• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೋರಕ್ಷಣೆಗೆ ಮುಂದಾದ ಕೇಂದ್ರ ಸರ್ಕಾರ, 4 ಕೋಟಿ ಗೋವುಗಳಿಗೆ ಆಧಾರ್ ರೀತಿಯ ಗುರುತಿನ ನಂಬರ್!

TNN Correspondent Posted On February 4, 2018


  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಗೋವುಗಳ ರಕ್ಷಣೆಗಾಗಿ ಹಲವು ಯೋಜನೆ ಜಾರಿಗೆ ತರಲು ಮುಂದಾಗಿದ್ದು, ಪ್ರಮುಖವಾಗಿ ಗೋ ಹತ್ಯೆ ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.

ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿರುವ ಕೇಂದ್ರ ಸರ್ಕಾರ ದೇಶದಲ್ಲಿ ಹಾಲು ಕೊಡುವ ಹಸುಗಳಿಗೆ ಆಧಾರ್ ರೀತಿಯ ಸಂಖ್ಯೆ ನೀಡಲು ಮುಂದಾಗಿದೆ. ಅಲ್ಲದೆ ಇದಕ್ಕಾಗಿ ಬಜೆಟ್ ನಲ್ಲಿ 200 ಕೋಟಿ ರೂ. ಮೀಸಲಿಟ್ಟಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 4 ಕೋಟಿ ಹಸುಗಳಿಗೆ ಈ ಸಂಖ್ಯೆ ನೀಡಲು ಯೋಜನೆ ರೂಪಿಸಿದೆ.

2015ರಲ್ಲೇ ಕೇಂದ್ರ ಸರ್ಕಾರ ಗೋವುಗಳಿಗೆ ಆಧಾರ್ ಸಂಖ್ಯೆ ನೀಡಲು ಪ್ರಸ್ತಾಪಿಸಿದ್ದು, ಸದಸ್ಯ ಯೋಜನೆಗೆ ಚಾಲನೆ ನೀಡಲು ಮುಂದಾಗಿದೆ. ಪಶು ಸಂಜೀವಿನಿ ಎಂದು ಯೋಜನೆಗೆ ಹೆಸರಿಟ್ಟಿದ್ದು, ಹಸುವಿನ ವಯಸ್ಸು, ತಳಿ, ಎತ್ತರ, ದೇಹದ ಮೇಲಿರುವ ವಿಶೇಷ ಗುರುತುಗಳು ಸೇರಿ ಹಲವು ಮಾಹಿತಿ ಆಧರಿಸಿ ಆಧಾರ್ ಸಂಖ್ಯೆ ನೀಡಲಾಗುತ್ತದೆ. ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಕೃಷಿ ಸಚಿವಾಲಯ ವಹಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.

ಗೊವುಗಳ ರಕ್ಷಣೆ ಜತೆಗೆ ಕೇಂದ್ರ ಸರ್ಕಾರ ಗೋವುಗಳ ಸಾಕಣೆ ಮಾಡುವ ರೈತರ ಆದಾಯ ಹೆಚ್ಚಿಸಲು ಸಹ ಚಿಂತನೆ ನಡೆಸಿದ್ದು, ಆಧಾರ್ ಸಂಖ್ಯೆಯ ಅನ್ವಯ ಮಾಹಿತಿ ಪಡೆದು, ಗೋವುಗಳ ಹಾಲಿನ ಉತ್ಪಾದನೆ ಜಾಸ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಮೊದಲ ಹಂತದಲ್ಲಿ 4 ಕೋಟಿ ಹಸುಗಳಿಗೆ ಆಧಾರ್ ಕಾರ್ಡ್ ಅಥವಾ ಆಧಾರ್ ನಂಬರ್ ನೀಡಲು 50 ಕೋಟಿ ರೂ. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. 1 ಆಧಾರ್ ಕಾರ್ಡ್ ಗೆ 8-10 ರೂ ಬೇಕು ಎಂದು ಸಹ ಅಂದಾಜಿಸಲಾಗಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search