• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಯುವತಿಯ ಮೇಲೆ ಮುಸ್ಲಿಂ ಯುವಕನ ಅತ್ಯಾಚಾರ, ಬಲವಂತದ ಮತಾಂತರಕ್ಕೆ ಒತ್ತಾಯ ಆರೋಪ

TNN Correspondent Posted On February 5, 2018
0


0
Shares
  • Share On Facebook
  • Tweet It

ದೆಹಲಿ/ಚಂಡೀಗಡ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ ದೆಹಲಿ-ಹರಿಯಾಣ ಗಡಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ದಲಿತ ಯುವತಿಯನ್ನು ಎರಡೂವರೆ ತಿಂಗಳ ಹಿಂದೆ ದಲಿತ ಯುವತಿಯನ್ನು ಅಪಹರಣ ಮಾಡಿದ್ದು, ಈಗ ಯುವತಿಯನ್ನು ರಕ್ಷಿಸಲಾಗಿದೆ.

ಜುನೈದ್ ನಯಾಜ್ ಅನ್ಸಾರಿ ಎಂಬಾತ ಮೈನ್ಪುರಿ ಜಿಲ್ಲೆಯ ಕೊತ್ವಾಲಿ ಎಂಬ ಪ್ರದೇಶದ 22 ವರ್ಷದ ದಲಿತ ಯುವತಿಯನ್ನು ಅಪಹರಿಸಿದ್ದಲ್ಲದೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಲ್ಲಿ ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನನ್ನ ಮಗಳನ್ನು ಅಪಹರಣ ಮಾಡಿ ಅತ್ಯಾಚಾರ ಎಸಗಿದ್ದಲ್ಲದೆ, ಬಲವಂತವಾಗಿ ಮದುವೆ ಹಾಗೂ ಇಸ್ಲಾಮಿಗೆ ಮತಾಂತರಗೊಳಿಸಲು ಜುನೈದ್ ಅನ್ಸಾರಿ ಯತ್ನಿಸಿದ್ದಾನೆ ಎಂದು ಯುವತಿಯ ತಾಯಿ ಆರೋಪಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯಿದೆ, ಅಪಹರಣ ಹಾಗೂ ಅತ್ಯಾಚಾರ ಕಾಯಿದೆಯನ್ವಯ ಜುನೈದ್ ಅನ್ಸಾರಿ ವಿರುದ್ಧ ದೂರು ದಾಖಲಿಸಿದ್ದು, ನ್ಯಾಯಾಲಯ ಆತನನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ನೀಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಕೊತ್ವಾಲಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಧೀರೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ ನಲ್ಲೇ ಯುವತಿಯನ್ನು ಅಪಹರಣ ಮಾಡಿದ್ದು, ಯುವತಿಯ ಗೆಳತಿ ಪಿಂಕಿ ರಾಥೋಡ್ ಎಂಬಾಕೆಯೇ ಅಪಹರಣಕ್ಕೆ ಸಹಕರಿಸಿದ್ದಳು ಎಂದು ಯುವತಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.. ಕೊನೆಗೆ ಪಿಂಕಿ ರಾಥೋಡ್ ಜುನೈದ್ ಅನ್ಸಾರಿಯ ಮೊಬೈಲ್ ನಂಬರ್ ನೀಡಿದ್ದಳು ಎಂದು ತಿಳಿದುಬಂದಿದೆ.

ಒಬ್ಬ ದಲಿತ ಯುವತಿಗೆ ಇಷ್ಟೆಲ್ಲ ಅನ್ಯಾಯವಾಗಿರುವ ಕುರಿತು ಮೇಲ್ನೋಟಕ್ಕೆ ಸಾಬೀತಾದರೂ ಜಿಗ್ನೇಶ್ ಮೇವಾನಿ, ಪ್ರಕಾಶ್ ರೈ ಅವರಂತಹವರು ಸೊಲ್ಲೆತ್ತದಿರುವುದು ದೇಶದ ದುರಂತವೇ ಸರಿ. ಮತ್ತೆ ಇವರೆಲ್ಲ ತಾವು ಜೀವಪರರು ಎಂದು ಪೋಸು ಕೊಡುತ್ತಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search