • 5
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search